23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲಗುತ್ತು ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ದೊಂಪದಬಲಿ ಉತ್ಸವ: ಶಾಸಕ ಹರಿಶ್ ಪೂಂಜರಿಂದ ದೈವಕ್ಕೆ ತಲೆಮುಡಿ ಅರ್ಪಣೆ

ಬೆಳ್ತಂಗಡಿ: ಲಾಯಿಲ ಗ್ರಾಮದ ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ ಮಾ 22 ರಂದು ಅಜೆಕಲ ಸ್ಥಾನದ ಬಳಿ ನಡೆಯಿತು. ಸಂಜೆ ಲಾಯಿಲಗುತ್ತುವಿನಿಂದ ದೈವಗಳ ಭಂಡಾರ ಅಜೆಕಲ ಸ್ಥಾನದ ಬಳಿಗೆ ಬಂದು ,ಅಲ್ಲಿ ದೈವಗಳಿಗೆ ದೊಂಪದ ಬಲಿ ನಡೆಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಸೇವಾ ರೂಪವಾಗಿ ಕೊಡಮಣಿತ್ತಾಯ ದೈವಕ್ಕೆ ನೀಡಿದ ತಲೆ ಮುಡಿಯನ್ನು ನಿನ್ನಿಕಲ್ಲು ಬಳಿಯಿಂದ ಮೆರವಣಿಗೆಯಲ್ಲಿ ತರಲಾಯಿತು. ನಂತರ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಸೇರಿದಂತೆ ಊರವರ ಸಮ್ಮುಖದಲ್ಲಿ ದೈವದ ಭಂಡಾರಕ್ಕೆ ಸಮರ್ಪಿಸಲಾಯಿತು. ಈ ವೇಳೆ ಲಾಯಿಲಗುತ್ತು ಚಿತ್ತರಂಜನ್ ಹೆಗ್ಡೆ ಶಾಸಕ ಹರೀಶ್ ಪೂಂಜ ಮತ್ತು ಶಶಿಧರ್ ಶೆಟ್ಟಿಯವರನ್ನು ಗೌರವಿಸಿದರು. ನಂತರ ಕೊಡಮಣಿತ್ತಾಯ ದೈವದ ಹಾಗೂ ಪರಿವಾರ ದೈವಗಳ ದೊಂಪದ ಬಲಿ ಉತ್ಸವ ನಡೆಯಿತು. ಊರಿನ ಪರವೂರಿನ ಸಹಸ್ರಾರು ಮಂದಿ ನೇಮೋತ್ಸವದಲ್ಲಿ ಪಾಲ್ಗೊಂಡು ದೈವದ ಗಂಧ ಪ್ರಸಾದ ಸ್ವೀಕರಿಸಿದರು.

Related posts

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರಕ್ಕೆ ಭಟ್ಟಾರಕರ ಸ್ವಾಮೀಜಿ ಭೇಟಿ

Suddi Udaya

ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಬೆಳ್ಳಿ ಹಬ್ಬದ ಸವಿನೆನಪಿಗಾಗಿ ಶುದ್ಧ ಕುಡಿಯುವ ನೀರಿನ ಘಟಕದ ಲೋಕಾರ್ಪಣೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮುಂಡಾಜೆ ಕಾಲೇಜು ಎನ್‌ಎಸ್‌ಎಸ್ ಶಿಬಿರ ಉದ್ಘಾಟನೆ

Suddi Udaya

ಮಂಜೊಟ್ಟಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!