34.3 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಂಡಿಂಜೆ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮಸಭೆ

ಅಂಡಿಂಜೆ:ಅಂಡಿಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ವಿಕಲಚೇತನರಿಗಾಗಿ ವಿಶೇಷ ಗ್ರಾಮ ಸಭೆಯನ್ನು ಪಂಚಾಯತ್ ಅಧ್ಯಕ್ಷ ನಿತಿನ್ ಅವರ ಅಧ್ಯಕ್ಷತೆಯಲ್ಲಿ ಮಾ 24 ರಂದು ನಡೆಸಲಾಯಿತು.

ವಿಕಲಚೇತನರ ಸಮಸ್ಯೆಗಳನ್ನು ಆಲಿಸಿ ಬಗೆಹರಿಸುವ ಮಾಹಿತಿಯನ್ನು ತಾಲೂಕು ವಿಕಲಚೇತನರ ಮೇಲ್ವಿಚಾರಕರಾದ ಜೋನ್ ಬ್ಯಾಪ್ಟಿಸ್ಟ್ ಡಿಸೋಜ, ನೀಡಿದರು.

ಸಮುದಾಯ ಆರೋಗ್ಯ ಇಲಾಖೆಯ ಆರೋಗ್ಯ ಅಧಿಕಾರಿ ಶ್ರೀಮತಿ ಕಾವ್ಯರವರು ಗ್ರಾಮೀಣ ಆರೋಗ್ಯದ ಬಗ್ಗೆ ವಿವರಣೆ ಮತ್ತು ಮಾಹಿತಿಗಳನ್ನು ನೀಡಿದರು

ಪಂಚಾಯತ್ ಅಭಿವೃದ್ಧಿ ಆದಿಕಾರಿಯಾದ ರಾಘವೇಂದ್ರ ಪಾಟೀಲ್ ಪಂಚಾಯತ್ ನಿಂದ ವಿಕಲಚೇತನರಿಗೆ ನೀಡುವ ಸೌಲಭ್ಯಗಳ ಬಗ್ಗೆ ವಿವರಣೆಯನ್ನು ನೀಡಿದರು.

ಪಂಚಾಯತ್ ಅಧ್ಯಕ್ಷರಾದ ನಿತಿನ್ ಎಂ ಮಾತನಾಡಿ ಪಂಚಾಯತ್ ವ್ಯಾಪ್ತಿಯ ಎಲ್ಲಾ ವಿಕಲಚೇತನರು ಯಾವುದೇ ಅಂಜಿಕೆಯಿಲ್ಲದೆ ತಮ್ಮ‌ಸಮಸ್ಯೆಗಳನ್ನು ನಮ್ಮೆಲ್ಲರ ಗಮನಕ್ಕೆ ತರಬೇಕು. ಸಂಪೂರ್ಣ ರೀತಿಯಲ್ಲಿ ಎಲ್ಲಾ ಯೋಜನೆಗಳ ಸದುಪಯೋಗ ಪಡೆಯಬೇಕು ಎಂದರು.

ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಶ್ವೇತಾ, ಕಾರ್ಯದರ್ಶಿ ಶ್ರೀಮತಿ ಚಂಪಾ ಮತ್ತು ಪಂಚಾಯತ್ ನ ಎಲ್ಲಾ ಸದಸ್ಯರು, ಆಶಾ ಕಾರ್ಯಕರ್ತೆಯರು ಹಾಗೂ ಪಂಚಾಯತ್ ಸಿಬ್ಬಂದಿ ವರ್ಗದವರು ಸಹಕರಿಸಿದರು.

ಶೀನ ಸ್ವಾಗತಿಸಿ,ಶ್ರೀಮತಿ ಮಮತಾ ವಂದಿಸಿದರು.ಒಟ್ಟು 54 ಜನ ವಿಕಲಚೇತನರು ಸಭೆಯ ಸದುಪಯೋಗ ಪಡೆದುಕೊಂಡರು.

Related posts

ಕೊಕ್ಕಡ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಬೇಬಿ, ಉಪಾಧ್ಯಕ್ಷರಾಗಿ ಪ್ರಭಾಕರ್ ಮಲ್ಲಿಗೆ ಮಜಲು ಆಯ್ಕೆ

Suddi Udaya

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಮಾಲಕ, ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಅವರಿಗೆ ರಾಷ್ಟ್ರಮಟ್ಟದ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ

Suddi Udaya

ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಕಿಶನ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಸೋಮಂತ್ತಡ್ಕದಲ್ಲಿ ಶ್ರೀ ಕಟೀಲೇಶ್ವರಿ ಜನರಲ್ ಸ್ಟೋರ್ ಶುಭಾರಂಭ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತುರ್ತು ಸ್ಪಂದನೆ: ನಡ ಸ.ಹಿ.ಪ್ರಾ. ಶಾಲೆಯ ಮೇಲ್ಛಾವಣಿ ದುರಸ್ಥಿ ಕಾರ್ಯ

Suddi Udaya
error: Content is protected !!