24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಗಮಕ ವಾಚನ

ಬೆಳ್ತಂಗಡಿ ಸರಕಾರಿ ಜೂನಿಯರ್ ಕಾಲೇಜಿನ ಹೈಸ್ಕೂಲ್ ವಿಭಾಗದಲ್ಲಿ 8ನೇ ಮತ್ತು ಒಂಭತ್ತನೇ ತರಗತಿಯ ಮಕ್ಕಳಿಗಾಗಿ 10ನೇ ತರಗತಿಯ ಪಠ್ಯ ಭಾಗ ‘ಕರ್ಣ ಭೇದನ ‘ವನ್ನು ಗಮಕಿ ಮಧೂರು ವಿಷ್ಣು ಪ್ರಸಾದ ಕಲ್ಲೂರಾಯ ವಾಚನ ಮಾಡಿ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ ವ್ಯಾಖ್ಯಾನ ಮಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾಡಿದ ದ.ಕ ಜಿಲ್ಲ ಗಮಕ ಕಲಾಪರಿಷತ್ ಅಧ್ಯಕ್ಷ ಮೋಹನ ಕಲ್ಲೂರಾಯರು ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣ ತರಗತಿಯನ್ನು ತೆಗೆದುಕೊಂಡರು. ಕಾರ್ಯದಕ್ಷತೆ, ಶ್ರದ್ಧೆ, ಶ್ರಮ, ಗುರು ಹಿರಿಯರಲ್ಲಿ ಗೌರವ, ಒಳ್ಳೆಯ ವ್ಯಕ್ತಿತ್ವದ ನಡವಳಿಕೆ, ದೇಶಭಕ್ತಿ, ಪರೋಪಕಾರ ಮೊದಲಾದ ವಿಚಾರಗಳ ಬಗ್ಗೆ ದೃಷ್ಟಾಂತವನ್ನು ನೀಡಿ ಮಕ್ಕಳಿಗೆ ಸತ್ಪ್ರೇರಣೆ ನೀಡಿದರು.

ಶಾಲಾ ಮುಖ್ಯಸ್ಥೆ ಶ್ರೀಮತಿ ಪೂರ್ಣಿಮಾ ಉಪಾಧ್ಯಾಯ ಸ್ವಾಗತಿಸಿ, ಕನ್ನಡ ಅಧ್ಯಾಪಿಕೆ ಪೂರ್ಣಿಮಾ ಕೆ ಕೆ ವಂದಿಸಿದರು . ಪಿ ಟಿ ಟೀಚರ್ ಕುಮುದ ಕಾರ್ಯಕ್ರಮ ನಿರೂಪಿಸಿದರು.

Related posts

ಎ.20: ಧರ್ಮಸ್ಥಳದಲ್ಲಿ ನೂತನ ಕಲ್ಯಾಣ ಮಂಟಪಗಳ ಸಮುಚ್ಚಯ ಉದ್ಘಾಟನೆ

Suddi Udaya

ದ ಕ.ಜಿಲ್ಲೆಗೆ ಸುವರ್ಣ ಕರ್ನಾಟಕ ರಥಯಾತ್ರೆ: ಉಜಿರೆಯಲ್ಲಿ ಸಂಭ್ರಮದ ಸ್ವಾಗತ

Suddi Udaya

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜಾತಿ ವಿಚಾರವನ್ನು ಕೆದಕಿ ಅಪಮಾನಿಸಿರುವುದನ್ನು ಖಂಡಿಸಿ,ರಾಹುಲ್ ಗಾಂಧಿ ಕ್ಷಮೆ ಯಾಚಿಸುವಂತೆ ಆಗ್ರಹಿಸಿ, ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಗೆ ಮನವಿ

Suddi Udaya

ಉಜಿರೆ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ಆರೋಪಿ ಸಯ್ಯದ್ ಬಂಧನ; ಪೋಕ್ಸೋ ಪ್ರಕರಣ ದಾಖಲು

Suddi Udaya

ವಿಧಾನಸಭೆ ಚುನಾವಣೆ ಹಿನ್ನೆಲೆ ವಿವಿಧ ಚೆಕ್ ಪೋಸ್ಟ್ ಗಳಿಗೆ ಮತ್ತು ನಕ್ಸಲ್ ಪೀಡಿತ ಪ್ರದೇಶಗಳಿಗೆಭೇಟಿ

Suddi Udaya

“ಪುಣ್ಯ ಕೋಟಿಗೆ ಒಂದು ಕೋಟಿ” ವಿಶೇಷ ಪರಿಕಲ್ಪನೆಯಲ್ಲಿ ನಡೆಯಲಿದೆ ನಂದಗೋಕುಲ ದೀಪೋತ್ಸವ

Suddi Udaya
error: Content is protected !!