September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಂಡಿಂಜೆ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮಸಭೆ

ಅಂಡಿಂಜೆ:ಅಂಡಿಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ವಿಕಲಚೇತನರಿಗಾಗಿ ವಿಶೇಷ ಗ್ರಾಮ ಸಭೆಯನ್ನು ಪಂಚಾಯತ್ ಅಧ್ಯಕ್ಷ ನಿತಿನ್ ಅವರ ಅಧ್ಯಕ್ಷತೆಯಲ್ಲಿ ಮಾ 24 ರಂದು ನಡೆಸಲಾಯಿತು.

ವಿಕಲಚೇತನರ ಸಮಸ್ಯೆಗಳನ್ನು ಆಲಿಸಿ ಬಗೆಹರಿಸುವ ಮಾಹಿತಿಯನ್ನು ತಾಲೂಕು ವಿಕಲಚೇತನರ ಮೇಲ್ವಿಚಾರಕರಾದ ಜೋನ್ ಬ್ಯಾಪ್ಟಿಸ್ಟ್ ಡಿಸೋಜ, ನೀಡಿದರು.

ಸಮುದಾಯ ಆರೋಗ್ಯ ಇಲಾಖೆಯ ಆರೋಗ್ಯ ಅಧಿಕಾರಿ ಶ್ರೀಮತಿ ಕಾವ್ಯರವರು ಗ್ರಾಮೀಣ ಆರೋಗ್ಯದ ಬಗ್ಗೆ ವಿವರಣೆ ಮತ್ತು ಮಾಹಿತಿಗಳನ್ನು ನೀಡಿದರು

ಪಂಚಾಯತ್ ಅಭಿವೃದ್ಧಿ ಆದಿಕಾರಿಯಾದ ರಾಘವೇಂದ್ರ ಪಾಟೀಲ್ ಪಂಚಾಯತ್ ನಿಂದ ವಿಕಲಚೇತನರಿಗೆ ನೀಡುವ ಸೌಲಭ್ಯಗಳ ಬಗ್ಗೆ ವಿವರಣೆಯನ್ನು ನೀಡಿದರು.

ಪಂಚಾಯತ್ ಅಧ್ಯಕ್ಷರಾದ ನಿತಿನ್ ಎಂ ಮಾತನಾಡಿ ಪಂಚಾಯತ್ ವ್ಯಾಪ್ತಿಯ ಎಲ್ಲಾ ವಿಕಲಚೇತನರು ಯಾವುದೇ ಅಂಜಿಕೆಯಿಲ್ಲದೆ ತಮ್ಮ‌ಸಮಸ್ಯೆಗಳನ್ನು ನಮ್ಮೆಲ್ಲರ ಗಮನಕ್ಕೆ ತರಬೇಕು. ಸಂಪೂರ್ಣ ರೀತಿಯಲ್ಲಿ ಎಲ್ಲಾ ಯೋಜನೆಗಳ ಸದುಪಯೋಗ ಪಡೆಯಬೇಕು ಎಂದರು.

ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಶ್ವೇತಾ, ಕಾರ್ಯದರ್ಶಿ ಶ್ರೀಮತಿ ಚಂಪಾ ಮತ್ತು ಪಂಚಾಯತ್ ನ ಎಲ್ಲಾ ಸದಸ್ಯರು, ಆಶಾ ಕಾರ್ಯಕರ್ತೆಯರು ಹಾಗೂ ಪಂಚಾಯತ್ ಸಿಬ್ಬಂದಿ ವರ್ಗದವರು ಸಹಕರಿಸಿದರು.

ಶೀನ ಸ್ವಾಗತಿಸಿ,ಶ್ರೀಮತಿ ಮಮತಾ ವಂದಿಸಿದರು.ಒಟ್ಟು 54 ಜನ ವಿಕಲಚೇತನರು ಸಭೆಯ ಸದುಪಯೋಗ ಪಡೆದುಕೊಂಡರು.

Related posts

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ ವಾರ್ಷಿಕ ಮಹಾಸಭೆ

Suddi Udaya

ಕಲ್ಮಂಜ: ದೇವರಗುಡ್ಡೆ ನಿವಾಸಿ ಪುರಂದರ ಹೆಗ್ಡೆ ನಿಧನ

Suddi Udaya

ಕೇಂದ್ರ ಬಜೆಟ್ ನಲ್ಲಿ ಕರಾವಳಿಯ ಅವಗಣನೆ ಖಂಡನಾರ್ಹ: ರಕ್ಷಿತ್ ಶಿವರಾಂ

Suddi Udaya

ಮಾ.27ರಿಂದ ಎ.1: ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಜಾತ್ರೋತ್ಸವ

Suddi Udaya

ಸೋಜಾ ಎಲೆಕ್ಟ್ರಾನಿಕ್ಸ್‌ನಲ್ಲಿ ಗೊದ್ರೇಜ್ ಗೃಹೋಪಯೋಗಿ ಉತ್ಪನ್ನಗಳ ಭರ್ಜರಿ ಮಾನ್ಸೂನ್ ಆಫರ್

Suddi Udaya

ಮೊಗ್ರು: ಮುಗೇರಡ್ಕ – ಅಲೆಕ್ಕಿ ಶ್ರೀ ರಾಮ ಸೇವಾ ಟ್ರಸ್ಟ್ ಇದರ ಪೋಷಕರ ಹಾಗೂ ಶಿಕ್ಷಕರ ಚಿಂತನಾ ಸಭೆ

Suddi Udaya
error: Content is protected !!