July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಮಲೆಕುಡಿಯರಿಗೆ ಅವಕಾಶ ನೀಡದೆ ಇದ್ದಲ್ಲಿ ಕ್ಷೇತ್ರದಲ್ಲಿ ಚಾಕರಿ ಕೆಲಸ ಮತ್ತು ರಥ ಕಟ್ಟುವ ಕೆಲಸವನ್ನು ನಿಲ್ಲಿಸ ಬೇಕಾದೀತು: ಜಿಲ್ಲಾ ಮಲೆಕುಡಿಯ ಸಂಘ

ಮಲೆಕುಡಿಯ ಸಮುದಾಯ ಕುಕ್ಕೆ ಮತ್ತು ಲಿಂಗ ಎಂಬ ದೈವಿ ಪುರುಷರಿಂದ ಸ್ಥಾಪಿಸಲ್ಪಟ್ಟ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮರಥ ಕಟ್ಟುವುದರಿಂದ ಹಿಡಿದು ಪಂಚ ಪರ್ವ ಸೇವೆಗಳಲ್ಲಿ ಕೂಡ ಮಲೆಕುಡಿಯ ಸಮುದಾಯದವರು ಭಕ್ತಿ ಶ್ರದ್ಧೆಯಿಂದ ಸೇವೆಯನ್ನು ಮಾಡುತ್ತಿದ್ದು. ಪ್ರತಿ ಬಾರಿಯೂ ಮಲೆಕುಡಿಯ ಸಮುದಾಯಕ್ಕೆ ಆಡಳಿತ ಮಂಡಳಿಯಲ್ಲಿ ಒಂದು ಸ್ಥಾನವನ್ನು ನೀಡಲಾಗುತ್ತಿತ್ತು.

ಪ್ರಸ್ತುತ ಮಾನ್ಯ ಉಸ್ತುವಾರಿ ಸಚಿವರು ಶಿಫಾರಸ್ಸು ಮಾಡಿದ ಪಟ್ಟಿಯಲ್ಲಿ ಮಲೆಕುಡಿಯ ಸಮುದಾಯದವರ ಹೆಸರು ಇಲ್ಲದೆ ಇರುವುದು ಆಘಾತವನ್ನುಂಟು ಮಾಡಿದೆ . ಸಂಬಂಧ ಪಟ್ಟ ಇಲಾಖೆ ಮತ್ತು ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಮಲೆಕುಡಿಯ ಸಮುದಾಯದವರಿಗೆ ಒಂದು ಸ್ಥಾನವನ್ನು ಕೊಡಬೇಕು. ಒಂದು ವೇಳೆ ಸಮುದಾಯವನ್ನು ಕಡೆಗಣಿಸಿ ಸರ್ಕಾರ ನಮ್ಮ ಭಾವನೆಗಳಿಗೆ ಘಾಸಿಗೊಳಿಸುವ ಪ್ರಯತ್ನವನ್ನು ಮಾಡಿದರೆ. ಕ್ಷೇತ್ರದಲ್ಲಿ ಸಮುದಾಯ ಚಾಕರಿ ಮಾಡುವುದನ್ನು ನಿಲ್ಲಿಸಿ ದೇವಸ್ಥಾನದ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ಮಾಡಬೇಕಾಗುತ್ತದೆ ಎಂದು ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಹರೀಶ್ ಎಳನೀರ್ ಹಾಗೂ ಪ್ರಧಾನ ಕಾರ್ಯದರ್ಶಿ ಜಯೇಂದ್ರ ನಿಡ್ಲೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಇಂದಬೆಟ್ಟು: ಕಲ್ಲಾಜೆ ನಿವಾಸಿ ಲಿಂಗಪ್ಪ ಗೌಡ ನಿಧನ

Suddi Udaya

ಜ.4: ಸುಲ್ಕೇರಿ ನೂತನ ಶ್ರೀ ನೇಮಿನಾಥ ಸಭಾಭವನ ಉದ್ಘಾಟನೆ

Suddi Udaya

ಕಣಿಯೂರು: ಮಲ್ಲಿಗೆ ಕೃಷಿ ಮಾಹಿತಿ ಹಾಗೂ ಗಿಡ ವಿತರಣಾ ಕಾರ್ಯಕ್ರಮ

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಬಿರುಸಿನ ಚುನಾವಣಾ ಪ್ರಚಾರ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಕಳೆಂಜ ಗ್ರಾ. ಪಂ. ನಲ್ಲಿ ಪ್ರತಿಭಟನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಪ್ರಾಂತ್ಯಾಧ್ಯಕ್ಷರ ಭೇಟಿ; ಪ್ರತಿಭಾ ಪುರಸ್ಕಾರ

Suddi Udaya
error: Content is protected !!