22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲಗುತ್ತು ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ದೊಂಪದಬಲಿ ಉತ್ಸವ: ಶಾಸಕ ಹರಿಶ್ ಪೂಂಜರಿಂದ ದೈವಕ್ಕೆ ತಲೆಮುಡಿ ಅರ್ಪಣೆ

ಬೆಳ್ತಂಗಡಿ: ಲಾಯಿಲ ಗ್ರಾಮದ ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ ಮಾ 22 ರಂದು ಅಜೆಕಲ ಸ್ಥಾನದ ಬಳಿ ನಡೆಯಿತು. ಸಂಜೆ ಲಾಯಿಲಗುತ್ತುವಿನಿಂದ ದೈವಗಳ ಭಂಡಾರ ಅಜೆಕಲ ಸ್ಥಾನದ ಬಳಿಗೆ ಬಂದು ,ಅಲ್ಲಿ ದೈವಗಳಿಗೆ ದೊಂಪದ ಬಲಿ ನಡೆಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಸೇವಾ ರೂಪವಾಗಿ ಕೊಡಮಣಿತ್ತಾಯ ದೈವಕ್ಕೆ ನೀಡಿದ ತಲೆ ಮುಡಿಯನ್ನು ನಿನ್ನಿಕಲ್ಲು ಬಳಿಯಿಂದ ಮೆರವಣಿಗೆಯಲ್ಲಿ ತರಲಾಯಿತು. ನಂತರ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಸೇರಿದಂತೆ ಊರವರ ಸಮ್ಮುಖದಲ್ಲಿ ದೈವದ ಭಂಡಾರಕ್ಕೆ ಸಮರ್ಪಿಸಲಾಯಿತು. ಈ ವೇಳೆ ಲಾಯಿಲಗುತ್ತು ಚಿತ್ತರಂಜನ್ ಹೆಗ್ಡೆ ಶಾಸಕ ಹರೀಶ್ ಪೂಂಜ ಮತ್ತು ಶಶಿಧರ್ ಶೆಟ್ಟಿಯವರನ್ನು ಗೌರವಿಸಿದರು. ನಂತರ ಕೊಡಮಣಿತ್ತಾಯ ದೈವದ ಹಾಗೂ ಪರಿವಾರ ದೈವಗಳ ದೊಂಪದ ಬಲಿ ಉತ್ಸವ ನಡೆಯಿತು. ಊರಿನ ಪರವೂರಿನ ಸಹಸ್ರಾರು ಮಂದಿ ನೇಮೋತ್ಸವದಲ್ಲಿ ಪಾಲ್ಗೊಂಡು ದೈವದ ಗಂಧ ಪ್ರಸಾದ ಸ್ವೀಕರಿಸಿದರು.

Related posts

ಕುಕ್ಕೇಡಿ: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ಕೆಲ ದಿನಗಳವರೆಗೆ ವಿಸ್ತರಣೆ: ಶೇ.50 ಖರೀದಿಗಾಗಿ ಜನರ ಬಾರಿ ಬೆಂಬಲ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕೊಪ್ಪರಿಗೆ ತುಂಬಿಸುವ ಕಾರ್ಯಕ್ರಮ

Suddi Udaya

ಶ್ರೀ ರಾಮ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಪ್ರಶಸ್ತಿ

Suddi Udaya
error: Content is protected !!