33.3 C
ಪುತ್ತೂರು, ಬೆಳ್ತಂಗಡಿ
May 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಚಿತ್ಪಾವನ ಸಂಘಟನೆ ವಾರ್ಷಿಕೋತ್ಸವ

ಮುಂಡಾಜೆ: ಇಲ್ಲಿಯ ಚಿತ್ಪಾವನ ಸಂಘಟನೆಯ ವಾರ್ಷಿಕೋತ್ಸವವು ಸನ್ಯಾಸಿಕಟ್ಟೆ ಶ್ರೀ ಪರಶುರಾಮ ದೇವಸ್ಥಾನದ ಸಭಾಭವನದಲ್ಲಿ ಜರಗಿತು.


ಹಿರಿಯ ಪತ್ರಕರ್ತ, ಯಕ್ಷಗಾನ ಕಲಾವಿದ ಶ್ರೀಕರ ಮರಾಠೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸಂಘಟನೆಗಳು ಬಲಗೊಂಡಾಗ ಸಮುದಾಯದಲ್ಲಿ ಒಗ್ಗಟ್ಟು ಹೆಚ್ಚುತ್ತದೆ. ಪ್ರತಿಭೆಗಳ ಅನಾವರಣಕ್ಕೆ, ಸಾಮಾಜಿಕ ಚಿಂತನೆಯ ದೃಷ್ಟಿಯಲ್ಲಿ ಉತ್ತಮ ಕಾರ್ಯಕ್ರಮಗಳು ಮೂಡಿ ಬರಬೇಕು ಎಂದು ಹೇಳಿದರು.


ಸಂಘಟನೆಯ ಅಧ್ಯಕ್ಷೆ ಸುಷ್ಮಾ ಶಶಾಂಕ ಭಿಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೃಷಿಕ ಸಂತೋಷ ಹೆಬ್ಬಾರ್, ಗೌರವಾಧ್ಯಕ್ಷ ಜಗದೀಶ ಆರ್.ಫಡಕೆ ಉಪಸ್ಥಿತರಿದ್ದರು.

ಸನ್ಮಾನ: ನಾನಾ ರಂಗಗಳಲ್ಲಿ ವಿಶಿಷ್ಟ ಸಾಧನೆಗೈದ ಸಮುದಾಯದ ಕೇಶವ ಫಡಕೆ (ಸಮಾಜ ಸೇವೆ), ಗೋವಿಂದ ಚಿಪಳೂಣಕರ್ (ಧಾರ್ಮಿಕ), ಡಾ. ಅಮಿತ್ ಖಾಡಿಲ್ಕರ್ (ವೈದ್ಯಕೀಯ), ಜ್ಯೋತಿ ದಿವಾಕರ ಚಿಪಳೂಣಕರ್ (ಸಾಮಾಜಿಕ ಸೇವೆ), ಸ್ವಾತಿ ಗೋಖಲೆ ಮತ್ತು ನೀತಾ ಗೋಖಲೆ (ಅಡುಗೆ), ವೆಂಕಟೇಶ ಬೆಂಡೆ (ಪತ್ರಕರ್ತ), ಅರ್ಜುನ್ ಎ. ಹೆಬ್ಬಾರ್ (ಭೂತಾರಾಧನೆ) ಇವರನ್ನು ಗೌರವಿಸಲಾಯಿತು.

ಸಂಘಟನೆಯ ಸದಸ್ಯರಿಂದ ಭಜನೆ, ಚಿತ್ಪಾವನಿ ಭಾಷೆಯ ನಾಟಕ, ಇತ್ಯಾದಿ ಕಾರ್ಯಕ್ರಮಗಳು ನಡೆದವು.

ಕಾರ್ಯದರ್ಶಿ ರಂಗನಾಥ ಹೆಬ್ಬಾರ್ ವರದಿ ವಾಚಿಸಿದರು. ಗೌರವಾಧ್ಯಕ್ಷ ವಾಸುದೇವ ಗೋಖಲೆ ಸ್ವಾಗತಿಸಿದರು.ಚಿತ್ರಾ ಧನಂಜಯ ಭಿಡೆ ಕಾರ್ಯಕ್ರಮ ನಿರೂಪಿಸಿದರು.

Related posts

ವಾಣಿ ಕಾಲೇಜು: ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನಾಗದೇವರಿಗೆ ಕ್ಷೀರಾಭಿಷೇಕ, ವಿಶೇಷ ಪೂಜೆ

Suddi Udaya

ಮಗನ ಮದುವೆ ಸಂಭ್ರಮದಲ್ಲಿ ಇದ್ದ ತಂದೆ ಹೃದಯಾಘಾತದಿಂದ ಸಾವು

Suddi Udaya

ಉಜಿರೆ : ನಿವೃತ್ತ ಶಿಕ್ಷಕ ದೇವಪ್ಪ ಗೌಡ ನಿಧನ

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ ನಡೆದ 19ನೇ ವರ್ಷದ ಮೊಸರು ಕುಡಿಕೆ ಉತ್ಸವ: ಶ್ರೀ ಕೃಷ್ಣ ಅತ್ಯಂತ ಶ್ರೇಷ್ಠ ಮನಶಾಸ್ತ್ರಜ್ಞ: ಪ್ರತಾಪ್ ಸಿಂಹ ನಾಯಕ್

Suddi Udaya

ಗೇರುಕಟ್ಟೆ ಉಮರ್ ಫಾರೂಕ್ ಮೃತದೇಹ ಹೊರತೆಗೆದು ಕುಟುಂಬಕ್ಕೆ ಹಸ್ತಾಂತರ

Suddi Udaya
error: Content is protected !!