25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಚಿತ್ಪಾವನ ಸಂಘಟನೆ ವಾರ್ಷಿಕೋತ್ಸವ

ಮುಂಡಾಜೆ: ಇಲ್ಲಿಯ ಚಿತ್ಪಾವನ ಸಂಘಟನೆಯ ವಾರ್ಷಿಕೋತ್ಸವವು ಸನ್ಯಾಸಿಕಟ್ಟೆ ಶ್ರೀ ಪರಶುರಾಮ ದೇವಸ್ಥಾನದ ಸಭಾಭವನದಲ್ಲಿ ಜರಗಿತು.


ಹಿರಿಯ ಪತ್ರಕರ್ತ, ಯಕ್ಷಗಾನ ಕಲಾವಿದ ಶ್ರೀಕರ ಮರಾಠೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸಂಘಟನೆಗಳು ಬಲಗೊಂಡಾಗ ಸಮುದಾಯದಲ್ಲಿ ಒಗ್ಗಟ್ಟು ಹೆಚ್ಚುತ್ತದೆ. ಪ್ರತಿಭೆಗಳ ಅನಾವರಣಕ್ಕೆ, ಸಾಮಾಜಿಕ ಚಿಂತನೆಯ ದೃಷ್ಟಿಯಲ್ಲಿ ಉತ್ತಮ ಕಾರ್ಯಕ್ರಮಗಳು ಮೂಡಿ ಬರಬೇಕು ಎಂದು ಹೇಳಿದರು.


ಸಂಘಟನೆಯ ಅಧ್ಯಕ್ಷೆ ಸುಷ್ಮಾ ಶಶಾಂಕ ಭಿಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೃಷಿಕ ಸಂತೋಷ ಹೆಬ್ಬಾರ್, ಗೌರವಾಧ್ಯಕ್ಷ ಜಗದೀಶ ಆರ್.ಫಡಕೆ ಉಪಸ್ಥಿತರಿದ್ದರು.

ಸನ್ಮಾನ: ನಾನಾ ರಂಗಗಳಲ್ಲಿ ವಿಶಿಷ್ಟ ಸಾಧನೆಗೈದ ಸಮುದಾಯದ ಕೇಶವ ಫಡಕೆ (ಸಮಾಜ ಸೇವೆ), ಗೋವಿಂದ ಚಿಪಳೂಣಕರ್ (ಧಾರ್ಮಿಕ), ಡಾ. ಅಮಿತ್ ಖಾಡಿಲ್ಕರ್ (ವೈದ್ಯಕೀಯ), ಜ್ಯೋತಿ ದಿವಾಕರ ಚಿಪಳೂಣಕರ್ (ಸಾಮಾಜಿಕ ಸೇವೆ), ಸ್ವಾತಿ ಗೋಖಲೆ ಮತ್ತು ನೀತಾ ಗೋಖಲೆ (ಅಡುಗೆ), ವೆಂಕಟೇಶ ಬೆಂಡೆ (ಪತ್ರಕರ್ತ), ಅರ್ಜುನ್ ಎ. ಹೆಬ್ಬಾರ್ (ಭೂತಾರಾಧನೆ) ಇವರನ್ನು ಗೌರವಿಸಲಾಯಿತು.

ಸಂಘಟನೆಯ ಸದಸ್ಯರಿಂದ ಭಜನೆ, ಚಿತ್ಪಾವನಿ ಭಾಷೆಯ ನಾಟಕ, ಇತ್ಯಾದಿ ಕಾರ್ಯಕ್ರಮಗಳು ನಡೆದವು.

ಕಾರ್ಯದರ್ಶಿ ರಂಗನಾಥ ಹೆಬ್ಬಾರ್ ವರದಿ ವಾಚಿಸಿದರು. ಗೌರವಾಧ್ಯಕ್ಷ ವಾಸುದೇವ ಗೋಖಲೆ ಸ್ವಾಗತಿಸಿದರು.ಚಿತ್ರಾ ಧನಂಜಯ ಭಿಡೆ ಕಾರ್ಯಕ್ರಮ ನಿರೂಪಿಸಿದರು.

Related posts

ನಿಡಿಗಲ್ ನಿವಾಸಿ ಸುನಂದಾದೇವಿ ನಿಧನ

Suddi Udaya

ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆ

Suddi Udaya

ಬೆಳ್ತಂಗಡಿ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನದ ಧಮಾಕ

Suddi Udaya

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಿಗೆ ಷೂ ಎಸೆದ ಪ್ರಕರಣ ತನಿಖೆ ನಡೆಸಿ ಆರೋಪಿಯ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿ: ರಕ್ಷಿತ್ ಶಿವರಾಂ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳಿಯ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!