July 23, 2026
ಅಭಿನಂದನೆ

ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳು ದುಡಿದ ಕಾರ್ಯಕರ್ತರಿಗೆ, ಮತದಾರರಿಗೆ ಅಭಿನಂದನಾ ಕಾರ್ಯಕ್ರಮ

ಪದ್ಮುಂಜ : ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಮಾ. 22 ರಂದು ಪದ್ಮುಂಜ ಸಹಕಾರಿ ಸಂಘದ ರೈತ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಣಿಯೂರು ಮಹಾ ಶಕ್ತಿಕೇಂದ್ರ ಅಧ್ಯಕ್ಷ ಬಾಲಕೃಷ್ಣ ಗೌಡ ಮುಗೇರಡ್ಕ ವಹಿಸಿದರು .

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜಾ, , ಬೆಳ್ತಂಗಡಿ ಬಿಜೆಪಿಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, , ಕಣಿಯೂರು ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಮಹೇಶ್ ಕೋಟ್ಯಾನ್ ಜೆಂಕ್ಯಾರ್, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಪದ್ಮಂಜ ಸಹಕಾರಿ ಸಂಘದ ಉಪಾಧ್ಯಕ್ಷ ಅಶೋಕ್ ಪಿ.ಪಾಂಜಾಳ, ನಿರ್ದೇಶಕರಾದ ನಾರಾಯಣ ಗೌಡ, ಉದಯ ಭಟ್ ಕೆ., ಡೀಕಯ್ಯ ಗೌಡ, ಶೀಲಾವತಿ, ಉದಯ ಬಿ.ಕೆ, ದಿನೇಶ್ ನಾಯ್ಕ, ಶಾರಾದ ಆರ್ ರೈ., ಪ್ರಭಾಕರ ಗೌಡ, ಪ್ರಸಾದ್ ಎ‌. ಹಾಗೂ ಚಂದನ್ ಕುಮಾರ್ , ಪಕ್ಷದ ಪ್ರಮುಖರು, ಮತದಾರರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸೀತರಾಮ ಮಡಿವಾಳ, ಪಿಲಿಗೂಡು ಹಾಗೂ ಬುಳೇರಿ ಮುರ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಅಭಿನಂದನೆ ಸಲ್ಲಿಸಲಾಯಿತು.

ಪೂರ್ವಿ ವಂದೆ ಮಾತರಂ ಗೀತೆ ಹಾಡಿದರು. ಅಧ್ಯಕ್ಷ ರಕ್ಷಿತ್ ಪಣೆಕ್ಕರ ಸ್ವಾಗತಿಸಿ, ಯತೀಶ್ ಶೆಟ್ಟಿ ಪಣೆಕ್ಕರ ನಿರೂಪಿಸಿದರು.

Related posts

ಬಂದಾರು: ಮೈರೋಳ್ತಡ್ಕ-ವಿವೇಕಾನಂದ ನಗರ-ಕುರಾಯ ದೇವಸ್ಥಾನ ಸಂಪರ್ಕ ರಸ್ತೆ ಮರು ಡಾಮರೀಕರಣ-ಶಾಸಕರಿಗೆ ಗ್ರಾಮಸ್ಥರ ಕೃತಜ್ಞತೆ

Suddi Udaya

ಶ್ರೀ ಶಾರದಾಂಭ ಭಜನಾ ಮಂಡಳಿಯಿಂದ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಪಡೆದ ಸಂಜನಾ ಪೈ ಗೆ ಸನ್ಮಾನ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಗಳಿಸಿದ ಕೌಶಿಕ್ ಶೆಟ್ಟಿಯವರಿಗೆ ಸನ್ಮಾನ

Suddi Udaya

ಪಾಲೇದು: ಕೊಲ್ಯೆತ್ತಾರ್ ಕೇಶವ ಪೂಜಾರಿ – ಮಾಲತಿಹಾಗೂ ಮಾಧವ- ವಾರಿಜಾ ದಂಪತಿಗಳ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿಹಬ್ಬದ ಸಂಭ್ರಮ

Suddi Udaya

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6ನೇ ಸ್ಥಾನ ಪಡೆದ ಪ್ರಾಪ್ತಿ ಎಂ ಗೌಡರಿಗೆ ವಾಣಿ ವಿದ್ಯಾಸಂಸ್ಥೆ ವತಿಯಿಂದ ಸನ್ಮಾನ

Suddi Udaya

ಅಂತರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಉಜಿರೆಯ‌ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿ ಪ್ರಥಮ

Suddi Udaya
error: Content is protected !!