23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಂಡಿಂಜೆ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮಸಭೆ

ಅಂಡಿಂಜೆ:ಅಂಡಿಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ವಿಕಲಚೇತನರಿಗಾಗಿ ವಿಶೇಷ ಗ್ರಾಮ ಸಭೆಯನ್ನು ಪಂಚಾಯತ್ ಅಧ್ಯಕ್ಷ ನಿತಿನ್ ಅವರ ಅಧ್ಯಕ್ಷತೆಯಲ್ಲಿ ಮಾ 24 ರಂದು ನಡೆಸಲಾಯಿತು.

ವಿಕಲಚೇತನರ ಸಮಸ್ಯೆಗಳನ್ನು ಆಲಿಸಿ ಬಗೆಹರಿಸುವ ಮಾಹಿತಿಯನ್ನು ತಾಲೂಕು ವಿಕಲಚೇತನರ ಮೇಲ್ವಿಚಾರಕರಾದ ಜೋನ್ ಬ್ಯಾಪ್ಟಿಸ್ಟ್ ಡಿಸೋಜ, ನೀಡಿದರು.

ಸಮುದಾಯ ಆರೋಗ್ಯ ಇಲಾಖೆಯ ಆರೋಗ್ಯ ಅಧಿಕಾರಿ ಶ್ರೀಮತಿ ಕಾವ್ಯರವರು ಗ್ರಾಮೀಣ ಆರೋಗ್ಯದ ಬಗ್ಗೆ ವಿವರಣೆ ಮತ್ತು ಮಾಹಿತಿಗಳನ್ನು ನೀಡಿದರು

ಪಂಚಾಯತ್ ಅಭಿವೃದ್ಧಿ ಆದಿಕಾರಿಯಾದ ರಾಘವೇಂದ್ರ ಪಾಟೀಲ್ ಪಂಚಾಯತ್ ನಿಂದ ವಿಕಲಚೇತನರಿಗೆ ನೀಡುವ ಸೌಲಭ್ಯಗಳ ಬಗ್ಗೆ ವಿವರಣೆಯನ್ನು ನೀಡಿದರು.

ಪಂಚಾಯತ್ ಅಧ್ಯಕ್ಷರಾದ ನಿತಿನ್ ಎಂ ಮಾತನಾಡಿ ಪಂಚಾಯತ್ ವ್ಯಾಪ್ತಿಯ ಎಲ್ಲಾ ವಿಕಲಚೇತನರು ಯಾವುದೇ ಅಂಜಿಕೆಯಿಲ್ಲದೆ ತಮ್ಮ‌ಸಮಸ್ಯೆಗಳನ್ನು ನಮ್ಮೆಲ್ಲರ ಗಮನಕ್ಕೆ ತರಬೇಕು. ಸಂಪೂರ್ಣ ರೀತಿಯಲ್ಲಿ ಎಲ್ಲಾ ಯೋಜನೆಗಳ ಸದುಪಯೋಗ ಪಡೆಯಬೇಕು ಎಂದರು.

ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಶ್ವೇತಾ, ಕಾರ್ಯದರ್ಶಿ ಶ್ರೀಮತಿ ಚಂಪಾ ಮತ್ತು ಪಂಚಾಯತ್ ನ ಎಲ್ಲಾ ಸದಸ್ಯರು, ಆಶಾ ಕಾರ್ಯಕರ್ತೆಯರು ಹಾಗೂ ಪಂಚಾಯತ್ ಸಿಬ್ಬಂದಿ ವರ್ಗದವರು ಸಹಕರಿಸಿದರು.

ಶೀನ ಸ್ವಾಗತಿಸಿ,ಶ್ರೀಮತಿ ಮಮತಾ ವಂದಿಸಿದರು.ಒಟ್ಟು 54 ಜನ ವಿಕಲಚೇತನರು ಸಭೆಯ ಸದುಪಯೋಗ ಪಡೆದುಕೊಂಡರು.

Related posts

ಧರ್ಮಸ್ಥಳ: ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಂ.ಆರ್. ಶೇಕ್ ಲತೀಫ್ ನೇಮಕ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿ ರಚನೆ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ ಎಸೋಸಿಯೇಷನ್ ಅಳದಂಗಡಿ ವಲಯದ ವಾರ್ಷಿಕ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಬೆಳ್ತಂಗಡಿ ತಾಲೂಕಿನ ಪರಿಶಿಷ್ಟ ಜಾತಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ: ಹರೀಶ್ ಪೂಂಜ

Suddi Udaya

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

Suddi Udaya
error: Content is protected !!