July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ: ಇತ್ತೀಚೆಗೆ ಭಾರಿ ಗಾಳಿ , ಮಳೆಗೆ ಕುಸಿತಗೊಂಡ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ: ತಾತ್ಕಾಲಿಕ ಮನೆ ದುರಸ್ತಿಗೆ ನೆರವು

ಅಳದಂಗಡಿ ಸಮೀಪದ ಪಿಲ್ಯ ಎಂಬಲ್ಲಿ ಇತ್ತೀಚೆಗೆ ಭಾರಿ ಗಾಳಿ , ಮಳೆಗೆ ಮನೆಯೊಂದು ಸಂಪೂರ್ಣ ಕುಸಿದಿದ್ದು , ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಸಹಾಯಹಸ್ತ ನೀಡಿ ತಾತ್ಕಾಲಿಕ ಮನೆ ದುರಸ್ತಿಗೆ ನೆರವಾದರು.

ಇತ್ತೀಚೆಗೆ ಅಳದಂಗಡಿ ಸಮೀಪದ ಪಿಲ್ಯದ ವಿಮಲ ಮಡಿವಾಳ ಎಂಬವರ ಮನೆ ತೀವ್ರ ಸ್ವರೂಪದ ಗಾಳಿ ಮಳೆಗೆ ಸಂಪೂರ್ಣ ಕುಸಿದಿತ್ತು. ಈ ಬಗ್ಗೆ ಕಾರ್ಯಪ್ರವೃತರಾದ ಸ್ಥಳೀಯ ಕಾಂಗ್ರೆಸ್ ಪಕ್ಷದ ‌ನಾಯಕ ಸಂತೋಷ್ ಪೂಜಾರಿ ನಿನ್ನಿಕಲ್ಲು ರವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರ ಗಮನ ಸೆಳೆದರು. ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ರಕ್ಷಿತ್ ಶಿವರಾಂ ರವರು ಸಹಾಯಹಸ್ತ ನೀಡಿ , ಸಂತೋಷ್ ನಿನ್ನಿಕಲ್ಲು ರವರ ನೇತೃತ್ವದಲ್ಲಿ ಮನೆ ದುರಸ್ತಿ ಮಾಡಲು ಸೂಚಿಸಿದರು ‌.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ನಾಯಕ , ಉದ್ಯಮಿ ಪ್ರವೀಣ್ ಪೆರ್ನಾಂಡೀಸ್ ಹಳ್ಳಿಮನೆ , ಯುವ ಕಾಂಗ್ರೆಸ್ ಉಪಾಧ್ಯಕ್ಷ ಅರುಣ್ ಲೋಬೋ ಉಪಸ್ಥಿತರಿದ್ದರು.

Related posts

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಎನ್‌ಸಿಸಿ ಮತ್ತು ಭಾರತೀಯ ಸೇವಾದಳ ಉದ್ಘಾಟನೆ

Suddi Udaya

ಉಜಿರೆ: ಶ್ರೀ ಧ. ಮಂ. ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ದಿ| ಅಮ್ಮುಕುಮಾರ್ ರವರಿಗೆ ನುಡಿನಮನ

Suddi Udaya

ಜು.16ರಿಂದ ಧರ್ಮಸ್ಥಳದಲ್ಲಿ 55ನೇ ವರ್ಷದ ಪುರಾಣ ವಾಚನ-ಪ್ರವಚನ

Suddi Udaya

ತಣ್ಣೀರುಪಂತ: ಪಾಲೇದು ಮಹಮ್ಮಾಯಿ ದೇವಿಯ ಅಂಗಾರ ಪೂಜೆ

Suddi Udaya

ಉಜಿರೆ ಅನುಗ್ರಹದಲ್ಲಿ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya
error: Content is protected !!