37.3 C
ಪುತ್ತೂರು, ಬೆಳ್ತಂಗಡಿ
March 26, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಡಿರುದ್ಯಾವರ: ಕುಚ್ಚೂರು ಬೈಲು ನಲ್ಲಿ ದ್ವಿತೀಯ ವರ್ಷದ ನಾಗಪ್ರತಿಷ್ಠೆ ವರ್ಷಾಚರಣೆ

ಕಡಿರುದ್ಯಾವರ: ಇಲ್ಲಿಯ ಕುಚ್ಚೂರು ಬೈಲು ನಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ವನದುರ್ಗಾ ದೇವಿ ದೇವಸ್ಥಾನದ ವಠಾರದಲ್ಲಿ ಮಾ.23 ರಂದು ದ್ವಿತೀಯ ವರ್ಷದ ನಾಗಪ್ರತಿಷ್ಠಾ ವರ್ಷಾಚರಣೆಯನ್ನು ಕಾನರ್ಪ ವಿಕ್ರಂ ಹೊಳ್ಳರವರ ನೇತೃತ್ವದಲ್ಲಿ ನಾಗತಂಬಿಲ ನೆರವೇರಿಸಿದರು.

ಈ ವೇಳೆ ಪ್ರಗತಿಪರ ಕೃಷಿಕ ಶಂಕರ್ ಭಟ್ ಕಾರ್ಯಕ್ರಮವನ್ನು ದೀಪಬೆಳಗಿಸುದರೊಂದಿಗೆ ಶುಭಕೋರಿದರು.

ಶ್ರೀ ವನದುರ್ಗಾ ದೇವಿ ದೇವಸ್ಥಾನದ ಟ್ರಸ್ಟ್ ಅಧ್ಯಕ್ಷೆ ಲೋಕೇಶ್ವರಿ ವಿನಯಚಂದ್ರ ರವರು ಪ್ರಸ್ತಾವಣೆಯೊಂದಿಗೆ ಸ್ವಾಗತಿಸಿದರು.

ಧಾರ್ಮಿಕ ಉಪನ್ಯಾಸವನ್ನು ಉಜಿರೆ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ಸಹಪ್ರಾಧ್ಯಾಪಕರಾದ ದಿವ ಕೊಕ್ಕಡ ರವರು ದೇವರು, ಪ್ರಕೃತಿ ಬಗ್ಗೆ ಅನೇಕ ಉದಾಹರಣೆಗಳೊಂದಿಗೆ ನೀಡಿದರು. ಕು| ರಕ್ಷಿತಾ ಚಂದ್ರಶೇಖರ ಪೂಜಾರಿ, ನವ್ಯ ಕೃಷ್ಣಪ್ಪ ಎಂ.ಕೆ ರವರು ಪ್ರಾರ್ಥಿಸಿ, ಭವಶ್ರೀ ಕೀರ್ತಿ ರಾಜ್ ವಳಂಬ್ರ ಕಾರ್ಯಕ್ರಮ ನಿರೂಪಿಸಿದರು. ದೇವಸ್ಥಾನದ ಟ್ರಸ್ಟ್ ಕಾರ್ಯದರ್ಶಿ ಮಂಜುನಾರ್ಥ ಗೌಡ ಕುಚ್ಚೂರು ವಂದಿಸಿದರು.

ಈ ಸಂದರ್ಭದಲ್ಲಿ ಟ್ರಸ್ಟ್ ನ ಸದಸ್ಯರು, ಮಹಿಳಾ ಘಟಕದ ಸದಸ್ಯರು ಸಹಕರಿಸಿದರು. ಕೂಸಪ್ಪ ಎಂ.ಕೆ ರವರ ನೇತೃತ್ವದಲ್ಲಿ ಭಜನಾ ಕಾರ್ಯಕ್ರಮ ನಡೆಯತು.

Related posts

ಮುಳಿಕ್ಕಾರ್ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಉಮಾನಾಥ್, ಕಾರ್ಯದರ್ಶಿ ಶಾಂಭವಿ ಆಯ್ಕೆ

Suddi Udaya

ಮದ್ದಡ್ಕ: ಸಬರಬೈಲುನಲ್ಲಿ ಹೊಂಡಕ್ಕೆ ಬಿದ್ದ ಲಾರಿ‌

Suddi Udaya

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

Suddi Udaya

ಶಿಶಿಲ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಸಿರಿ ಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಚರ್ಚ್ ಶಾಲೆಯ ವಿದ್ಯಾರ್ಥಿ ಪ್ರೇಕ್ಷಿತ್ ತೃತೀಯ ಸ್ಥಾನ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ

Suddi Udaya
error: Content is protected !!