23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಡಿರುದ್ಯಾವರ: ಕುಚ್ಚೂರು ಬೈಲು ನಲ್ಲಿ ದ್ವಿತೀಯ ವರ್ಷದ ನಾಗಪ್ರತಿಷ್ಠೆ ವರ್ಷಾಚರಣೆ

ಕಡಿರುದ್ಯಾವರ: ಇಲ್ಲಿಯ ಕುಚ್ಚೂರು ಬೈಲು ನಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ವನದುರ್ಗಾ ದೇವಿ ದೇವಸ್ಥಾನದ ವಠಾರದಲ್ಲಿ ಮಾ.23 ರಂದು ದ್ವಿತೀಯ ವರ್ಷದ ನಾಗಪ್ರತಿಷ್ಠಾ ವರ್ಷಾಚರಣೆಯನ್ನು ಕಾನರ್ಪ ವಿಕ್ರಂ ಹೊಳ್ಳರವರ ನೇತೃತ್ವದಲ್ಲಿ ನಾಗತಂಬಿಲ ನೆರವೇರಿಸಿದರು.

ಈ ವೇಳೆ ಪ್ರಗತಿಪರ ಕೃಷಿಕ ಶಂಕರ್ ಭಟ್ ಕಾರ್ಯಕ್ರಮವನ್ನು ದೀಪಬೆಳಗಿಸುದರೊಂದಿಗೆ ಶುಭಕೋರಿದರು.

ಶ್ರೀ ವನದುರ್ಗಾ ದೇವಿ ದೇವಸ್ಥಾನದ ಟ್ರಸ್ಟ್ ಅಧ್ಯಕ್ಷೆ ಲೋಕೇಶ್ವರಿ ವಿನಯಚಂದ್ರ ರವರು ಪ್ರಸ್ತಾವಣೆಯೊಂದಿಗೆ ಸ್ವಾಗತಿಸಿದರು.

ಧಾರ್ಮಿಕ ಉಪನ್ಯಾಸವನ್ನು ಉಜಿರೆ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ಸಹಪ್ರಾಧ್ಯಾಪಕರಾದ ದಿವ ಕೊಕ್ಕಡ ರವರು ದೇವರು, ಪ್ರಕೃತಿ ಬಗ್ಗೆ ಅನೇಕ ಉದಾಹರಣೆಗಳೊಂದಿಗೆ ನೀಡಿದರು. ಕು| ರಕ್ಷಿತಾ ಚಂದ್ರಶೇಖರ ಪೂಜಾರಿ, ನವ್ಯ ಕೃಷ್ಣಪ್ಪ ಎಂ.ಕೆ ರವರು ಪ್ರಾರ್ಥಿಸಿ, ಭವಶ್ರೀ ಕೀರ್ತಿ ರಾಜ್ ವಳಂಬ್ರ ಕಾರ್ಯಕ್ರಮ ನಿರೂಪಿಸಿದರು. ದೇವಸ್ಥಾನದ ಟ್ರಸ್ಟ್ ಕಾರ್ಯದರ್ಶಿ ಮಂಜುನಾರ್ಥ ಗೌಡ ಕುಚ್ಚೂರು ವಂದಿಸಿದರು.

ಈ ಸಂದರ್ಭದಲ್ಲಿ ಟ್ರಸ್ಟ್ ನ ಸದಸ್ಯರು, ಮಹಿಳಾ ಘಟಕದ ಸದಸ್ಯರು ಸಹಕರಿಸಿದರು. ಕೂಸಪ್ಪ ಎಂ.ಕೆ ರವರ ನೇತೃತ್ವದಲ್ಲಿ ಭಜನಾ ಕಾರ್ಯಕ್ರಮ ನಡೆಯತು.

Related posts

ರಸಪ್ರಶ್ನೆ ಸ್ಪರ್ಧೆ: ವೇಣೂರು ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ

Suddi Udaya

ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ರವರಿಂದ ಮತ ಚಲಾವಣೆ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ವೇಣೂರು: ಆಳ್ವಾಸ್ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಕನ್ಯಾರವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ

Suddi Udaya

ಕಳಿಯ : ಬಾಕಿಮಾರು ಮನೆಯ ಸುರೇಶ್ ಗೌಡ ನಿಧನ

Suddi Udaya

ಧರೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ಸು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮೃತ್ಯು

Suddi Udaya
error: Content is protected !!