July 24, 2026
Uncategorized

ಸೂಪರ್ ಕ್ಯಾರಿ ಟರ್ಬೋ ವಾಹನ ದಲ್ಲಿ ಹಿಂಸಾತ್ಮಕವಾಗಿ 3 ಜಾನುವಾರುಗಳ ಅಕ್ರಮ ಸಾಗಾಟ: ವಾಹನ ಸಹಿತ ಇಬ್ಬರ ಬಂಧನ

ಬೆಳ್ತಂಗಡಿ: ಪೆರ್ಮುಡ ಕಡೆಯಿಂದ ಸೂಪರ್ ಕ್ಯಾರಿ ಟರ್ಬೋ ವಾಹನ ದಲ್ಲಿ ಹಿಂಸಾತ್ಮಕವಾಗಿ 3 ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ‌ಬಂಧಿಸಿ ಜಾನುವಾರುಗಳನ್ನು ವಶಪಡಿಸಿಕೊಂಡ ಪ್ರಕರಣ ಮಾ.22ರಂದು ವರದಿಯಾಗಿದೆ.

ಇಮ್ತೀಯಾಜ್‌ (29 ವರ್ಷ) ತಂದೆ: ಹಸನಬ್ಬ, ವಾಸ: ಕೋರ್ಟ್‌ ರಸ್ತೆ , ಸಂಜಯ ನಗರ,ಬೆಳ್ತಂಗಡಿ ಕಸಬಾ ಗ್ರಾಮ ಮತ್ತು
ರಮ್ಲ @ಆಸೀಪ್‌ ( 26 ವರ್ಷ) ತಂದೆ: ಅಬ್ದುಲ್‌ ರಹಿಮಾನ್‌, ವಾಸ: ಪಾದೆ ಮನೆ, ಪಡಂಗಡಿ ಗ್ರಾಮ, ಬೆಳ್ತಂಗಡಿ ತಾಲೂಕು, ಬಂಧಿತ ಆರೋಪಿಗಳು.
ಘಟನೆ ವಿವರ:
ವೇಣೂರು ಪೊಲೀಸ್‌ ಠಾಣೆಯ ಎಸ್ .ಐ ಶ್ರೀ ಶೈಲ ಡಿ ಮುರುಗೋಡ್‌ ಅವರು ಮಾ.22ರಂದು ಸಿಬ್ಬಂದಿಗಳೊಂದಿಗೆ ರೌಂಡ್ಸ್‌ ಕರ್ತವ್ಯದಲ್ಲಿರುತ್ತಾ ಬೆಳಿಗ್ಗೆ ಸುಮಾರು 11:45 ಕ್ಕೆ ಬೆಳ್ತಂಗಡಿ ತಾಲೂಕು ನಾಲ್ಕೂರು ಗ್ರಾಮದ ಕುಕ್ಕನಡ್ಕ ಎಂಬಲ್ಲಿಗೆ ತಲುಪುವಾಗ ಬಳಂಜ –ಪೆರ್ಮುಡ – ವೇಣೂರು ಸಾರ್ವಜನಿಕ ರಸ್ತೆಯಲ್ಲಿ ಪೆರ್ಮುಡ ಕಡೆಯಿಂದ ಒಂದು ಸೂಪರ್ ಕ್ಯಾರಿ ಟರ್ಬೋ ವಾಹನ ನೋಂದಣಿ ಸಂಖ್ಯೆ ಕೆ ಎ 20 ಎಎ 5887 ನೇ ದನ್ನು ನಿಲ್ಲಿಸಿ ತಪಾಸಣೆ ನಡೆಸುವ ಸಮಯ ಆರೋಪಿತರುಗಳು ಯಾವುದೇ ಪರವಾಣಿಗೆ ಇಲ್ಲದೇ ಅಕ್ರಮವಾಗಿ ಗೋವಧೆ ಮಾಡುವ ಸಲುವಾಗಿ ಹಿಂಸಾತ್ಮಕವಾಗಿ 3 ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದುದ್ದನ್ನು ಪತ್ತೆ ಹಚ್ಚಿ ಸ್ವಾದೀನಪಡಿಸಿದ್ದಾರೆ. ಸ್ವಾಧೀನಪಡಿಸಿದ 3 ಜಾನುವಾರುಗಳ ಅಂದಾಜು ಮೌಲ್ಯ 15 ಸಾವಿರ ಹಾಗೂ ವಾಹನದಅಂದಾಜು ಮೌಲ್ಯ 2 ಲಕ್ಷ ವಾಗಿದೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ವೇಣೂರು: ಬಜಿರೆಯಲ್ಲಿ ಮನೆಯ ಬಾವಿ ತಡೆಗೋಡೆ ಕುಸಿತ

Suddi Udaya

ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ಗೆ ಪ್ರಥಮ ಸ್ಥಾನ

Suddi Udaya

ಡಿ.15: ಸಾವ್ಯ ದ.ಕ.ಜಿ.ಪಂ. ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಜ್ರ ಮಹೋತ್ಸವ ಸಂಭ್ರಮಾಚರಣೆ

Suddi Udaya

ತೋಟತ್ತಾಡಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ

Suddi Udaya

ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ

Suddi Udaya

ಮಾ.30-ಎ.6: ಬಳಂಜ ಶ್ರೀ ಪಂಚಲಿಂಗೇಶ್ವರ- ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!