27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಂಡಿಂಜೆ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮಸಭೆ

ಅಂಡಿಂಜೆ:ಅಂಡಿಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ವಿಕಲಚೇತನರಿಗಾಗಿ ವಿಶೇಷ ಗ್ರಾಮ ಸಭೆಯನ್ನು ಪಂಚಾಯತ್ ಅಧ್ಯಕ್ಷ ನಿತಿನ್ ಅವರ ಅಧ್ಯಕ್ಷತೆಯಲ್ಲಿ ಮಾ 24 ರಂದು ನಡೆಸಲಾಯಿತು.

ವಿಕಲಚೇತನರ ಸಮಸ್ಯೆಗಳನ್ನು ಆಲಿಸಿ ಬಗೆಹರಿಸುವ ಮಾಹಿತಿಯನ್ನು ತಾಲೂಕು ವಿಕಲಚೇತನರ ಮೇಲ್ವಿಚಾರಕರಾದ ಜೋನ್ ಬ್ಯಾಪ್ಟಿಸ್ಟ್ ಡಿಸೋಜ, ನೀಡಿದರು.

ಸಮುದಾಯ ಆರೋಗ್ಯ ಇಲಾಖೆಯ ಆರೋಗ್ಯ ಅಧಿಕಾರಿ ಶ್ರೀಮತಿ ಕಾವ್ಯರವರು ಗ್ರಾಮೀಣ ಆರೋಗ್ಯದ ಬಗ್ಗೆ ವಿವರಣೆ ಮತ್ತು ಮಾಹಿತಿಗಳನ್ನು ನೀಡಿದರು

ಪಂಚಾಯತ್ ಅಭಿವೃದ್ಧಿ ಆದಿಕಾರಿಯಾದ ರಾಘವೇಂದ್ರ ಪಾಟೀಲ್ ಪಂಚಾಯತ್ ನಿಂದ ವಿಕಲಚೇತನರಿಗೆ ನೀಡುವ ಸೌಲಭ್ಯಗಳ ಬಗ್ಗೆ ವಿವರಣೆಯನ್ನು ನೀಡಿದರು.

ಪಂಚಾಯತ್ ಅಧ್ಯಕ್ಷರಾದ ನಿತಿನ್ ಎಂ ಮಾತನಾಡಿ ಪಂಚಾಯತ್ ವ್ಯಾಪ್ತಿಯ ಎಲ್ಲಾ ವಿಕಲಚೇತನರು ಯಾವುದೇ ಅಂಜಿಕೆಯಿಲ್ಲದೆ ತಮ್ಮ‌ಸಮಸ್ಯೆಗಳನ್ನು ನಮ್ಮೆಲ್ಲರ ಗಮನಕ್ಕೆ ತರಬೇಕು. ಸಂಪೂರ್ಣ ರೀತಿಯಲ್ಲಿ ಎಲ್ಲಾ ಯೋಜನೆಗಳ ಸದುಪಯೋಗ ಪಡೆಯಬೇಕು ಎಂದರು.

ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಶ್ವೇತಾ, ಕಾರ್ಯದರ್ಶಿ ಶ್ರೀಮತಿ ಚಂಪಾ ಮತ್ತು ಪಂಚಾಯತ್ ನ ಎಲ್ಲಾ ಸದಸ್ಯರು, ಆಶಾ ಕಾರ್ಯಕರ್ತೆಯರು ಹಾಗೂ ಪಂಚಾಯತ್ ಸಿಬ್ಬಂದಿ ವರ್ಗದವರು ಸಹಕರಿಸಿದರು.

ಶೀನ ಸ್ವಾಗತಿಸಿ,ಶ್ರೀಮತಿ ಮಮತಾ ವಂದಿಸಿದರು.ಒಟ್ಟು 54 ಜನ ವಿಕಲಚೇತನರು ಸಭೆಯ ಸದುಪಯೋಗ ಪಡೆದುಕೊಂಡರು.

Related posts

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: 23.47 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಟ್ ಘೋಷಣೆ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ ಸರಸ್ವತಿ ಹಿ.ಪ್ರಾ. ಶಾಲಾ ಮುಂಭಾಗದಲ್ಲಿ ಬ್ಯಾರಿಕೆಡ್ ಅಳವಡಿಕೆ

Suddi Udaya

ಸುಲ್ಕೇರಿಮೊಗ್ರು ಶ್ರೀ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿ, ವಾರ್ಷಿಕ ಜಾತ್ರೋತ್ಸವ

Suddi Udaya

ನಾಲ್ಕೂರು ಬೋವಾಡಿ ದೈವಸ್ಥಾನದಲ್ಲಿ ದೊಂಪದ ಬಲಿ ಉತ್ಸವ: ಶ್ರೀ ಕೊಡಮಣಿತ್ತಾಯ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya

ಎಸ್.ಡಿ.ಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದ ಪ್ರಾಂಶುಪಾಲ ಡಾ| ಪ್ರಶಾಂತ್ ಶೆಟ್ಟಿ ಹಾಗೂ ಚಾರ್ಮಾಡಿ ಹಸನಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ

Suddi Udaya

ವಿಶ್ವ ಏಡ್ಸ್ ದಿನ : ಉಜಿರೆ ಶ್ರೀ ಧ.ಮಂ.ಪದವಿಪೂರ್ವ ಕಾಲೇಜಿನಲ್ಲಿ ಜಾಗೃತಿ ಉಪನ್ಯಾಸ

Suddi Udaya
error: Content is protected !!