22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲಗುತ್ತು ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ದೊಂಪದಬಲಿ ಉತ್ಸವ: ಶಾಸಕ ಹರಿಶ್ ಪೂಂಜರಿಂದ ದೈವಕ್ಕೆ ತಲೆಮುಡಿ ಅರ್ಪಣೆ

ಬೆಳ್ತಂಗಡಿ: ಲಾಯಿಲ ಗ್ರಾಮದ ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ ಮಾ 22 ರಂದು ಅಜೆಕಲ ಸ್ಥಾನದ ಬಳಿ ನಡೆಯಿತು. ಸಂಜೆ ಲಾಯಿಲಗುತ್ತುವಿನಿಂದ ದೈವಗಳ ಭಂಡಾರ ಅಜೆಕಲ ಸ್ಥಾನದ ಬಳಿಗೆ ಬಂದು ,ಅಲ್ಲಿ ದೈವಗಳಿಗೆ ದೊಂಪದ ಬಲಿ ನಡೆಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಸೇವಾ ರೂಪವಾಗಿ ಕೊಡಮಣಿತ್ತಾಯ ದೈವಕ್ಕೆ ನೀಡಿದ ತಲೆ ಮುಡಿಯನ್ನು ನಿನ್ನಿಕಲ್ಲು ಬಳಿಯಿಂದ ಮೆರವಣಿಗೆಯಲ್ಲಿ ತರಲಾಯಿತು. ನಂತರ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಸೇರಿದಂತೆ ಊರವರ ಸಮ್ಮುಖದಲ್ಲಿ ದೈವದ ಭಂಡಾರಕ್ಕೆ ಸಮರ್ಪಿಸಲಾಯಿತು. ಈ ವೇಳೆ ಲಾಯಿಲಗುತ್ತು ಚಿತ್ತರಂಜನ್ ಹೆಗ್ಡೆ ಶಾಸಕ ಹರೀಶ್ ಪೂಂಜ ಮತ್ತು ಶಶಿಧರ್ ಶೆಟ್ಟಿಯವರನ್ನು ಗೌರವಿಸಿದರು. ನಂತರ ಕೊಡಮಣಿತ್ತಾಯ ದೈವದ ಹಾಗೂ ಪರಿವಾರ ದೈವಗಳ ದೊಂಪದ ಬಲಿ ಉತ್ಸವ ನಡೆಯಿತು. ಊರಿನ ಪರವೂರಿನ ಸಹಸ್ರಾರು ಮಂದಿ ನೇಮೋತ್ಸವದಲ್ಲಿ ಪಾಲ್ಗೊಂಡು ದೈವದ ಗಂಧ ಪ್ರಸಾದ ಸ್ವೀಕರಿಸಿದರು.

Related posts

ನಿವೃತ್ತ ಯೋಧ ಸುವರ್ಣ ವಿ ವರಕಬೆಯವರಿಗೆ ಸೇವಾ ಸಿಂಧೂರ ಗೌರವಾರ್ಪಣೆ

Suddi Udaya

ಕೊಕ್ಕಡದಿಂದ ಮುಂಡೂರುಪಳಿಕೆವರೆಗೆ 3 ಫೇಸ್ ವಿದ್ಯುತ್ತನ್ನು ನೀಡುವಂತೆ ಆಗ್ರಹಿಸಿ ಬೆಳ್ತಂಗಡಿ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಮೂಲಕ ಮಂಗಳೂರು ಮೆಸ್ಕಾಂ ವ್ಯವಸ್ಥಾಪಕರಿಗೆ ಮನವಿ

Suddi Udaya

ಕಿಲ್ಲೂರು ಎನ್ನೆಸ್ಸೆಸ್ ಶಿಬಿರದ ಸ್ಥಳೀಯ ಸಮಿತಿ ರಚನೆ

Suddi Udaya

ಲಾಯಿಲ: ವ್ಯಾಪಕ ಮಳೆಗೆ ಮನೆ ಕುಸಿತ

Suddi Udaya

ಜೂ.16: ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಎರಡನೇ ಅವಧಿಗೆ ಮೀಸಲಾತಿ ನಿಗದಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪಿ.ಯು ಕಾಲೇಜಿಗೆ ಶೇ.93 ಫಲಿತಾಂಶ

Suddi Udaya
error: Content is protected !!