25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲಗುತ್ತು ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ದೊಂಪದಬಲಿ ಉತ್ಸವ: ಶಾಸಕ ಹರಿಶ್ ಪೂಂಜರಿಂದ ದೈವಕ್ಕೆ ತಲೆಮುಡಿ ಅರ್ಪಣೆ

ಬೆಳ್ತಂಗಡಿ: ಲಾಯಿಲ ಗ್ರಾಮದ ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ ಮಾ 22 ರಂದು ಅಜೆಕಲ ಸ್ಥಾನದ ಬಳಿ ನಡೆಯಿತು. ಸಂಜೆ ಲಾಯಿಲಗುತ್ತುವಿನಿಂದ ದೈವಗಳ ಭಂಡಾರ ಅಜೆಕಲ ಸ್ಥಾನದ ಬಳಿಗೆ ಬಂದು ,ಅಲ್ಲಿ ದೈವಗಳಿಗೆ ದೊಂಪದ ಬಲಿ ನಡೆಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಸೇವಾ ರೂಪವಾಗಿ ಕೊಡಮಣಿತ್ತಾಯ ದೈವಕ್ಕೆ ನೀಡಿದ ತಲೆ ಮುಡಿಯನ್ನು ನಿನ್ನಿಕಲ್ಲು ಬಳಿಯಿಂದ ಮೆರವಣಿಗೆಯಲ್ಲಿ ತರಲಾಯಿತು. ನಂತರ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಸೇರಿದಂತೆ ಊರವರ ಸಮ್ಮುಖದಲ್ಲಿ ದೈವದ ಭಂಡಾರಕ್ಕೆ ಸಮರ್ಪಿಸಲಾಯಿತು. ಈ ವೇಳೆ ಲಾಯಿಲಗುತ್ತು ಚಿತ್ತರಂಜನ್ ಹೆಗ್ಡೆ ಶಾಸಕ ಹರೀಶ್ ಪೂಂಜ ಮತ್ತು ಶಶಿಧರ್ ಶೆಟ್ಟಿಯವರನ್ನು ಗೌರವಿಸಿದರು. ನಂತರ ಕೊಡಮಣಿತ್ತಾಯ ದೈವದ ಹಾಗೂ ಪರಿವಾರ ದೈವಗಳ ದೊಂಪದ ಬಲಿ ಉತ್ಸವ ನಡೆಯಿತು. ಊರಿನ ಪರವೂರಿನ ಸಹಸ್ರಾರು ಮಂದಿ ನೇಮೋತ್ಸವದಲ್ಲಿ ಪಾಲ್ಗೊಂಡು ದೈವದ ಗಂಧ ಪ್ರಸಾದ ಸ್ವೀಕರಿಸಿದರು.

Related posts

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಸಭೆ: ಅಕ್ರಮ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ

Suddi Udaya

ಮುಂಡಾಜೆ ಪ್ರೌಢಶಾಲೆಯ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಿಂದ ದಿ. ಪಿ. ವೆಂಕಟರಮಣ ರವರಿಗೆ ನುಡಿನಮನ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ಸಾಮೂಹಿಕ ಯೋಗ ಶಿವ ನಮಸ್ಕಾರ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya

2 ಲಕ್ಷ ಮೌಲ್ಯ ದ ಚಿನ್ನದ ಬ್ರೇಸ್ ಲೆಟ್ ಮರಳಿಸಿ‌ ಪ್ರಾಮಾಣಿಕತೆ ಮೆರೆದ ಬದ್ಯಾರಿನ ಝೈನುದ್ದೀನ್

Suddi Udaya
error: Content is protected !!