23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ: ಇತ್ತೀಚೆಗೆ ಭಾರಿ ಗಾಳಿ , ಮಳೆಗೆ ಕುಸಿತಗೊಂಡ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ: ತಾತ್ಕಾಲಿಕ ಮನೆ ದುರಸ್ತಿಗೆ ನೆರವು

ಅಳದಂಗಡಿ ಸಮೀಪದ ಪಿಲ್ಯ ಎಂಬಲ್ಲಿ ಇತ್ತೀಚೆಗೆ ಭಾರಿ ಗಾಳಿ , ಮಳೆಗೆ ಮನೆಯೊಂದು ಸಂಪೂರ್ಣ ಕುಸಿದಿದ್ದು , ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಸಹಾಯಹಸ್ತ ನೀಡಿ ತಾತ್ಕಾಲಿಕ ಮನೆ ದುರಸ್ತಿಗೆ ನೆರವಾದರು.

ಇತ್ತೀಚೆಗೆ ಅಳದಂಗಡಿ ಸಮೀಪದ ಪಿಲ್ಯದ ವಿಮಲ ಮಡಿವಾಳ ಎಂಬವರ ಮನೆ ತೀವ್ರ ಸ್ವರೂಪದ ಗಾಳಿ ಮಳೆಗೆ ಸಂಪೂರ್ಣ ಕುಸಿದಿತ್ತು. ಈ ಬಗ್ಗೆ ಕಾರ್ಯಪ್ರವೃತರಾದ ಸ್ಥಳೀಯ ಕಾಂಗ್ರೆಸ್ ಪಕ್ಷದ ‌ನಾಯಕ ಸಂತೋಷ್ ಪೂಜಾರಿ ನಿನ್ನಿಕಲ್ಲು ರವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರ ಗಮನ ಸೆಳೆದರು. ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ರಕ್ಷಿತ್ ಶಿವರಾಂ ರವರು ಸಹಾಯಹಸ್ತ ನೀಡಿ , ಸಂತೋಷ್ ನಿನ್ನಿಕಲ್ಲು ರವರ ನೇತೃತ್ವದಲ್ಲಿ ಮನೆ ದುರಸ್ತಿ ಮಾಡಲು ಸೂಚಿಸಿದರು ‌.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ನಾಯಕ , ಉದ್ಯಮಿ ಪ್ರವೀಣ್ ಪೆರ್ನಾಂಡೀಸ್ ಹಳ್ಳಿಮನೆ , ಯುವ ಕಾಂಗ್ರೆಸ್ ಉಪಾಧ್ಯಕ್ಷ ಅರುಣ್ ಲೋಬೋ ಉಪಸ್ಥಿತರಿದ್ದರು.

Related posts

ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇದರ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಸೇಕ್ರೆಡ್ ಹಾರ್ಟ್ ಆಂ. ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ದ್ವಿತೀಯ ಸ್ಥಾನ

Suddi Udaya

ಕುವೆಟ್ಟು ಗ್ರಾ.ಪಂ.ನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ : ಮಹಾಗಣಪತಿ ದಿನಸಿ ಅಂಗಡಿ ಶುಭಾರಂಭ

Suddi Udaya

ಸುಲ್ಕೇರಿ: ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya

ವೇಣೂರಿನ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ದಿ.ವಸಂತ ಬಂಗೇರರ ಪರವಾಗಿ ಪತ್ನಿ ಸುಜೀತಾ ವಿ. ಬಂಗೇರರಿಗೆ ಅಭಿನಂದನೆ

Suddi Udaya
error: Content is protected !!