23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಂಡಿಂಜೆ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮಸಭೆ

ಅಂಡಿಂಜೆ:ಅಂಡಿಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ವಿಕಲಚೇತನರಿಗಾಗಿ ವಿಶೇಷ ಗ್ರಾಮ ಸಭೆಯನ್ನು ಪಂಚಾಯತ್ ಅಧ್ಯಕ್ಷ ನಿತಿನ್ ಅವರ ಅಧ್ಯಕ್ಷತೆಯಲ್ಲಿ ಮಾ 24 ರಂದು ನಡೆಸಲಾಯಿತು.

ವಿಕಲಚೇತನರ ಸಮಸ್ಯೆಗಳನ್ನು ಆಲಿಸಿ ಬಗೆಹರಿಸುವ ಮಾಹಿತಿಯನ್ನು ತಾಲೂಕು ವಿಕಲಚೇತನರ ಮೇಲ್ವಿಚಾರಕರಾದ ಜೋನ್ ಬ್ಯಾಪ್ಟಿಸ್ಟ್ ಡಿಸೋಜ, ನೀಡಿದರು.

ಸಮುದಾಯ ಆರೋಗ್ಯ ಇಲಾಖೆಯ ಆರೋಗ್ಯ ಅಧಿಕಾರಿ ಶ್ರೀಮತಿ ಕಾವ್ಯರವರು ಗ್ರಾಮೀಣ ಆರೋಗ್ಯದ ಬಗ್ಗೆ ವಿವರಣೆ ಮತ್ತು ಮಾಹಿತಿಗಳನ್ನು ನೀಡಿದರು

ಪಂಚಾಯತ್ ಅಭಿವೃದ್ಧಿ ಆದಿಕಾರಿಯಾದ ರಾಘವೇಂದ್ರ ಪಾಟೀಲ್ ಪಂಚಾಯತ್ ನಿಂದ ವಿಕಲಚೇತನರಿಗೆ ನೀಡುವ ಸೌಲಭ್ಯಗಳ ಬಗ್ಗೆ ವಿವರಣೆಯನ್ನು ನೀಡಿದರು.

ಪಂಚಾಯತ್ ಅಧ್ಯಕ್ಷರಾದ ನಿತಿನ್ ಎಂ ಮಾತನಾಡಿ ಪಂಚಾಯತ್ ವ್ಯಾಪ್ತಿಯ ಎಲ್ಲಾ ವಿಕಲಚೇತನರು ಯಾವುದೇ ಅಂಜಿಕೆಯಿಲ್ಲದೆ ತಮ್ಮ‌ಸಮಸ್ಯೆಗಳನ್ನು ನಮ್ಮೆಲ್ಲರ ಗಮನಕ್ಕೆ ತರಬೇಕು. ಸಂಪೂರ್ಣ ರೀತಿಯಲ್ಲಿ ಎಲ್ಲಾ ಯೋಜನೆಗಳ ಸದುಪಯೋಗ ಪಡೆಯಬೇಕು ಎಂದರು.

ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಶ್ವೇತಾ, ಕಾರ್ಯದರ್ಶಿ ಶ್ರೀಮತಿ ಚಂಪಾ ಮತ್ತು ಪಂಚಾಯತ್ ನ ಎಲ್ಲಾ ಸದಸ್ಯರು, ಆಶಾ ಕಾರ್ಯಕರ್ತೆಯರು ಹಾಗೂ ಪಂಚಾಯತ್ ಸಿಬ್ಬಂದಿ ವರ್ಗದವರು ಸಹಕರಿಸಿದರು.

ಶೀನ ಸ್ವಾಗತಿಸಿ,ಶ್ರೀಮತಿ ಮಮತಾ ವಂದಿಸಿದರು.ಒಟ್ಟು 54 ಜನ ವಿಕಲಚೇತನರು ಸಭೆಯ ಸದುಪಯೋಗ ಪಡೆದುಕೊಂಡರು.

Related posts

ಕಕ್ಕಿಂಜೆ: ಮಸ್ಜಿದುನ್ನೂರ್ ಜುಮ್ಮಾ ಮಸೀದಿ ಹಾಗೂ ನೂರುಲ್ ಇಸ್ಲಾಂ ಮದರಸ ನೂತನ ಆಡಳಿತ ಸಮಿತಿ ರಚನೆ

Suddi Udaya

ನಕಲಿ ಸಹಿ ಮಾಡಿ ಅಕ್ಷರ ದಾಸೋಹ ಮತ್ತು ಎಸ್.ಎಸ್.ಎ. ಖಾತೆಯ ಹಣ ಡ್ರಾ; ಮುಖ್ಯ ಶಿಕ್ಷಕಿಯ ವಿರುದ್ಧ ಎಸ್.ಡಿ.ಎಂ.ಸಿ ಅಧ್ಯಕ್ಷೆ ದೂರು: ಪೋಜ೯ರಿ ಸಹಿ ಮಾಡಿ ಶಾಲೆಯ ಖಾತೆಯಿಂದ ಯಾವತ್ತೂ ಹಣವನ್ನು ಡ್ರಾ ಮಾಡಿರುವುದಿಲ್ಲ : ಮುಖ್ಯ ಶಿಕ್ಷಕಿ ಸ್ಪಷ್ಟನೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಆಶ್ರಯದಲ್ಲಿ ಪ್ರಕಟಿಸಿದ “ಸಿರಿ ಧಾನ್ಯ ಸಿರಿ-ಸರಿ” ಕೃತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಕೊಕ್ಕಡ ಉಪ್ಪಾರಹಳ್ಳದಲ್ಲಿ ದಿಢೀರನೆ ಎದ್ದ ಭೀಕರ ಸುಂಟರ ಗಾಳಿ: ಗಾಳಿಗೆ ಹಾರಿ ಹೋಯಿತು ಹಲವು ಮನೆಗಳ ಹಂಚು, ಶೀಟ್ -ತೋಟಗಳಲ್ಲಿ ಮುರಿದು ಬಿತ್ತು ಅಡಿಕೆ, ತೆಂಗಿನ ಮರಗಳು

Suddi Udaya

ಮಂಗಳೂರಿನ ಎ.ಆರ್.ಎಂ ಕಿಯಾ ಶೋರೂಮ್‌ನಲ್ಲಿ ನೂತನ “ಕಿಯಾ ಸೆಲ್ಟೋಸ್” ಕಾರು ಅನಾವರಣ

Suddi Udaya

ನಡ ಸರ್ಕಾರಿ ಪದವಿಪೂರ್ವ ಕಾಲೇಜು: ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!