34.3 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಡಿರುದ್ಯಾವರ: ಕುಚ್ಚೂರು ಬೈಲು ನಲ್ಲಿ ದ್ವಿತೀಯ ವರ್ಷದ ನಾಗಪ್ರತಿಷ್ಠೆ ವರ್ಷಾಚರಣೆ

ಕಡಿರುದ್ಯಾವರ: ಇಲ್ಲಿಯ ಕುಚ್ಚೂರು ಬೈಲು ನಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ವನದುರ್ಗಾ ದೇವಿ ದೇವಸ್ಥಾನದ ವಠಾರದಲ್ಲಿ ಮಾ.23 ರಂದು ದ್ವಿತೀಯ ವರ್ಷದ ನಾಗಪ್ರತಿಷ್ಠಾ ವರ್ಷಾಚರಣೆಯನ್ನು ಕಾನರ್ಪ ವಿಕ್ರಂ ಹೊಳ್ಳರವರ ನೇತೃತ್ವದಲ್ಲಿ ನಾಗತಂಬಿಲ ನೆರವೇರಿಸಿದರು.

ಈ ವೇಳೆ ಪ್ರಗತಿಪರ ಕೃಷಿಕ ಶಂಕರ್ ಭಟ್ ಕಾರ್ಯಕ್ರಮವನ್ನು ದೀಪಬೆಳಗಿಸುದರೊಂದಿಗೆ ಶುಭಕೋರಿದರು.

ಶ್ರೀ ವನದುರ್ಗಾ ದೇವಿ ದೇವಸ್ಥಾನದ ಟ್ರಸ್ಟ್ ಅಧ್ಯಕ್ಷೆ ಲೋಕೇಶ್ವರಿ ವಿನಯಚಂದ್ರ ರವರು ಪ್ರಸ್ತಾವಣೆಯೊಂದಿಗೆ ಸ್ವಾಗತಿಸಿದರು.

ಧಾರ್ಮಿಕ ಉಪನ್ಯಾಸವನ್ನು ಉಜಿರೆ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ಸಹಪ್ರಾಧ್ಯಾಪಕರಾದ ದಿವ ಕೊಕ್ಕಡ ರವರು ದೇವರು, ಪ್ರಕೃತಿ ಬಗ್ಗೆ ಅನೇಕ ಉದಾಹರಣೆಗಳೊಂದಿಗೆ ನೀಡಿದರು. ಕು| ರಕ್ಷಿತಾ ಚಂದ್ರಶೇಖರ ಪೂಜಾರಿ, ನವ್ಯ ಕೃಷ್ಣಪ್ಪ ಎಂ.ಕೆ ರವರು ಪ್ರಾರ್ಥಿಸಿ, ಭವಶ್ರೀ ಕೀರ್ತಿ ರಾಜ್ ವಳಂಬ್ರ ಕಾರ್ಯಕ್ರಮ ನಿರೂಪಿಸಿದರು. ದೇವಸ್ಥಾನದ ಟ್ರಸ್ಟ್ ಕಾರ್ಯದರ್ಶಿ ಮಂಜುನಾರ್ಥ ಗೌಡ ಕುಚ್ಚೂರು ವಂದಿಸಿದರು.

ಈ ಸಂದರ್ಭದಲ್ಲಿ ಟ್ರಸ್ಟ್ ನ ಸದಸ್ಯರು, ಮಹಿಳಾ ಘಟಕದ ಸದಸ್ಯರು ಸಹಕರಿಸಿದರು. ಕೂಸಪ್ಪ ಎಂ.ಕೆ ರವರ ನೇತೃತ್ವದಲ್ಲಿ ಭಜನಾ ಕಾರ್ಯಕ್ರಮ ನಡೆಯತು.

Related posts

ಮರೋಡಿ: ಕೃಷಿಕ ಚೀಂಕ್ರ ಪೂಜಾರಿ ನಿಧನ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ನಿಡ್ಲೆ ಸಹಕಾರಿ ಸಂಘದ ಅಧ್ಯಕ್ಷ ಕೆ. ರಮೇಶ್ ರಾವ್ ಬೆಂಬಲ

Suddi Udaya

ರಕ್ಷಿತ್ ಶಿವರಾಂ ಬೆಂಗಳೂರಿನಿಂದ ಬೆಳ್ತಂಗಡಿಗೆ ಆಮದು ಆದ ನಾಯಕನಾದರೆ, ಬೆಂಗಳೂರಿನಲ್ಲಿದ್ದ ಹರೀಶ್ ಪೂಂಜ ಬೆಳ್ತಂಗಡಿಗೆ ಆಮದು ಆಗಿ ಚುನಾವಣೆಗೆ ನಿಲ್ಲಲಿಲ್ಲವೇ: ಧರಣೇಂದ್ರ ಕುಮಾರ್

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ಲೈವ್ ಅಸೋಸಿಯೇಶನ್ ಅಧ್ಯಕ್ಷರಾಗಿ ದಿವ್ಯವರ್ಮಾ, ಕಾರ್ಯದರ್ಶಿಯಾಗಿ ಶರತ್ ಎಂ. ಗೌಡ ಬೆಳ್ತಂಗಡಿ ಆಯ್ಕೆ

Suddi Udaya

ಕಡಿರುದ್ಯಾವರದಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!