32.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಸೂಪರ್ ಕ್ಯಾರಿ ಟರ್ಬೋ ವಾಹನ ದಲ್ಲಿ ಹಿಂಸಾತ್ಮಕವಾಗಿ 3 ಜಾನುವಾರುಗಳ ಅಕ್ರಮ ಸಾಗಾಟ: ವಾಹನ ಸಹಿತ ಇಬ್ಬರ ಬಂಧನ

ಬೆಳ್ತಂಗಡಿ: ಪೆರ್ಮುಡ ಕಡೆಯಿಂದ ಸೂಪರ್ ಕ್ಯಾರಿ ಟರ್ಬೋ ವಾಹನ ದಲ್ಲಿ ಹಿಂಸಾತ್ಮಕವಾಗಿ 3 ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ‌ಬಂಧಿಸಿ ಜಾನುವಾರುಗಳನ್ನು ವಶಪಡಿಸಿಕೊಂಡ ಪ್ರಕರಣ ಮಾ.22ರಂದು ವರದಿಯಾಗಿದೆ.

ಇಮ್ತೀಯಾಜ್‌ (29 ವರ್ಷ) ತಂದೆ: ಹಸನಬ್ಬ, ವಾಸ: ಕೋರ್ಟ್‌ ರಸ್ತೆ , ಸಂಜಯ ನಗರ,ಬೆಳ್ತಂಗಡಿ ಕಸಬಾ ಗ್ರಾಮ ಮತ್ತು
ರಮ್ಲ @ಆಸೀಪ್‌ ( 26 ವರ್ಷ) ತಂದೆ: ಅಬ್ದುಲ್‌ ರಹಿಮಾನ್‌, ವಾಸ: ಪಾದೆ ಮನೆ, ಪಡಂಗಡಿ ಗ್ರಾಮ, ಬೆಳ್ತಂಗಡಿ ತಾಲೂಕು, ಬಂಧಿತ ಆರೋಪಿಗಳು.
ಘಟನೆ ವಿವರ:
ವೇಣೂರು ಪೊಲೀಸ್‌ ಠಾಣೆಯ ಎಸ್ .ಐ ಶ್ರೀ ಶೈಲ ಡಿ ಮುರುಗೋಡ್‌ ಅವರು ಮಾ.22ರಂದು ಸಿಬ್ಬಂದಿಗಳೊಂದಿಗೆ ರೌಂಡ್ಸ್‌ ಕರ್ತವ್ಯದಲ್ಲಿರುತ್ತಾ ಬೆಳಿಗ್ಗೆ ಸುಮಾರು 11:45 ಕ್ಕೆ ಬೆಳ್ತಂಗಡಿ ತಾಲೂಕು ನಾಲ್ಕೂರು ಗ್ರಾಮದ ಕುಕ್ಕನಡ್ಕ ಎಂಬಲ್ಲಿಗೆ ತಲುಪುವಾಗ ಬಳಂಜ –ಪೆರ್ಮುಡ – ವೇಣೂರು ಸಾರ್ವಜನಿಕ ರಸ್ತೆಯಲ್ಲಿ ಪೆರ್ಮುಡ ಕಡೆಯಿಂದ ಒಂದು ಸೂಪರ್ ಕ್ಯಾರಿ ಟರ್ಬೋ ವಾಹನ ನೋಂದಣಿ ಸಂಖ್ಯೆ ಕೆ ಎ 20 ಎಎ 5887 ನೇ ದನ್ನು ನಿಲ್ಲಿಸಿ ತಪಾಸಣೆ ನಡೆಸುವ ಸಮಯ ಆರೋಪಿತರುಗಳು ಯಾವುದೇ ಪರವಾಣಿಗೆ ಇಲ್ಲದೇ ಅಕ್ರಮವಾಗಿ ಗೋವಧೆ ಮಾಡುವ ಸಲುವಾಗಿ ಹಿಂಸಾತ್ಮಕವಾಗಿ 3 ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದುದ್ದನ್ನು ಪತ್ತೆ ಹಚ್ಚಿ ಸ್ವಾದೀನಪಡಿಸಿದ್ದಾರೆ. ಸ್ವಾಧೀನಪಡಿಸಿದ 3 ಜಾನುವಾರುಗಳ ಅಂದಾಜು ಮೌಲ್ಯ 15 ಸಾವಿರ ಹಾಗೂ ವಾಹನದಅಂದಾಜು ಮೌಲ್ಯ 2 ಲಕ್ಷ ವಾಗಿದೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮುಂಡಾಜೆ ಗ್ರಾ.ಪಂ. ಅಧ್ಯಕ್ಷರಾಗಿ ಗಣೇಶ್ ಬಂಗೇರ, ಉಪಾಧ್ಯಕ್ಷರಾಗಿ ಸುಮಾ ಕೃಷ್ಣಾನಂದ ಆಯ್ಕೆ

Suddi Udaya

ಹೊಕ್ಕಡಿಗೋಳಿಯ ನಿವಾಸಿ ಅಬ್ದುಲ್ ರಹಿಮಾನ್ ನಿಧನ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಭೇಟಿ

Suddi Udaya

ರಾಜ್ಯಮಟ್ಟದ ಕರಾಟೆ ಪಂದ್ಯಕೂಟಕಕ್ಕಿಂಜೆಯ ಮುಹಮ್ಮದ್ ಹುಝೈರ್ ಕುಮಿಟೆಯಲ್ಲಿ ಪ್ರಥಮ

Suddi Udaya

ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘ ಕ್ಯಾಲೆಂಡರ್ ಬಿಡುಗಡೆ.

Suddi Udaya

ಕೊಕ್ರಾಡಿ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿದ ನೆಂಪು ಕಾರ್ಯಕ್ರಮ

Suddi Udaya
error: Content is protected !!