ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಮಲೆಕುಡಿಯರಿಗೆ ಅವಕಾಶ ನೀಡದೆ ಇದ್ದಲ್ಲಿ ಕ್ಷೇತ್ರದಲ್ಲಿ ಚಾಕರಿ ಕೆಲಸ ಮತ್ತು ರಥ ಕಟ್ಟುವ ಕೆಲಸವನ್ನು ನಿಲ್ಲಿಸ ಬೇಕಾದೀತು: ಜಿಲ್ಲಾ ಮಲೆಕುಡಿಯ ಸಂಘ

ಮಲೆಕುಡಿಯ ಸಮುದಾಯ ಕುಕ್ಕೆ ಮತ್ತು ಲಿಂಗ ಎಂಬ ದೈವಿ ಪುರುಷರಿಂದ ಸ್ಥಾಪಿಸಲ್ಪಟ್ಟ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮರಥ ಕಟ್ಟುವುದರಿಂದ ಹಿಡಿದು ಪಂಚ ಪರ್ವ ಸೇವೆಗಳಲ್ಲಿ ಕೂಡ ಮಲೆಕುಡಿಯ ಸಮುದಾಯದವರು ಭಕ್ತಿ ಶ್ರದ್ಧೆಯಿಂದ ಸೇವೆಯನ್ನು ಮಾಡುತ್ತಿದ್ದು. ಪ್ರತಿ ಬಾರಿಯೂ ಮಲೆಕುಡಿಯ ಸಮುದಾಯಕ್ಕೆ ಆಡಳಿತ ಮಂಡಳಿಯಲ್ಲಿ ಒಂದು ಸ್ಥಾನವನ್ನು ನೀಡಲಾಗುತ್ತಿತ್ತು.

ಪ್ರಸ್ತುತ ಮಾನ್ಯ ಉಸ್ತುವಾರಿ ಸಚಿವರು ಶಿಫಾರಸ್ಸು ಮಾಡಿದ ಪಟ್ಟಿಯಲ್ಲಿ ಮಲೆಕುಡಿಯ ಸಮುದಾಯದವರ ಹೆಸರು ಇಲ್ಲದೆ ಇರುವುದು ಆಘಾತವನ್ನುಂಟು ಮಾಡಿದೆ . ಸಂಬಂಧ ಪಟ್ಟ ಇಲಾಖೆ ಮತ್ತು ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಮಲೆಕುಡಿಯ ಸಮುದಾಯದವರಿಗೆ ಒಂದು ಸ್ಥಾನವನ್ನು ಕೊಡಬೇಕು. ಒಂದು ವೇಳೆ ಸಮುದಾಯವನ್ನು ಕಡೆಗಣಿಸಿ ಸರ್ಕಾರ ನಮ್ಮ ಭಾವನೆಗಳಿಗೆ ಘಾಸಿಗೊಳಿಸುವ ಪ್ರಯತ್ನವನ್ನು ಮಾಡಿದರೆ. ಕ್ಷೇತ್ರದಲ್ಲಿ ಸಮುದಾಯ ಚಾಕರಿ ಮಾಡುವುದನ್ನು ನಿಲ್ಲಿಸಿ ದೇವಸ್ಥಾನದ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ಮಾಡಬೇಕಾಗುತ್ತದೆ ಎಂದು ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಹರೀಶ್ ಎಳನೀರ್ ಹಾಗೂ ಪ್ರಧಾನ ಕಾರ್ಯದರ್ಶಿ ಜಯೇಂದ್ರ ನಿಡ್ಲೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya

ಸವಣಾಲು : ಮಂಜದಬೆಟ್ಟು ನಿವಾಸಿ ನಾರಾಯಣ ಆಚಾರ್ಯ ನಿಧನ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಚಂಡಿಕಾಯಾಗ

Suddi Udaya

ಬೆಳ್ತಂಗಡಿ: ಶ್ರೀ ರಾಯರಿಗೆ ಸುಜಿತಾ ಬಂಗೇರರವರಿಂದ ಜಪಸರ ಸಮರ್ಪಣೆ

Suddi Udaya

ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರೂ.45 ಸಾವಿರ ಮೌಲ್ಯದ ಎಂಡಿಎಂಎ ಪತ್ತೆ – ಮೂವರ‌ ಬಂಧನ

Suddi Udaya

ಮೃತದೇಹ ಹೂತು ಹಾಕಿದ ಪ್ರಕರಣ: 17 ನೇ ಗುರುತಿನಲ್ಲಿ ಸಿಗದ ಅಸ್ಥಿಪಂಜರ

Suddi Udaya
error: Content is protected !!