26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಚಿತ್ಪಾವನ ಸಂಘಟನೆ ವಾರ್ಷಿಕೋತ್ಸವ

ಮುಂಡಾಜೆ: ಇಲ್ಲಿಯ ಚಿತ್ಪಾವನ ಸಂಘಟನೆಯ ವಾರ್ಷಿಕೋತ್ಸವವು ಸನ್ಯಾಸಿಕಟ್ಟೆ ಶ್ರೀ ಪರಶುರಾಮ ದೇವಸ್ಥಾನದ ಸಭಾಭವನದಲ್ಲಿ ಜರಗಿತು.


ಹಿರಿಯ ಪತ್ರಕರ್ತ, ಯಕ್ಷಗಾನ ಕಲಾವಿದ ಶ್ರೀಕರ ಮರಾಠೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸಂಘಟನೆಗಳು ಬಲಗೊಂಡಾಗ ಸಮುದಾಯದಲ್ಲಿ ಒಗ್ಗಟ್ಟು ಹೆಚ್ಚುತ್ತದೆ. ಪ್ರತಿಭೆಗಳ ಅನಾವರಣಕ್ಕೆ, ಸಾಮಾಜಿಕ ಚಿಂತನೆಯ ದೃಷ್ಟಿಯಲ್ಲಿ ಉತ್ತಮ ಕಾರ್ಯಕ್ರಮಗಳು ಮೂಡಿ ಬರಬೇಕು ಎಂದು ಹೇಳಿದರು.


ಸಂಘಟನೆಯ ಅಧ್ಯಕ್ಷೆ ಸುಷ್ಮಾ ಶಶಾಂಕ ಭಿಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೃಷಿಕ ಸಂತೋಷ ಹೆಬ್ಬಾರ್, ಗೌರವಾಧ್ಯಕ್ಷ ಜಗದೀಶ ಆರ್.ಫಡಕೆ ಉಪಸ್ಥಿತರಿದ್ದರು.

ಸನ್ಮಾನ: ನಾನಾ ರಂಗಗಳಲ್ಲಿ ವಿಶಿಷ್ಟ ಸಾಧನೆಗೈದ ಸಮುದಾಯದ ಕೇಶವ ಫಡಕೆ (ಸಮಾಜ ಸೇವೆ), ಗೋವಿಂದ ಚಿಪಳೂಣಕರ್ (ಧಾರ್ಮಿಕ), ಡಾ. ಅಮಿತ್ ಖಾಡಿಲ್ಕರ್ (ವೈದ್ಯಕೀಯ), ಜ್ಯೋತಿ ದಿವಾಕರ ಚಿಪಳೂಣಕರ್ (ಸಾಮಾಜಿಕ ಸೇವೆ), ಸ್ವಾತಿ ಗೋಖಲೆ ಮತ್ತು ನೀತಾ ಗೋಖಲೆ (ಅಡುಗೆ), ವೆಂಕಟೇಶ ಬೆಂಡೆ (ಪತ್ರಕರ್ತ), ಅರ್ಜುನ್ ಎ. ಹೆಬ್ಬಾರ್ (ಭೂತಾರಾಧನೆ) ಇವರನ್ನು ಗೌರವಿಸಲಾಯಿತು.

ಸಂಘಟನೆಯ ಸದಸ್ಯರಿಂದ ಭಜನೆ, ಚಿತ್ಪಾವನಿ ಭಾಷೆಯ ನಾಟಕ, ಇತ್ಯಾದಿ ಕಾರ್ಯಕ್ರಮಗಳು ನಡೆದವು.

ಕಾರ್ಯದರ್ಶಿ ರಂಗನಾಥ ಹೆಬ್ಬಾರ್ ವರದಿ ವಾಚಿಸಿದರು. ಗೌರವಾಧ್ಯಕ್ಷ ವಾಸುದೇವ ಗೋಖಲೆ ಸ್ವಾಗತಿಸಿದರು.ಚಿತ್ರಾ ಧನಂಜಯ ಭಿಡೆ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘ ಇದರ ಸ್ವಂತ ಕಟ್ಟಡ “ಆಶಾಕಿರಣ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಸಂಘದ ಪ್ರಧಾನ ಕಚೇರಿ ಉದ್ಘಾಟನೆ

Suddi Udaya

ವಲಯಾರಣ್ಯಾಧಿಕಾರಿ ತ್ಯಾಗರಾಜ್ ಅಮಾನತಿಗೆ ಕೆಎಟಿ ತಡೆ: ಕರ್ತವ್ಯಕ್ಕೆ ಹಾಜರು

Suddi Udaya

ದಕ್ಷಿಣ ಆಫ್ರಿಕಾದಲ್ಲಿ ಅಂತ್ಯಕ್ರಿಯೆವಾಗಲಿದ್ದ ಲಾಯಿಲದ ದಾಮೋದರ ಗೌಡ ರವರ ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಂಗಳೂರು ಹೈಕೋರ್ಟ್ ಗೆ ಹಾಜರು

Suddi Udaya

ಡಾ|| ಹೆಗ್ಗಡೆಯವರಿಂದ ಹುಣ್ಸೆಕಟ್ಟೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!