25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಂಡಿಂಜೆ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮಸಭೆ

ಅಂಡಿಂಜೆ:ಅಂಡಿಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ವಿಕಲಚೇತನರಿಗಾಗಿ ವಿಶೇಷ ಗ್ರಾಮ ಸಭೆಯನ್ನು ಪಂಚಾಯತ್ ಅಧ್ಯಕ್ಷ ನಿತಿನ್ ಅವರ ಅಧ್ಯಕ್ಷತೆಯಲ್ಲಿ ಮಾ 24 ರಂದು ನಡೆಸಲಾಯಿತು.

ವಿಕಲಚೇತನರ ಸಮಸ್ಯೆಗಳನ್ನು ಆಲಿಸಿ ಬಗೆಹರಿಸುವ ಮಾಹಿತಿಯನ್ನು ತಾಲೂಕು ವಿಕಲಚೇತನರ ಮೇಲ್ವಿಚಾರಕರಾದ ಜೋನ್ ಬ್ಯಾಪ್ಟಿಸ್ಟ್ ಡಿಸೋಜ, ನೀಡಿದರು.

ಸಮುದಾಯ ಆರೋಗ್ಯ ಇಲಾಖೆಯ ಆರೋಗ್ಯ ಅಧಿಕಾರಿ ಶ್ರೀಮತಿ ಕಾವ್ಯರವರು ಗ್ರಾಮೀಣ ಆರೋಗ್ಯದ ಬಗ್ಗೆ ವಿವರಣೆ ಮತ್ತು ಮಾಹಿತಿಗಳನ್ನು ನೀಡಿದರು

ಪಂಚಾಯತ್ ಅಭಿವೃದ್ಧಿ ಆದಿಕಾರಿಯಾದ ರಾಘವೇಂದ್ರ ಪಾಟೀಲ್ ಪಂಚಾಯತ್ ನಿಂದ ವಿಕಲಚೇತನರಿಗೆ ನೀಡುವ ಸೌಲಭ್ಯಗಳ ಬಗ್ಗೆ ವಿವರಣೆಯನ್ನು ನೀಡಿದರು.

ಪಂಚಾಯತ್ ಅಧ್ಯಕ್ಷರಾದ ನಿತಿನ್ ಎಂ ಮಾತನಾಡಿ ಪಂಚಾಯತ್ ವ್ಯಾಪ್ತಿಯ ಎಲ್ಲಾ ವಿಕಲಚೇತನರು ಯಾವುದೇ ಅಂಜಿಕೆಯಿಲ್ಲದೆ ತಮ್ಮ‌ಸಮಸ್ಯೆಗಳನ್ನು ನಮ್ಮೆಲ್ಲರ ಗಮನಕ್ಕೆ ತರಬೇಕು. ಸಂಪೂರ್ಣ ರೀತಿಯಲ್ಲಿ ಎಲ್ಲಾ ಯೋಜನೆಗಳ ಸದುಪಯೋಗ ಪಡೆಯಬೇಕು ಎಂದರು.

ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಶ್ವೇತಾ, ಕಾರ್ಯದರ್ಶಿ ಶ್ರೀಮತಿ ಚಂಪಾ ಮತ್ತು ಪಂಚಾಯತ್ ನ ಎಲ್ಲಾ ಸದಸ್ಯರು, ಆಶಾ ಕಾರ್ಯಕರ್ತೆಯರು ಹಾಗೂ ಪಂಚಾಯತ್ ಸಿಬ್ಬಂದಿ ವರ್ಗದವರು ಸಹಕರಿಸಿದರು.

ಶೀನ ಸ್ವಾಗತಿಸಿ,ಶ್ರೀಮತಿ ಮಮತಾ ವಂದಿಸಿದರು.ಒಟ್ಟು 54 ಜನ ವಿಕಲಚೇತನರು ಸಭೆಯ ಸದುಪಯೋಗ ಪಡೆದುಕೊಂಡರು.

Related posts

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಹೆಣ್ಣು ಮಕ್ಕಳಿಗೆ ಅರಿವು ಕಾರ್ಯಕ್ರಮ

Suddi Udaya

ಮುಂಡಾಜೆ: ವಿರಾಟ್ ಹಿಂದೂ ಸೇವಾ ಸಂಘದ ವತಿಯಿಂದ ಅರ್ಹ ಫಲಾನುಭವಿಗಳಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಗೇರುಕಟ್ಟೆ ಶ್ರೀ ಪತಂಜಲಿ ಯೋಗ ಶಿಬಿರದ ಪ್ರಥಮ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಯುವವಾಹಿನಿ ಮಹಿಳಾ ಸಂಚಲನಾ ಸಮಿತಿಯಿಂದ “ಮನಸು “ಅಂತರಾಳದ ಅವಲೋಕನ

Suddi Udaya

ಜ.31-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya
error: Content is protected !!