September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲಗುತ್ತು ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ದೊಂಪದಬಲಿ ಉತ್ಸವ: ಶಾಸಕ ಹರಿಶ್ ಪೂಂಜರಿಂದ ದೈವಕ್ಕೆ ತಲೆಮುಡಿ ಅರ್ಪಣೆ

ಬೆಳ್ತಂಗಡಿ: ಲಾಯಿಲ ಗ್ರಾಮದ ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ ಮಾ 22 ರಂದು ಅಜೆಕಲ ಸ್ಥಾನದ ಬಳಿ ನಡೆಯಿತು. ಸಂಜೆ ಲಾಯಿಲಗುತ್ತುವಿನಿಂದ ದೈವಗಳ ಭಂಡಾರ ಅಜೆಕಲ ಸ್ಥಾನದ ಬಳಿಗೆ ಬಂದು ,ಅಲ್ಲಿ ದೈವಗಳಿಗೆ ದೊಂಪದ ಬಲಿ ನಡೆಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಸೇವಾ ರೂಪವಾಗಿ ಕೊಡಮಣಿತ್ತಾಯ ದೈವಕ್ಕೆ ನೀಡಿದ ತಲೆ ಮುಡಿಯನ್ನು ನಿನ್ನಿಕಲ್ಲು ಬಳಿಯಿಂದ ಮೆರವಣಿಗೆಯಲ್ಲಿ ತರಲಾಯಿತು. ನಂತರ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಸೇರಿದಂತೆ ಊರವರ ಸಮ್ಮುಖದಲ್ಲಿ ದೈವದ ಭಂಡಾರಕ್ಕೆ ಸಮರ್ಪಿಸಲಾಯಿತು. ಈ ವೇಳೆ ಲಾಯಿಲಗುತ್ತು ಚಿತ್ತರಂಜನ್ ಹೆಗ್ಡೆ ಶಾಸಕ ಹರೀಶ್ ಪೂಂಜ ಮತ್ತು ಶಶಿಧರ್ ಶೆಟ್ಟಿಯವರನ್ನು ಗೌರವಿಸಿದರು. ನಂತರ ಕೊಡಮಣಿತ್ತಾಯ ದೈವದ ಹಾಗೂ ಪರಿವಾರ ದೈವಗಳ ದೊಂಪದ ಬಲಿ ಉತ್ಸವ ನಡೆಯಿತು. ಊರಿನ ಪರವೂರಿನ ಸಹಸ್ರಾರು ಮಂದಿ ನೇಮೋತ್ಸವದಲ್ಲಿ ಪಾಲ್ಗೊಂಡು ದೈವದ ಗಂಧ ಪ್ರಸಾದ ಸ್ವೀಕರಿಸಿದರು.

Related posts

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆದ್ರಬೆಟ್ಟು ಶ್ರೀ ಕ್ಷೇತ್ರ ಮಹಮ್ಮಾಯಿ ಮಾರಿಗುಡಿ ಜೀರ್ಣೋದ್ಧಾರದ “ವಿಜ್ಞಾಪನಾ ಪತ್ರ” ಬಿಡುಗಡೆ

Suddi Udaya

ಕೊಯ್ಯೂರು: ‘ಭೀಮ್ ರಮಾ’ ಬಳಗದಿಂದ ಶಾಲೆಗಳಿಗೆ ‘ಸಂವಿಧಾನ ಪೀಠಿಕೆ’ ಹಸ್ತಾಂತರ

Suddi Udaya

ಉಜಿರೆಯಲ್ಲಿ ಸಂಕಷ್ಟಿ ಪ್ರಯುಕ್ತ ತಾಳಮದ್ದಳೆ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಸಾನಿಧ್ಯ ಕ್ರಿಸ್ಮಸ್ ಸಂಭ್ರಮ

Suddi Udaya

ಆ.30: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

Suddi Udaya
error: Content is protected !!