24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲಗುತ್ತು ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ದೊಂಪದಬಲಿ ಉತ್ಸವ: ಶಾಸಕ ಹರಿಶ್ ಪೂಂಜರಿಂದ ದೈವಕ್ಕೆ ತಲೆಮುಡಿ ಅರ್ಪಣೆ

ಬೆಳ್ತಂಗಡಿ: ಲಾಯಿಲ ಗ್ರಾಮದ ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ ಮಾ 22 ರಂದು ಅಜೆಕಲ ಸ್ಥಾನದ ಬಳಿ ನಡೆಯಿತು. ಸಂಜೆ ಲಾಯಿಲಗುತ್ತುವಿನಿಂದ ದೈವಗಳ ಭಂಡಾರ ಅಜೆಕಲ ಸ್ಥಾನದ ಬಳಿಗೆ ಬಂದು ,ಅಲ್ಲಿ ದೈವಗಳಿಗೆ ದೊಂಪದ ಬಲಿ ನಡೆಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಸೇವಾ ರೂಪವಾಗಿ ಕೊಡಮಣಿತ್ತಾಯ ದೈವಕ್ಕೆ ನೀಡಿದ ತಲೆ ಮುಡಿಯನ್ನು ನಿನ್ನಿಕಲ್ಲು ಬಳಿಯಿಂದ ಮೆರವಣಿಗೆಯಲ್ಲಿ ತರಲಾಯಿತು. ನಂತರ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಸೇರಿದಂತೆ ಊರವರ ಸಮ್ಮುಖದಲ್ಲಿ ದೈವದ ಭಂಡಾರಕ್ಕೆ ಸಮರ್ಪಿಸಲಾಯಿತು. ಈ ವೇಳೆ ಲಾಯಿಲಗುತ್ತು ಚಿತ್ತರಂಜನ್ ಹೆಗ್ಡೆ ಶಾಸಕ ಹರೀಶ್ ಪೂಂಜ ಮತ್ತು ಶಶಿಧರ್ ಶೆಟ್ಟಿಯವರನ್ನು ಗೌರವಿಸಿದರು. ನಂತರ ಕೊಡಮಣಿತ್ತಾಯ ದೈವದ ಹಾಗೂ ಪರಿವಾರ ದೈವಗಳ ದೊಂಪದ ಬಲಿ ಉತ್ಸವ ನಡೆಯಿತು. ಊರಿನ ಪರವೂರಿನ ಸಹಸ್ರಾರು ಮಂದಿ ನೇಮೋತ್ಸವದಲ್ಲಿ ಪಾಲ್ಗೊಂಡು ದೈವದ ಗಂಧ ಪ್ರಸಾದ ಸ್ವೀಕರಿಸಿದರು.

Related posts

ನಡ ಸರಕಾರಿ ಪ್ರೌಢ ಶಾಲೆಯಲ್ಲಿ ‘ಗಣಿತ ಸಂಘದ ಉದ್ಘಾಟನೆ’

Suddi Udaya

ಬಂಟ್ವಾಳದಲ್ಲಿ ಸಮರ ಸೌಗಂಧಿಕೆ ತಾಳಮದ್ದಳೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಯಲ್ಲಿ ಸ್ಥಳೀಯ ಗ್ರಾ.ಪಂ. ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಧರ್ಮಸ್ಥಳ ಮಹಾಶಕ್ತಿಕೇಂದ್ರದ ಸಭೆ

Suddi Udaya

ಶಿಶಿಲ: ಸರಕಾರಿ ಮೀಸಲು ಅರಣ್ಯದಿಂದ ಮರಕಳ್ಳತನ ಪ್ರಕರಣ : ಓರ್ವನ ಬಂಧನ

Suddi Udaya
error: Content is protected !!