23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಗಮಕ ವಾಚನ

ಬೆಳ್ತಂಗಡಿ ಸರಕಾರಿ ಜೂನಿಯರ್ ಕಾಲೇಜಿನ ಹೈಸ್ಕೂಲ್ ವಿಭಾಗದಲ್ಲಿ 8ನೇ ಮತ್ತು ಒಂಭತ್ತನೇ ತರಗತಿಯ ಮಕ್ಕಳಿಗಾಗಿ 10ನೇ ತರಗತಿಯ ಪಠ್ಯ ಭಾಗ ‘ಕರ್ಣ ಭೇದನ ‘ವನ್ನು ಗಮಕಿ ಮಧೂರು ವಿಷ್ಣು ಪ್ರಸಾದ ಕಲ್ಲೂರಾಯ ವಾಚನ ಮಾಡಿ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ ವ್ಯಾಖ್ಯಾನ ಮಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾಡಿದ ದ.ಕ ಜಿಲ್ಲ ಗಮಕ ಕಲಾಪರಿಷತ್ ಅಧ್ಯಕ್ಷ ಮೋಹನ ಕಲ್ಲೂರಾಯರು ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣ ತರಗತಿಯನ್ನು ತೆಗೆದುಕೊಂಡರು. ಕಾರ್ಯದಕ್ಷತೆ, ಶ್ರದ್ಧೆ, ಶ್ರಮ, ಗುರು ಹಿರಿಯರಲ್ಲಿ ಗೌರವ, ಒಳ್ಳೆಯ ವ್ಯಕ್ತಿತ್ವದ ನಡವಳಿಕೆ, ದೇಶಭಕ್ತಿ, ಪರೋಪಕಾರ ಮೊದಲಾದ ವಿಚಾರಗಳ ಬಗ್ಗೆ ದೃಷ್ಟಾಂತವನ್ನು ನೀಡಿ ಮಕ್ಕಳಿಗೆ ಸತ್ಪ್ರೇರಣೆ ನೀಡಿದರು.

ಶಾಲಾ ಮುಖ್ಯಸ್ಥೆ ಶ್ರೀಮತಿ ಪೂರ್ಣಿಮಾ ಉಪಾಧ್ಯಾಯ ಸ್ವಾಗತಿಸಿ, ಕನ್ನಡ ಅಧ್ಯಾಪಿಕೆ ಪೂರ್ಣಿಮಾ ಕೆ ಕೆ ವಂದಿಸಿದರು . ಪಿ ಟಿ ಟೀಚರ್ ಕುಮುದ ಕಾರ್ಯಕ್ರಮ ನಿರೂಪಿಸಿದರು.

Related posts

ವಲಯ ಮಟ್ಟದ ಪ್ರತಿಭಾ ಕಾರಂಜಿ : ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ವರ್ತಕರಿಂದ ಆಟೋ ಚಾಲಕ ರತ್ನಾಕರ ಗೌಡರ ಕಷ್ಟಕ್ಕೆ ಸಹಾಯ ಹಸ್ತ

Suddi Udaya

ಕರಾಯ – ಇಳಂತಿಲ ರಸ್ತೆಯಲ್ಲಿ ಅಲ್ಲಿ ಅಲ್ಲಿ ಬರೆ ಕುಸಿತ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಸ್ವ ಸಹಾಯ ಸಂಘಗಳಿಗೆ ಸಾಲ ವಿತರಣಾ ಕಾರ್ಯಕ್ರಮ – ಜನಸುರಕ್ಷಾ ಯೋಜನೆಗಳ ಸಂಪೂರ್ಣತಾ ಅಭಿಯಾನ

Suddi Udaya

ಜ.29-ಫೆ.2 : ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಜಾತ್ರೋತ್ಸವ

Suddi Udaya

ಕನ್ಯಾಡಿ : ಹಿಂದೂ ಧಾರ್ಮಿಕ ಸೇವಾ ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya
error: Content is protected !!