23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಂಡಿಂಜೆ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮಸಭೆ

ಅಂಡಿಂಜೆ:ಅಂಡಿಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ವಿಕಲಚೇತನರಿಗಾಗಿ ವಿಶೇಷ ಗ್ರಾಮ ಸಭೆಯನ್ನು ಪಂಚಾಯತ್ ಅಧ್ಯಕ್ಷ ನಿತಿನ್ ಅವರ ಅಧ್ಯಕ್ಷತೆಯಲ್ಲಿ ಮಾ 24 ರಂದು ನಡೆಸಲಾಯಿತು.

ವಿಕಲಚೇತನರ ಸಮಸ್ಯೆಗಳನ್ನು ಆಲಿಸಿ ಬಗೆಹರಿಸುವ ಮಾಹಿತಿಯನ್ನು ತಾಲೂಕು ವಿಕಲಚೇತನರ ಮೇಲ್ವಿಚಾರಕರಾದ ಜೋನ್ ಬ್ಯಾಪ್ಟಿಸ್ಟ್ ಡಿಸೋಜ, ನೀಡಿದರು.

ಸಮುದಾಯ ಆರೋಗ್ಯ ಇಲಾಖೆಯ ಆರೋಗ್ಯ ಅಧಿಕಾರಿ ಶ್ರೀಮತಿ ಕಾವ್ಯರವರು ಗ್ರಾಮೀಣ ಆರೋಗ್ಯದ ಬಗ್ಗೆ ವಿವರಣೆ ಮತ್ತು ಮಾಹಿತಿಗಳನ್ನು ನೀಡಿದರು

ಪಂಚಾಯತ್ ಅಭಿವೃದ್ಧಿ ಆದಿಕಾರಿಯಾದ ರಾಘವೇಂದ್ರ ಪಾಟೀಲ್ ಪಂಚಾಯತ್ ನಿಂದ ವಿಕಲಚೇತನರಿಗೆ ನೀಡುವ ಸೌಲಭ್ಯಗಳ ಬಗ್ಗೆ ವಿವರಣೆಯನ್ನು ನೀಡಿದರು.

ಪಂಚಾಯತ್ ಅಧ್ಯಕ್ಷರಾದ ನಿತಿನ್ ಎಂ ಮಾತನಾಡಿ ಪಂಚಾಯತ್ ವ್ಯಾಪ್ತಿಯ ಎಲ್ಲಾ ವಿಕಲಚೇತನರು ಯಾವುದೇ ಅಂಜಿಕೆಯಿಲ್ಲದೆ ತಮ್ಮ‌ಸಮಸ್ಯೆಗಳನ್ನು ನಮ್ಮೆಲ್ಲರ ಗಮನಕ್ಕೆ ತರಬೇಕು. ಸಂಪೂರ್ಣ ರೀತಿಯಲ್ಲಿ ಎಲ್ಲಾ ಯೋಜನೆಗಳ ಸದುಪಯೋಗ ಪಡೆಯಬೇಕು ಎಂದರು.

ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಶ್ವೇತಾ, ಕಾರ್ಯದರ್ಶಿ ಶ್ರೀಮತಿ ಚಂಪಾ ಮತ್ತು ಪಂಚಾಯತ್ ನ ಎಲ್ಲಾ ಸದಸ್ಯರು, ಆಶಾ ಕಾರ್ಯಕರ್ತೆಯರು ಹಾಗೂ ಪಂಚಾಯತ್ ಸಿಬ್ಬಂದಿ ವರ್ಗದವರು ಸಹಕರಿಸಿದರು.

ಶೀನ ಸ್ವಾಗತಿಸಿ,ಶ್ರೀಮತಿ ಮಮತಾ ವಂದಿಸಿದರು.ಒಟ್ಟು 54 ಜನ ವಿಕಲಚೇತನರು ಸಭೆಯ ಸದುಪಯೋಗ ಪಡೆದುಕೊಂಡರು.

Related posts

ನಿಡಿಗಲ್ ನಲ್ಲಿ ಪಿಕಪ್ ವಾಹನ ಟಿಪ್ಪರ್ ಗೆ ಬಡಿದು ಬಳಿಕ ನೇತ್ರಾವತಿ ಸೇತುವೆಯ ತಡೆಗೋಡೆಗೆ ಡಿಕ್ಕಿ

Suddi Udaya

ಮಚ್ಚಿನ ಸರ್ಕಾರಿ ಪ್ರೌಢ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ ಪ್ರದಾನ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹಿಳಾ ದಿನಾಚರಣೆ

Suddi Udaya

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ: ಗ್ರಾ.ಪಂ ಅಧ್ಯಕ್ಷ ಸತೀಶ್ ಕಾಶಿಪಟ್ಣ ಮತ್ತು ಪಿಡಿಓ ಆಶಾಲತಾರವಿಗೆ ಗೌರವ

Suddi Udaya

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಆರಂಭ

Suddi Udaya
error: Content is protected !!