ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಮಲೆಕುಡಿಯರಿಗೆ ಅವಕಾಶ ನೀಡದೆ ಇದ್ದಲ್ಲಿ ಕ್ಷೇತ್ರದಲ್ಲಿ ಚಾಕರಿ ಕೆಲಸ ಮತ್ತು ರಥ ಕಟ್ಟುವ ಕೆಲಸವನ್ನು ನಿಲ್ಲಿಸ ಬೇಕಾದೀತು: ಜಿಲ್ಲಾ ಮಲೆಕುಡಿಯ ಸಂಘ

ಮಲೆಕುಡಿಯ ಸಮುದಾಯ ಕುಕ್ಕೆ ಮತ್ತು ಲಿಂಗ ಎಂಬ ದೈವಿ ಪುರುಷರಿಂದ ಸ್ಥಾಪಿಸಲ್ಪಟ್ಟ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮರಥ ಕಟ್ಟುವುದರಿಂದ ಹಿಡಿದು ಪಂಚ ಪರ್ವ ಸೇವೆಗಳಲ್ಲಿ ಕೂಡ ಮಲೆಕುಡಿಯ ಸಮುದಾಯದವರು ಭಕ್ತಿ ಶ್ರದ್ಧೆಯಿಂದ ಸೇವೆಯನ್ನು ಮಾಡುತ್ತಿದ್ದು. ಪ್ರತಿ ಬಾರಿಯೂ ಮಲೆಕುಡಿಯ ಸಮುದಾಯಕ್ಕೆ ಆಡಳಿತ ಮಂಡಳಿಯಲ್ಲಿ ಒಂದು ಸ್ಥಾನವನ್ನು ನೀಡಲಾಗುತ್ತಿತ್ತು.

ಪ್ರಸ್ತುತ ಮಾನ್ಯ ಉಸ್ತುವಾರಿ ಸಚಿವರು ಶಿಫಾರಸ್ಸು ಮಾಡಿದ ಪಟ್ಟಿಯಲ್ಲಿ ಮಲೆಕುಡಿಯ ಸಮುದಾಯದವರ ಹೆಸರು ಇಲ್ಲದೆ ಇರುವುದು ಆಘಾತವನ್ನುಂಟು ಮಾಡಿದೆ . ಸಂಬಂಧ ಪಟ್ಟ ಇಲಾಖೆ ಮತ್ತು ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಮಲೆಕುಡಿಯ ಸಮುದಾಯದವರಿಗೆ ಒಂದು ಸ್ಥಾನವನ್ನು ಕೊಡಬೇಕು. ಒಂದು ವೇಳೆ ಸಮುದಾಯವನ್ನು ಕಡೆಗಣಿಸಿ ಸರ್ಕಾರ ನಮ್ಮ ಭಾವನೆಗಳಿಗೆ ಘಾಸಿಗೊಳಿಸುವ ಪ್ರಯತ್ನವನ್ನು ಮಾಡಿದರೆ. ಕ್ಷೇತ್ರದಲ್ಲಿ ಸಮುದಾಯ ಚಾಕರಿ ಮಾಡುವುದನ್ನು ನಿಲ್ಲಿಸಿ ದೇವಸ್ಥಾನದ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ಮಾಡಬೇಕಾಗುತ್ತದೆ ಎಂದು ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಹರೀಶ್ ಎಳನೀರ್ ಹಾಗೂ ಪ್ರಧಾನ ಕಾರ್ಯದರ್ಶಿ ಜಯೇಂದ್ರ ನಿಡ್ಲೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಮೂಡುಕೋಡಿ: ಕೊಪ್ಪದಬಾಕಿಮಾರು ಶ್ರೀ ಸತ್ಯ ಸಾರಮಾನಿ ದೈವಸ್ಥಾನ ಟ್ರಸ್ಟ್ ವತಿಯಿಂದ ದೇಲoಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಮೃತ್ಯುoಜಯ ಹೋಮ

Suddi Udaya

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕೆ.ಪಿ.ಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 4971 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಚಿನ್ನದ ಕರಿಮಣಿ ಸರ ಕಳ್ಳತನ ಪ್ರಕರಣ ಆರೋಪಿ ಉಮೇಶ್ ಗೌಡ ಅಪರಾಧಿಯೆಂದು ತೀರ್ಪು ನೀಡಿದ ನ್ಯಾಯಾಲಯ

Suddi Udaya

ನಾರಾವಿ ಮಂಜುನಗರದಲ್ಲಿ ಇನೋವಾ ಕಾರು ಬೈಕ್ ಗೆ ಡಿಕ್ಕಿ: ಸವಾರ ಭಾಸ್ಕರ ಆಚಾರ್ಯರಿಗೆ ಗಾಯ

Suddi Udaya

ಮಚ್ಚಿನ: ಕುದ್ರಡ್ಕ ಭಜನೋತ್ಸವ-2026 ಕಾರ್ಯಕ್ರಮ

Suddi Udaya
error: Content is protected !!