27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಗಮಕ ವಾಚನ

ಬೆಳ್ತಂಗಡಿ ಸರಕಾರಿ ಜೂನಿಯರ್ ಕಾಲೇಜಿನ ಹೈಸ್ಕೂಲ್ ವಿಭಾಗದಲ್ಲಿ 8ನೇ ಮತ್ತು ಒಂಭತ್ತನೇ ತರಗತಿಯ ಮಕ್ಕಳಿಗಾಗಿ 10ನೇ ತರಗತಿಯ ಪಠ್ಯ ಭಾಗ ‘ಕರ್ಣ ಭೇದನ ‘ವನ್ನು ಗಮಕಿ ಮಧೂರು ವಿಷ್ಣು ಪ್ರಸಾದ ಕಲ್ಲೂರಾಯ ವಾಚನ ಮಾಡಿ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ ವ್ಯಾಖ್ಯಾನ ಮಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾಡಿದ ದ.ಕ ಜಿಲ್ಲ ಗಮಕ ಕಲಾಪರಿಷತ್ ಅಧ್ಯಕ್ಷ ಮೋಹನ ಕಲ್ಲೂರಾಯರು ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣ ತರಗತಿಯನ್ನು ತೆಗೆದುಕೊಂಡರು. ಕಾರ್ಯದಕ್ಷತೆ, ಶ್ರದ್ಧೆ, ಶ್ರಮ, ಗುರು ಹಿರಿಯರಲ್ಲಿ ಗೌರವ, ಒಳ್ಳೆಯ ವ್ಯಕ್ತಿತ್ವದ ನಡವಳಿಕೆ, ದೇಶಭಕ್ತಿ, ಪರೋಪಕಾರ ಮೊದಲಾದ ವಿಚಾರಗಳ ಬಗ್ಗೆ ದೃಷ್ಟಾಂತವನ್ನು ನೀಡಿ ಮಕ್ಕಳಿಗೆ ಸತ್ಪ್ರೇರಣೆ ನೀಡಿದರು.

ಶಾಲಾ ಮುಖ್ಯಸ್ಥೆ ಶ್ರೀಮತಿ ಪೂರ್ಣಿಮಾ ಉಪಾಧ್ಯಾಯ ಸ್ವಾಗತಿಸಿ, ಕನ್ನಡ ಅಧ್ಯಾಪಿಕೆ ಪೂರ್ಣಿಮಾ ಕೆ ಕೆ ವಂದಿಸಿದರು . ಪಿ ಟಿ ಟೀಚರ್ ಕುಮುದ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ವಿಶ್ವ ತಂಬಾಕು ನಿಷೇಧ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಸುರ್ಯ ದಿ. ಪುರಂದರ ಪೂಜಾರಿ ಇವರ ಸ್ಮರಣಾರ್ಥ ಜನಸ್ನೇಹಿ ಕಪ್ : ತಾ| ಮಟ್ಟದ ಪುರುಷರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ: ಸನ್ಮಾನ

Suddi Udaya

ನಿಡ್ಲೆ ಬಸ್ಟ್ ಸ್ಟಾಂಡ್ ಬಳಿ ಸಂಪೂರ್ಣ ಹದಗೆಟ್ಟ ರಸ್ತೆ: ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ಗ್ರಾಮಸ್ಥರು ಒತ್ತಾಯ

Suddi Udaya

ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಇದರ ವಿಸ್ತ್ರತ ಘಟಕ “ಅಗ್ರಿಲೀಫ್ 2.0” ಉದ್ಘಾಟನೆ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಗಳ ತರಬೇತಿ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

Suddi Udaya
error: Content is protected !!