23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಗಮಕ ವಾಚನ

ಬೆಳ್ತಂಗಡಿ ಸರಕಾರಿ ಜೂನಿಯರ್ ಕಾಲೇಜಿನ ಹೈಸ್ಕೂಲ್ ವಿಭಾಗದಲ್ಲಿ 8ನೇ ಮತ್ತು ಒಂಭತ್ತನೇ ತರಗತಿಯ ಮಕ್ಕಳಿಗಾಗಿ 10ನೇ ತರಗತಿಯ ಪಠ್ಯ ಭಾಗ ‘ಕರ್ಣ ಭೇದನ ‘ವನ್ನು ಗಮಕಿ ಮಧೂರು ವಿಷ್ಣು ಪ್ರಸಾದ ಕಲ್ಲೂರಾಯ ವಾಚನ ಮಾಡಿ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ ವ್ಯಾಖ್ಯಾನ ಮಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾಡಿದ ದ.ಕ ಜಿಲ್ಲ ಗಮಕ ಕಲಾಪರಿಷತ್ ಅಧ್ಯಕ್ಷ ಮೋಹನ ಕಲ್ಲೂರಾಯರು ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣ ತರಗತಿಯನ್ನು ತೆಗೆದುಕೊಂಡರು. ಕಾರ್ಯದಕ್ಷತೆ, ಶ್ರದ್ಧೆ, ಶ್ರಮ, ಗುರು ಹಿರಿಯರಲ್ಲಿ ಗೌರವ, ಒಳ್ಳೆಯ ವ್ಯಕ್ತಿತ್ವದ ನಡವಳಿಕೆ, ದೇಶಭಕ್ತಿ, ಪರೋಪಕಾರ ಮೊದಲಾದ ವಿಚಾರಗಳ ಬಗ್ಗೆ ದೃಷ್ಟಾಂತವನ್ನು ನೀಡಿ ಮಕ್ಕಳಿಗೆ ಸತ್ಪ್ರೇರಣೆ ನೀಡಿದರು.

ಶಾಲಾ ಮುಖ್ಯಸ್ಥೆ ಶ್ರೀಮತಿ ಪೂರ್ಣಿಮಾ ಉಪಾಧ್ಯಾಯ ಸ್ವಾಗತಿಸಿ, ಕನ್ನಡ ಅಧ್ಯಾಪಿಕೆ ಪೂರ್ಣಿಮಾ ಕೆ ಕೆ ವಂದಿಸಿದರು . ಪಿ ಟಿ ಟೀಚರ್ ಕುಮುದ ಕಾರ್ಯಕ್ರಮ ನಿರೂಪಿಸಿದರು.

Related posts

ಬಳಂಜ, ನಿಟ್ಟಡ್ಕ ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ಕೊಕ್ಕಡ ಸ.ಪ. ಪೂ. ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಮೂಡುಕೋಡಿಯಲ್ಲಿ ನಿಧಾನಗತಿಯಲ್ಲಿ ಸಾಗುತ್ತಿರುವ ಮತದಾನ : ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ಜನವೋ ಜನ

Suddi Udaya

ನಿಡ್ಲೆ: ಕಳೆಂಜ ಶೌರ್ಯ ಘಟಕದಿಂದ ಮನೆಯ ಮೇಲೆ ಬಿದ್ದ ಮರ ತೆರವು

Suddi Udaya

ಉಜಿರೆ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಈದ್ ಉಲ್ ಫಿತ್ರ್ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಅತ್ಯುತ್ತಮ ಮೂರು ಎಸ್.ಡಿ.ಎಂ.ಸಿ ಶಾಲೆ ಆಯ್ಕೆ

Suddi Udaya
error: Content is protected !!