23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಡಿರುದ್ಯಾವರ: ಕುಚ್ಚೂರು ಬೈಲು ನಲ್ಲಿ ದ್ವಿತೀಯ ವರ್ಷದ ನಾಗಪ್ರತಿಷ್ಠೆ ವರ್ಷಾಚರಣೆ

ಕಡಿರುದ್ಯಾವರ: ಇಲ್ಲಿಯ ಕುಚ್ಚೂರು ಬೈಲು ನಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ವನದುರ್ಗಾ ದೇವಿ ದೇವಸ್ಥಾನದ ವಠಾರದಲ್ಲಿ ಮಾ.23 ರಂದು ದ್ವಿತೀಯ ವರ್ಷದ ನಾಗಪ್ರತಿಷ್ಠಾ ವರ್ಷಾಚರಣೆಯನ್ನು ಕಾನರ್ಪ ವಿಕ್ರಂ ಹೊಳ್ಳರವರ ನೇತೃತ್ವದಲ್ಲಿ ನಾಗತಂಬಿಲ ನೆರವೇರಿಸಿದರು.

ಈ ವೇಳೆ ಪ್ರಗತಿಪರ ಕೃಷಿಕ ಶಂಕರ್ ಭಟ್ ಕಾರ್ಯಕ್ರಮವನ್ನು ದೀಪಬೆಳಗಿಸುದರೊಂದಿಗೆ ಶುಭಕೋರಿದರು.

ಶ್ರೀ ವನದುರ್ಗಾ ದೇವಿ ದೇವಸ್ಥಾನದ ಟ್ರಸ್ಟ್ ಅಧ್ಯಕ್ಷೆ ಲೋಕೇಶ್ವರಿ ವಿನಯಚಂದ್ರ ರವರು ಪ್ರಸ್ತಾವಣೆಯೊಂದಿಗೆ ಸ್ವಾಗತಿಸಿದರು.

ಧಾರ್ಮಿಕ ಉಪನ್ಯಾಸವನ್ನು ಉಜಿರೆ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ಸಹಪ್ರಾಧ್ಯಾಪಕರಾದ ದಿವ ಕೊಕ್ಕಡ ರವರು ದೇವರು, ಪ್ರಕೃತಿ ಬಗ್ಗೆ ಅನೇಕ ಉದಾಹರಣೆಗಳೊಂದಿಗೆ ನೀಡಿದರು. ಕು| ರಕ್ಷಿತಾ ಚಂದ್ರಶೇಖರ ಪೂಜಾರಿ, ನವ್ಯ ಕೃಷ್ಣಪ್ಪ ಎಂ.ಕೆ ರವರು ಪ್ರಾರ್ಥಿಸಿ, ಭವಶ್ರೀ ಕೀರ್ತಿ ರಾಜ್ ವಳಂಬ್ರ ಕಾರ್ಯಕ್ರಮ ನಿರೂಪಿಸಿದರು. ದೇವಸ್ಥಾನದ ಟ್ರಸ್ಟ್ ಕಾರ್ಯದರ್ಶಿ ಮಂಜುನಾರ್ಥ ಗೌಡ ಕುಚ್ಚೂರು ವಂದಿಸಿದರು.

ಈ ಸಂದರ್ಭದಲ್ಲಿ ಟ್ರಸ್ಟ್ ನ ಸದಸ್ಯರು, ಮಹಿಳಾ ಘಟಕದ ಸದಸ್ಯರು ಸಹಕರಿಸಿದರು. ಕೂಸಪ್ಪ ಎಂ.ಕೆ ರವರ ನೇತೃತ್ವದಲ್ಲಿ ಭಜನಾ ಕಾರ್ಯಕ್ರಮ ನಡೆಯತು.

Related posts

ಬ್ರಹ್ಮ ಶ್ರೀ ನಾರಾಯಣ ಗುರುಗಳ 169ನೇ ಜಯಂತಿಯ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿ ಯವರಿಗೆ ಸನ್ಮಾನ

Suddi Udaya

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಕಾಶಿಪಟ್ಣ ಸ.ಪ್ರೌ. ಶಾಲೆಯ ಶಿಕ್ಷಕಿ ಸೌಮ್ಯರವರಿಗೆ 4 ಬೆಳ್ಳಿ ಹಾಗೂ 1 ಕಂಚಿನ ಪದಕ

Suddi Udaya

ಮಹಾಕುಂಭ ಮೇಳದಲ್ಲಿ ಗರ್ಡಾಡಿ, ನಿಟ್ಟಡೆ ಪಡಂಗಡಿ ಶಕ್ತಿ ಕೇಂದ್ರದ ಪ್ರಮುಖ್ ರಿಂದ ಪುಣ್ಯಸ್ನಾನ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ವಾಣಿ ಪ.ಪೂ. ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಂಗಳೂರು ಕ್ಯಾನ್ ಫಿನ್ ಹೋಮ್ಸ್ ಲಿ. ರವರಿಂದ ಬೆಳ್ತಂಗಡಿ ಜೂನಿಯರ್ ಕಾಲೇಜ್ ಗೆ ಅಭೂತಪೂರ್ವ ಕೊಡುಗೆಗಳ ಉದ್ಘಾಟನೆ

Suddi Udaya

ನಿಡ್ಲೆ: ಇನೋವಾ ಕಾರು ಹಾಗೂ ಪೊಲೀಸ್ ವ್ಯಾನ್ ನಡುವೆ ಡಿಕ್ಕಿ

Suddi Udaya
error: Content is protected !!