September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಗಮಕ ವಾಚನ

ಬೆಳ್ತಂಗಡಿ ಸರಕಾರಿ ಜೂನಿಯರ್ ಕಾಲೇಜಿನ ಹೈಸ್ಕೂಲ್ ವಿಭಾಗದಲ್ಲಿ 8ನೇ ಮತ್ತು ಒಂಭತ್ತನೇ ತರಗತಿಯ ಮಕ್ಕಳಿಗಾಗಿ 10ನೇ ತರಗತಿಯ ಪಠ್ಯ ಭಾಗ ‘ಕರ್ಣ ಭೇದನ ‘ವನ್ನು ಗಮಕಿ ಮಧೂರು ವಿಷ್ಣು ಪ್ರಸಾದ ಕಲ್ಲೂರಾಯ ವಾಚನ ಮಾಡಿ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ ವ್ಯಾಖ್ಯಾನ ಮಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾಡಿದ ದ.ಕ ಜಿಲ್ಲ ಗಮಕ ಕಲಾಪರಿಷತ್ ಅಧ್ಯಕ್ಷ ಮೋಹನ ಕಲ್ಲೂರಾಯರು ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣ ತರಗತಿಯನ್ನು ತೆಗೆದುಕೊಂಡರು. ಕಾರ್ಯದಕ್ಷತೆ, ಶ್ರದ್ಧೆ, ಶ್ರಮ, ಗುರು ಹಿರಿಯರಲ್ಲಿ ಗೌರವ, ಒಳ್ಳೆಯ ವ್ಯಕ್ತಿತ್ವದ ನಡವಳಿಕೆ, ದೇಶಭಕ್ತಿ, ಪರೋಪಕಾರ ಮೊದಲಾದ ವಿಚಾರಗಳ ಬಗ್ಗೆ ದೃಷ್ಟಾಂತವನ್ನು ನೀಡಿ ಮಕ್ಕಳಿಗೆ ಸತ್ಪ್ರೇರಣೆ ನೀಡಿದರು.

ಶಾಲಾ ಮುಖ್ಯಸ್ಥೆ ಶ್ರೀಮತಿ ಪೂರ್ಣಿಮಾ ಉಪಾಧ್ಯಾಯ ಸ್ವಾಗತಿಸಿ, ಕನ್ನಡ ಅಧ್ಯಾಪಿಕೆ ಪೂರ್ಣಿಮಾ ಕೆ ಕೆ ವಂದಿಸಿದರು . ಪಿ ಟಿ ಟೀಚರ್ ಕುಮುದ ಕಾರ್ಯಕ್ರಮ ನಿರೂಪಿಸಿದರು.

Related posts

ಪಾಲೇದು ಪರಿಸರದಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಗಸ್ತು

Suddi Udaya

ಬೆಳ್ತಂಗಡಿ : ವನ್ಯಜೀವಿ ವಿಭಾಗದ ಆರ್.ಎಫ್.ಓ ಸ್ವಾತಿ ಎಲ್. ವರ್ಗಾವಣೆ: ನೂತನ ಆರ್.ಎಫ್.ಓ ಆಗಿ ವಿ. ಶರ್ಮಿಷ್ಠ ನೇಮಕ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯು ‘ಹಸಿರು ನೈರ್ಮಲ್ಯ ಅಭ್ಯುದಯ ರಾಜ್ಯಮಟ್ಟದ ಶಾಲಾ ಪ್ರಶಸ್ತಿ’ಗೆ ಆಯ್ಕೆ

Suddi Udaya

ಬೆಳ್ತಂಗಡಿ:  ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಗಮ್ಮತ್ತ್’

Suddi Udaya

ಕೊಕ್ಕಡ: ಅನುಚಿತ ವರ್ತನೆ, ಹಲ್ಲೆ ಆರೋಪ: ಕೊಕ್ಕಡ ಹಾಗೂ ನೆಲ್ಯಾಡಿ ಮಹಿಳೆಯರಿಂದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!