30.1 C
ಪುತ್ತೂರು, ಬೆಳ್ತಂಗಡಿ
May 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕುಕ್ಕೆ ಲಿಂಗ ವಂಶಸ್ಥರಾದ ಮಲೆಕುಡಿಯ ಜನಾಂಗದವರಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಶಾಶ್ವತ ಮೂಲನಿವಾಸಿ ಸ್ಥಾನಮಾನ ನೀಡುವಂತೆ ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಆಗ್ರಹ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಮಲೆಕುಡಿಯ ಸಮುದಾಯಕ್ಕೆ ಅವಿನಾಭಾವ ಸಂಬಂಧ ಇದೆ. ಕುಕ್ಕೆ ಶ್ರೀ ಕ್ಷೇತ್ರದ ಸ್ಥಾಪನೆಗೆ ಮೂಲ ಕಾರಣೀಭೂತರಾದ ಕುಕ್ಕೆ ಲಿಂಗ ದೈವಿಕ ಪುರುಷರು ಮಲೆಕುಡಿಯ ಜನಾಂಗಕ್ಕೆ ಸೇರಿದವರು. ವ್ಯವಸ್ಥಾಪನಾ ಸಮಿತಿಯಲ್ಲಿ ಮಲೆಕುಡಿಯ ಸಮುದಾಯಕ್ಕೆ ಸ್ಥಾನ ಒದಗಿಸುವ ಪರಂಪರೆ ಇದೆ. ಆದರೆ ಹೊಸ ವ್ಯವಸ್ಥಾಪನಾ ಸಮಿತಿಯಲ್ಲಿ ಸಮುದಾಯದ ಪ್ರತಿನಿಧಿಯವರಿಗೆ ಸ್ಥಾನ ಕಲ್ಪಿಸಲಾಗಿಲ್ಲ ಎಂದು ಮಾಹಿತಿ ಇದೆ.

ಸರ್ಕಾರ ಕೂಡಲೇ ಮರುಪರಿಶೀಲನೆ ಮಾಡಿ ಕ್ಷೇತ್ರದಲ್ಲಿ ಪಾರಂಪರಿಕ ಹಿನ್ನೆಲೆಯಿರುವ ಮೂಲನಿವಾಸಿ ಸಮುದಾಯಕ್ಕೆ ವ್ಯವಸ್ಥಾಪನಾ ಸಮಿತಿಯಲ್ಲಿ ಶಾಶ್ವತ ಪ್ರಾತಿನಿಧ್ಯ ನೀಡುವಂತೆ ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಗಂಗಾಧರ ಗೌಡ ಇವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

Related posts

ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸುವ ಉದ್ದೇಶ ಹಾಗೂ ಆದರ್ಶ ಗಣೇಶೋತ್ಸವದ ಆಚರಣೆ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮಾಹಿತಿ

Suddi Udaya

ಕನ್ಯಾಡಿ ಶ್ರೀ ಗುರುದೇವ ಮಠಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಪಂಜ: ವಲಯ ಅರಣ್ಯಾಧಿಕಾರಿಯಾಗಿ ಬೆಳ್ತಂಗಡಿಯ ಶ್ರೀಮತಿ ಸಂಧ್ಯಾ ಅಧಿಕಾರ ಸ್ವೀಕಾರ

Suddi Udaya

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡ ರವರ ಮನೆಗೆ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪ್ರಮುಖರು ಭೇಟಿ, ಧನಸಹಾಯ ಹಸ್ತಾಂತರ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ -8 ಸ್ಥಾನ, ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಗಳಿಗೆ-4 ಸ್ಥಾನ

Suddi Udaya

ಉಜಿರೆ ಶಾರದಾ ಮಂಟಪದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!