July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಗಮಕ ವಾಚನ

ಬೆಳ್ತಂಗಡಿ ಸರಕಾರಿ ಜೂನಿಯರ್ ಕಾಲೇಜಿನ ಹೈಸ್ಕೂಲ್ ವಿಭಾಗದಲ್ಲಿ 8ನೇ ಮತ್ತು ಒಂಭತ್ತನೇ ತರಗತಿಯ ಮಕ್ಕಳಿಗಾಗಿ 10ನೇ ತರಗತಿಯ ಪಠ್ಯ ಭಾಗ ‘ಕರ್ಣ ಭೇದನ ‘ವನ್ನು ಗಮಕಿ ಮಧೂರು ವಿಷ್ಣು ಪ್ರಸಾದ ಕಲ್ಲೂರಾಯ ವಾಚನ ಮಾಡಿ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ ವ್ಯಾಖ್ಯಾನ ಮಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾಡಿದ ದ.ಕ ಜಿಲ್ಲ ಗಮಕ ಕಲಾಪರಿಷತ್ ಅಧ್ಯಕ್ಷ ಮೋಹನ ಕಲ್ಲೂರಾಯರು ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣ ತರಗತಿಯನ್ನು ತೆಗೆದುಕೊಂಡರು. ಕಾರ್ಯದಕ್ಷತೆ, ಶ್ರದ್ಧೆ, ಶ್ರಮ, ಗುರು ಹಿರಿಯರಲ್ಲಿ ಗೌರವ, ಒಳ್ಳೆಯ ವ್ಯಕ್ತಿತ್ವದ ನಡವಳಿಕೆ, ದೇಶಭಕ್ತಿ, ಪರೋಪಕಾರ ಮೊದಲಾದ ವಿಚಾರಗಳ ಬಗ್ಗೆ ದೃಷ್ಟಾಂತವನ್ನು ನೀಡಿ ಮಕ್ಕಳಿಗೆ ಸತ್ಪ್ರೇರಣೆ ನೀಡಿದರು.

ಶಾಲಾ ಮುಖ್ಯಸ್ಥೆ ಶ್ರೀಮತಿ ಪೂರ್ಣಿಮಾ ಉಪಾಧ್ಯಾಯ ಸ್ವಾಗತಿಸಿ, ಕನ್ನಡ ಅಧ್ಯಾಪಿಕೆ ಪೂರ್ಣಿಮಾ ಕೆ ಕೆ ವಂದಿಸಿದರು . ಪಿ ಟಿ ಟೀಚರ್ ಕುಮುದ ಕಾರ್ಯಕ್ರಮ ನಿರೂಪಿಸಿದರು.

Related posts

ಮೂಡುಕೋಡಿ ಹಾ.ಉ.ಸ. ಸಂಘ: ಅಧ್ಯಕ್ಷರಾಗಿ ಪುರುಷೋತ್ತಮ ರಾವ್, ಉಪಾಧ್ಯಕ್ಷರಾಗಿ ರಾಕೇಶ್ ಕುಮಾರ್

Suddi Udaya

ಬೆಳ್ತಂಗಡಿ: ಸ್ವಯಂ ಜನಗಣತಿ ಪ್ರಾರಂಭ

Suddi Udaya

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯ ನವೀಕರಿಸಿದ ಶಾಲಾ ಕಟ್ಟಡ ಹಸ್ತಾಂತರ

Suddi Udaya

ಮರೋಡಿ ಗ್ರಾಮ ಪಂಚಾಯತ್ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಪುತ್ತಿಲ ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಯಿಂದ ಮದೂರು ಶ್ರೀ ಮದನಂತೇಶ್ವರ ದೇವಸ್ಥಾನದಲ್ಲಿ ಭಜನಾ ಸೇವೆ

Suddi Udaya

ಡಾ.ಎಂ.ಎನ್.ರಾಜೇಂದ್ರ ಕುಮಾರ್ ಗೆ ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್

Suddi Udaya
error: Content is protected !!