31.3 C
ಪುತ್ತೂರು, ಬೆಳ್ತಂಗಡಿ
March 26, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಂಡಿಂಜೆ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮಸಭೆ

ಅಂಡಿಂಜೆ:ಅಂಡಿಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ವಿಕಲಚೇತನರಿಗಾಗಿ ವಿಶೇಷ ಗ್ರಾಮ ಸಭೆಯನ್ನು ಪಂಚಾಯತ್ ಅಧ್ಯಕ್ಷ ನಿತಿನ್ ಅವರ ಅಧ್ಯಕ್ಷತೆಯಲ್ಲಿ ಮಾ 24 ರಂದು ನಡೆಸಲಾಯಿತು.

ವಿಕಲಚೇತನರ ಸಮಸ್ಯೆಗಳನ್ನು ಆಲಿಸಿ ಬಗೆಹರಿಸುವ ಮಾಹಿತಿಯನ್ನು ತಾಲೂಕು ವಿಕಲಚೇತನರ ಮೇಲ್ವಿಚಾರಕರಾದ ಜೋನ್ ಬ್ಯಾಪ್ಟಿಸ್ಟ್ ಡಿಸೋಜ, ನೀಡಿದರು.

ಸಮುದಾಯ ಆರೋಗ್ಯ ಇಲಾಖೆಯ ಆರೋಗ್ಯ ಅಧಿಕಾರಿ ಶ್ರೀಮತಿ ಕಾವ್ಯರವರು ಗ್ರಾಮೀಣ ಆರೋಗ್ಯದ ಬಗ್ಗೆ ವಿವರಣೆ ಮತ್ತು ಮಾಹಿತಿಗಳನ್ನು ನೀಡಿದರು

ಪಂಚಾಯತ್ ಅಭಿವೃದ್ಧಿ ಆದಿಕಾರಿಯಾದ ರಾಘವೇಂದ್ರ ಪಾಟೀಲ್ ಪಂಚಾಯತ್ ನಿಂದ ವಿಕಲಚೇತನರಿಗೆ ನೀಡುವ ಸೌಲಭ್ಯಗಳ ಬಗ್ಗೆ ವಿವರಣೆಯನ್ನು ನೀಡಿದರು.

ಪಂಚಾಯತ್ ಅಧ್ಯಕ್ಷರಾದ ನಿತಿನ್ ಎಂ ಮಾತನಾಡಿ ಪಂಚಾಯತ್ ವ್ಯಾಪ್ತಿಯ ಎಲ್ಲಾ ವಿಕಲಚೇತನರು ಯಾವುದೇ ಅಂಜಿಕೆಯಿಲ್ಲದೆ ತಮ್ಮ‌ಸಮಸ್ಯೆಗಳನ್ನು ನಮ್ಮೆಲ್ಲರ ಗಮನಕ್ಕೆ ತರಬೇಕು. ಸಂಪೂರ್ಣ ರೀತಿಯಲ್ಲಿ ಎಲ್ಲಾ ಯೋಜನೆಗಳ ಸದುಪಯೋಗ ಪಡೆಯಬೇಕು ಎಂದರು.

ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಶ್ವೇತಾ, ಕಾರ್ಯದರ್ಶಿ ಶ್ರೀಮತಿ ಚಂಪಾ ಮತ್ತು ಪಂಚಾಯತ್ ನ ಎಲ್ಲಾ ಸದಸ್ಯರು, ಆಶಾ ಕಾರ್ಯಕರ್ತೆಯರು ಹಾಗೂ ಪಂಚಾಯತ್ ಸಿಬ್ಬಂದಿ ವರ್ಗದವರು ಸಹಕರಿಸಿದರು.

ಶೀನ ಸ್ವಾಗತಿಸಿ,ಶ್ರೀಮತಿ ಮಮತಾ ವಂದಿಸಿದರು.ಒಟ್ಟು 54 ಜನ ವಿಕಲಚೇತನರು ಸಭೆಯ ಸದುಪಯೋಗ ಪಡೆದುಕೊಂಡರು.

Related posts

ರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಫ್ : 75 ಕೆ.ಜಿ ವಿಭಾಗದಲ್ಲಿ ಹೇಮಚಂದ್ರರಿಗೆ ಕಂಚಿನ‌ ಪದಕ

Suddi Udaya

ತಾಲೂಕಿನಲ್ಲಿ ಗುಡುಗು ಸಹಿತ ಗಾಳಿ ಮಳೆ ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ-ರಸ್ತೆ ಸಂಚಾರ ಅಸ್ತವ್ಯಸ್ತ

Suddi Udaya

ವೇಣೂರು : ವಿದ್ಯುತ್ ತಂತಿ ತಗುಲಿ ಮೂರು ದನಗಳು ಸಾವು

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಉಜಿರೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಚಿನ್ನಾಭರಣ ಪರೀಕ್ಷಕನ ವಜಾ ಪ್ರಕರಣ; ಪ್ರಕರಣದ ನಿಗೂಢತೆಯ ಬಯಲಿಗೆ ಆಗ್ರಹ; ಮಾ.18ರಂದು ಕೊಕ್ಕಡದಲ್ಲಿ ಪ್ರತಿಭಟನೆ

Suddi Udaya
error: Content is protected !!