23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಸೂಪರ್ ಕ್ಯಾರಿ ಟರ್ಬೋ ವಾಹನ ದಲ್ಲಿ ಹಿಂಸಾತ್ಮಕವಾಗಿ 3 ಜಾನುವಾರುಗಳ ಅಕ್ರಮ ಸಾಗಾಟ: ವಾಹನ ಸಹಿತ ಇಬ್ಬರ ಬಂಧನ

ಬೆಳ್ತಂಗಡಿ: ಪೆರ್ಮುಡ ಕಡೆಯಿಂದ ಸೂಪರ್ ಕ್ಯಾರಿ ಟರ್ಬೋ ವಾಹನ ದಲ್ಲಿ ಹಿಂಸಾತ್ಮಕವಾಗಿ 3 ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ‌ಬಂಧಿಸಿ ಜಾನುವಾರುಗಳನ್ನು ವಶಪಡಿಸಿಕೊಂಡ ಪ್ರಕರಣ ಮಾ.22ರಂದು ವರದಿಯಾಗಿದೆ.

ಇಮ್ತೀಯಾಜ್‌ (29 ವರ್ಷ) ತಂದೆ: ಹಸನಬ್ಬ, ವಾಸ: ಕೋರ್ಟ್‌ ರಸ್ತೆ , ಸಂಜಯ ನಗರ,ಬೆಳ್ತಂಗಡಿ ಕಸಬಾ ಗ್ರಾಮ ಮತ್ತು
ರಮ್ಲ @ಆಸೀಪ್‌ ( 26 ವರ್ಷ) ತಂದೆ: ಅಬ್ದುಲ್‌ ರಹಿಮಾನ್‌, ವಾಸ: ಪಾದೆ ಮನೆ, ಪಡಂಗಡಿ ಗ್ರಾಮ, ಬೆಳ್ತಂಗಡಿ ತಾಲೂಕು, ಬಂಧಿತ ಆರೋಪಿಗಳು.
ಘಟನೆ ವಿವರ:
ವೇಣೂರು ಪೊಲೀಸ್‌ ಠಾಣೆಯ ಎಸ್ .ಐ ಶ್ರೀ ಶೈಲ ಡಿ ಮುರುಗೋಡ್‌ ಅವರು ಮಾ.22ರಂದು ಸಿಬ್ಬಂದಿಗಳೊಂದಿಗೆ ರೌಂಡ್ಸ್‌ ಕರ್ತವ್ಯದಲ್ಲಿರುತ್ತಾ ಬೆಳಿಗ್ಗೆ ಸುಮಾರು 11:45 ಕ್ಕೆ ಬೆಳ್ತಂಗಡಿ ತಾಲೂಕು ನಾಲ್ಕೂರು ಗ್ರಾಮದ ಕುಕ್ಕನಡ್ಕ ಎಂಬಲ್ಲಿಗೆ ತಲುಪುವಾಗ ಬಳಂಜ –ಪೆರ್ಮುಡ – ವೇಣೂರು ಸಾರ್ವಜನಿಕ ರಸ್ತೆಯಲ್ಲಿ ಪೆರ್ಮುಡ ಕಡೆಯಿಂದ ಒಂದು ಸೂಪರ್ ಕ್ಯಾರಿ ಟರ್ಬೋ ವಾಹನ ನೋಂದಣಿ ಸಂಖ್ಯೆ ಕೆ ಎ 20 ಎಎ 5887 ನೇ ದನ್ನು ನಿಲ್ಲಿಸಿ ತಪಾಸಣೆ ನಡೆಸುವ ಸಮಯ ಆರೋಪಿತರುಗಳು ಯಾವುದೇ ಪರವಾಣಿಗೆ ಇಲ್ಲದೇ ಅಕ್ರಮವಾಗಿ ಗೋವಧೆ ಮಾಡುವ ಸಲುವಾಗಿ ಹಿಂಸಾತ್ಮಕವಾಗಿ 3 ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದುದ್ದನ್ನು ಪತ್ತೆ ಹಚ್ಚಿ ಸ್ವಾದೀನಪಡಿಸಿದ್ದಾರೆ. ಸ್ವಾಧೀನಪಡಿಸಿದ 3 ಜಾನುವಾರುಗಳ ಅಂದಾಜು ಮೌಲ್ಯ 15 ಸಾವಿರ ಹಾಗೂ ವಾಹನದಅಂದಾಜು ಮೌಲ್ಯ 2 ಲಕ್ಷ ವಾಗಿದೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘ ಕ್ಯಾಲೆಂಡರ್ ಬಿಡುಗಡೆ.

Suddi Udaya

ಮೈರೋಳ್ತಡ್ಕ ಇದರ ಸಂಯುಕ್ತ ಆಶ್ರಯದಲ್ಲಿ 35ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಗುರುಪೂರ್ಣಿಮಾ ಆಚರಣೆ

Suddi Udaya

ಅಳದಂಗಡಿ: ವಿಶ್ವಾಸ್ ಭಂಡಾರಿ ರವರಿಗೆ ಸನ್ಮಾನ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಅಂಗನವಾಡಿ ಹಾಗೂ ಶಾಲೆಯ 207 ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ

Suddi Udaya

ನಿಡಿಗಲ್ ಹಳೆ ಸೇತುವೆ ಪರಿಸರದಲ್ಲಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ: ದಂಡ ವಸೂಲಿ

Suddi Udaya
error: Content is protected !!