September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಲ್‌ ಸಿ ಆರ್ ವಿದ್ಯಾಸಂಸ್ಥೆ ಕಕ್ಯಪದವು: ಪದವಿ ವಿಭಾಗದ ಬಿ.ಕಾಂ ನಲ್ಲಿ ವಾಣಿಜ್ಯ ಚಟುವಟಿಕೆ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಡೆಸುತ್ತಿರುವ ಎಲ್ ಸಿ ಆರ್ ಇಂಡಿಯನ್ ಪದವಿ ಕಾಲೇಜು ಇಲ್ಲಿನ ಬಿ.ಕಾಂ ವಿಭಾಗದಲ್ಲಿ ಮಾ.22 ರಂದು ಪದವಿ ವಿದ್ಯಾರ್ಥಿಗಳಿಗೆ ವಾಣಿಜ್ಯ ಚಟುವಟಿಕೆಗಳ ಮೂಲಕ ವಾಣಿಜ್ಯ ನಿರ್ವಹಣಾ ತಂತ್ರಗಳ ಬಗೆಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ವಾಣಿಜ್ಯ ವಿಭಾಗದ ಪದವಿ ವಿದ್ಯಾರ್ಥಿಗಳ “ಇನ್ನೋವೇಟರ್ಸ್” ತಂಡವು ವಿವಿಧ ವಾಣಿಜ್ಯ ಚಟುವಟಿಕೆಗಳನ್ನು ನಡೆಸಿಕೊಟ್ಟರು.

ಹಲವಾರು ನಿರ್ವಹಣಾ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತ ತಂಡಗಳಿಗೆ ಬಹುಮಾನ ನೀಡಲಾಯಿತು.
ಪ್ರಥಮ ಬಿ.ಕಾಂ ವಿಭಾಗದ ವಿದ್ಯಾರ್ಥಿನಿ ಫಾತಿಮತ್ ಸಹ್ಲ ಸ್ವಾಗತಿಸಿ, ಪ್ರಥಮ ಬಿ.ಕಾಂ ವಿಭಾಗದ ವಿದ್ಯಾರ್ಥಿನಿ ನವ್ಯ ವಂದಿಸಿದರು. ದ್ವಿತೀಯ ಬಿ. ಕಾಂ ವಿದ್ಯಾರ್ಥಿನಿ ಸುಪ್ರಿಯಾ ಕಾರ್ಯಕ್ರಮವನ್ನು ನಿರ್ವಹಿಸಿದರು.
ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟಾನ್ ಲೋಬೋ, ಸಂಯೋಜಕರಾದ ಯಶವಂತ್ ಜಿ.ನಾಯಕ್ , ಪದವಿ ವಿಭಾಗದ ಮುಖ್ಯಸ್ಥರಾದ ದೀಕ್ಷಿತಾ ಹಾಗೂ ಉಪನ್ಯಾಸಕ ವೃಂದದ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ಯಶಸ್ವಿಯಾಗಿ ಸಂಪನ್ನಗೊಂಡಿತು.

Related posts

ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷರಾಗಿ ಶ್ರೀನಿವಾಸ್ ರಾವ್ ಆಯ್ಕೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ, ಅಮೆರಿಕ – ನಾರ್ಥ್ ಕೆರೊಲಿನಾ ವಿವಿ ವೈದ್ಯಕೀಯ ವಿದ್ಯಾರ್ಥಿಗಳ ಭೇಟಿ

Suddi Udaya

ಮೇಲಂತಬೆಟ್ಟು ಗ್ರಾಮದ ನಾಗ ಬ್ರಹ್ಮ ಬದಿನಡೆ ಬಳಿಯ ಮನೆ ಹಾನಿ ಹಾಗೂ ಭೂಕುಸಿತ ಪ್ರದೇಶ , ಸವಣಾಲು ಗ್ರಾಮದ ಪಿಲಿಕಲ ರಸ್ತೆ ಭೂಕುಸಿತವಾದ ಪ್ರದೇಶಕ್ಕೆ ಕೇಂದ್ರ ಸರಕಾರದ Ndrf ಮತ್ತು ಜಿಎಸ್ಐ ತಂಡ ಭೇಟಿ

Suddi Udaya

ಜು.3: ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ

Suddi Udaya

ಸೆ.26-27: ಬೆಳ್ತಂಗಡಿಯಲ್ಲಿ ಊದು ಪೂಜೆ ಮತ್ತು ಬೋಳ್ತೆರ್ದ ಪಿಲಿಕುಲೆನ ಅಬ್ಬರದ ನಲಿಕೆ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತರಿಗೆ ಕಾಳುಮೆಣಸಿನ ಸುಧಾರಿತ ತಾಂತ್ರಿಕತೆಗಳ ತರಬೇತಿ ಕಾರ್ಯಕ್ರಮ

Suddi Udaya
error: Content is protected !!