34.3 C
ಪುತ್ತೂರು, ಬೆಳ್ತಂಗಡಿ
March 29, 2025
ಅಭಿನಂದನೆ

ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳು ದುಡಿದ ಕಾರ್ಯಕರ್ತರಿಗೆ, ಮತದಾರರಿಗೆ ಅಭಿನಂದನಾ ಕಾರ್ಯಕ್ರಮ

ಪದ್ಮುಂಜ : ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಮಾ. 22 ರಂದು ಪದ್ಮುಂಜ ಸಹಕಾರಿ ಸಂಘದ ರೈತ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಣಿಯೂರು ಮಹಾ ಶಕ್ತಿಕೇಂದ್ರ ಅಧ್ಯಕ್ಷ ಬಾಲಕೃಷ್ಣ ಗೌಡ ಮುಗೇರಡ್ಕ ವಹಿಸಿದರು .

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜಾ, , ಬೆಳ್ತಂಗಡಿ ಬಿಜೆಪಿಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, , ಕಣಿಯೂರು ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಮಹೇಶ್ ಕೋಟ್ಯಾನ್ ಜೆಂಕ್ಯಾರ್, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಪದ್ಮಂಜ ಸಹಕಾರಿ ಸಂಘದ ಉಪಾಧ್ಯಕ್ಷ ಅಶೋಕ್ ಪಿ.ಪಾಂಜಾಳ, ನಿರ್ದೇಶಕರಾದ ನಾರಾಯಣ ಗೌಡ, ಉದಯ ಭಟ್ ಕೆ., ಡೀಕಯ್ಯ ಗೌಡ, ಶೀಲಾವತಿ, ಉದಯ ಬಿ.ಕೆ, ದಿನೇಶ್ ನಾಯ್ಕ, ಶಾರಾದ ಆರ್ ರೈ., ಪ್ರಭಾಕರ ಗೌಡ, ಪ್ರಸಾದ್ ಎ‌. ಹಾಗೂ ಚಂದನ್ ಕುಮಾರ್ , ಪಕ್ಷದ ಪ್ರಮುಖರು, ಮತದಾರರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸೀತರಾಮ ಮಡಿವಾಳ, ಪಿಲಿಗೂಡು ಹಾಗೂ ಬುಳೇರಿ ಮುರ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಅಭಿನಂದನೆ ಸಲ್ಲಿಸಲಾಯಿತು.

ಪೂರ್ವಿ ವಂದೆ ಮಾತರಂ ಗೀತೆ ಹಾಡಿದರು. ಅಧ್ಯಕ್ಷ ರಕ್ಷಿತ್ ಪಣೆಕ್ಕರ ಸ್ವಾಗತಿಸಿ, ಯತೀಶ್ ಶೆಟ್ಟಿ ಪಣೆಕ್ಕರ ನಿರೂಪಿಸಿದರು.

Related posts

ಹೊಕ್ಕಾಡಿ ಗೋಳಿ ಅಂಗನವಾಡಿ ಸಹಾಯಕಿ ಲಲಿತ ಪೂಜಾರಿಗೆ ಸನ್ಮಾನ

Suddi Udaya

ಅನನ್ಯ ಪೈ, ಗೇರುಕಟ್ಟೆ ಹುಟ್ಟುಹಬ್ಬ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮಧ್ಯಂತರ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ಸ್ಮಿತೇಶ್ ಎಸ್ ಬಾರ್ಯರವರಿಗೆ ರಾಜ್ಯ ಯುವ ಪ್ರಶಸ್ತಿ – 2025

Suddi Udaya

ಉಜಿರೆ: 1ವರ್ಷ 8 ತಿಂಗಳಿನ ವೇದ್ಯ ಶ್ರೀಶಾಸ್ತ ರವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್

Suddi Udaya

ಜೆಸಿಯಲ್ಲಿ 20 ವರ್ಷ ಸೇವೆ ಸಲ್ಲಿಸಿದ ಬೆಳ್ತಂಗಡಿ ಕಿರಣ್ ಕುಮಾರ್ ಶೆಟ್ಟಿ ರಿಗೆ ಸನ್ಮಾನ

Suddi Udaya
error: Content is protected !!