September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡದಿಂದ ಕಪಾಟು ಕೊಡುಗೆ

ರೆಖ್ಯ: ಇಲ್ಲಿಯ ಗ್ರಾಮೀಣ ಪ್ರದೇಶವಾದ ನೇಲ್ಯಡ್ಕದಲ್ಲಿರುವ ಸರ್ಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡ ವತಿಯಿಂದ ಶಾಲಾ ಕಚೇರಿಯ ಬಳಕೆಗೆ ಒಂದು ಕಪಾಟನ್ನು ಕೊಡುಗೆಯಾಗಿ ನೀಡಲಾಯಿತು.

ಬ್ಯಾಂಕ್ ಆಫ್ ಬರೋಡಾದ ಉದನೆ ಶಾಖೆಯ ಮ್ಯಾನೇಜರ್ ನಿತಿನ್ ಕೃಷ್ಣ ಅವರು ಕಪಾಟನ್ನು ಹಾಗೂ ನೇರಳೆ ಹಣ್ಣಿನ ಗಿಡವನ್ನು ಪ್ರೌಢಶಾಲೆಗೆ ಹಸ್ತಾಂತರಿಸಿ ಶುಭ ಹಾರೈಸಿದರು. ಸಂಸ್ಥೆಯ ಕೋರಿಕೆಯನ್ನು ಪರಿಗಣಿಸಿ ಪ್ರೌಢ ಶಾಲೆಗೆ ಕೊಡುಗೆಯನ್ನು ನೀಡಿದ ಬ್ಯಾಂಕಿಗೆ ಶಾಲಾ ಮುಖ್ಯೋಪಾಧ್ಯಾಯ ರಾಜೇಂದ್ರ ಕೃಷ್ಣ ಧನ್ಯವಾದಗಳನ್ನು ಸಲ್ಲಿಸಿದರು.

ಬ್ಯಾಂಕಿನ ಹಿರಿಯ ಅಧಿಕಾರಿ ಪೌಲೌಸ್ ಪಿ.ಸಿ. , ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಉದಯಕುಮಾರ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಅರವಿಂದ ಗೋಖಲೆ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ವಿಜಯಕುಮಾರ್ ವಂದಿಸಿದರು.

Related posts

ಪರೀಕ ‘ ಸೌಖ್ಯವನ’ ದಲ್ಲಿ ಸ್ವಾತಂತ್ರ್ಯ ದಿನಾಚರಣೆ:

Suddi Udaya

ಕಲ್ಲೇರಿಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ನೇತೃತ್ವದಲ್ಲಿ ಗೀತೆ ಜತೆ ಸಾಹಿತ್ಯ ಸಾಂಗತ್ಯ ಉಪನ್ಯಾಸ ಮಾಲಿಕೆಯ ಎರಡನೆಯ ಅಧ್ಯಾಯ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಸಂತ ತೆರೇಸಾ ಪ್ರೌಢಶಾಲೆಯಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರಯುಕ್ತ ಮಾಹಿತಿ ಕಾರ್ಯಾಗಾರ

Suddi Udaya

ಪಡ್ಡಂದಡ್ಕ: ಮಂಜನಬೆಟ್ಟು ಶ್ರೀ ನಾಗಬ್ರಹ್ಮ ಪರಿವಾರ ಸಾನಿಧ್ಯಗಳ ಪುನರ್ ಪ್ರತಿಷ್ಠೆ-ಎ.5 ನೂತನ ಶಿಲಾಮಯ ಶ್ರೀ ನಾಗದೇವರ ಬಿಂಬಗಳ ಜಲಾಧಿವಾಸ

Suddi Udaya

ಮುಡಿಪು ಜವಾಹರ್ ನವೋದಯ ಶಾಲೆಗೆ ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿ ಕು| ಯತಿಕ್ ಕೆ. ಎಸ್ ಆಯ್ಕೆ

Suddi Udaya
error: Content is protected !!