28.8 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕುಕ್ಕೆ ಲಿಂಗ ವಂಶಸ್ಥರಾದ ಮಲೆಕುಡಿಯ ಜನಾಂಗದವರಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಶಾಶ್ವತ ಮೂಲನಿವಾಸಿ ಸ್ಥಾನಮಾನ ನೀಡುವಂತೆ ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಆಗ್ರಹ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಮಲೆಕುಡಿಯ ಸಮುದಾಯಕ್ಕೆ ಅವಿನಾಭಾವ ಸಂಬಂಧ ಇದೆ. ಕುಕ್ಕೆ ಶ್ರೀ ಕ್ಷೇತ್ರದ ಸ್ಥಾಪನೆಗೆ ಮೂಲ ಕಾರಣೀಭೂತರಾದ ಕುಕ್ಕೆ ಲಿಂಗ ದೈವಿಕ ಪುರುಷರು ಮಲೆಕುಡಿಯ ಜನಾಂಗಕ್ಕೆ ಸೇರಿದವರು. ವ್ಯವಸ್ಥಾಪನಾ ಸಮಿತಿಯಲ್ಲಿ ಮಲೆಕುಡಿಯ ಸಮುದಾಯಕ್ಕೆ ಸ್ಥಾನ ಒದಗಿಸುವ ಪರಂಪರೆ ಇದೆ. ಆದರೆ ಹೊಸ ವ್ಯವಸ್ಥಾಪನಾ ಸಮಿತಿಯಲ್ಲಿ ಸಮುದಾಯದ ಪ್ರತಿನಿಧಿಯವರಿಗೆ ಸ್ಥಾನ ಕಲ್ಪಿಸಲಾಗಿಲ್ಲ ಎಂದು ಮಾಹಿತಿ ಇದೆ.

ಸರ್ಕಾರ ಕೂಡಲೇ ಮರುಪರಿಶೀಲನೆ ಮಾಡಿ ಕ್ಷೇತ್ರದಲ್ಲಿ ಪಾರಂಪರಿಕ ಹಿನ್ನೆಲೆಯಿರುವ ಮೂಲನಿವಾಸಿ ಸಮುದಾಯಕ್ಕೆ ವ್ಯವಸ್ಥಾಪನಾ ಸಮಿತಿಯಲ್ಲಿ ಶಾಶ್ವತ ಪ್ರಾತಿನಿಧ್ಯ ನೀಡುವಂತೆ ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಗಂಗಾಧರ ಗೌಡ ಇವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

Related posts

ರಾಜ್ಯಮಟ್ಟದ ಕರಾಟೆ: ಇಶಿತ ಬೆಳ್ತಂಗಡಿಯವರಿಗೆ ಪ್ರಶಸ್ತಿ

Suddi Udaya

ಶ್ರೀ ರಾಮಲಾಲ್ಲಾನ ಪ್ರಾಣ ಪ್ರತಿಷ್ಠೆ: ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಶ್ರೀ ರಾಮೋತ್ಸವ: ಸುರಕ್ಷಾ ಆಚಾರ್ಯ ರವರ ಕೈಚಳಕದಲ್ಲಿ ಸುಂದರವಾಗಿ ಮೂಡಿಬಂದ ರಾಮಮಂದಿರ

Suddi Udaya

ಊಟಕ್ಕಿಲ್ಲದ ಉಪ್ಪಿನಕಾಯಿಯಂತಿರುವ ಬಳಂಜದ ಮೊಬೈಲ್ ಟವರ್: ಬಳಂಜ- ನಾಲ್ಕೂರಿನಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya

ಕೊಕ್ಕಡ: ಬಲಿಪಗುಡ್ಡೆ ಶ್ರೀಮತಿ ಸುಶೀಲ ಅವರ ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ: ಶೀಘ್ರವಾಗಿ ಮನೆಯವರನ್ನು ಸ್ಥಳಾಂತರಿಸುವಂತೆ ಸೂಚನೆ

Suddi Udaya

ಜ.29-ಫೆ.2 : ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಜಾತ್ರೋತ್ಸವ

Suddi Udaya

ಅಳದಂಗಡಿಯಲ್ಲಿ “ಅಶ್ವಿ” ಅಲಂಕಾರ ಮಳಿಗೆ ಶುಭಾರಂಭ

Suddi Udaya
error: Content is protected !!