25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಚಿತ್ಪಾವನ ಸಂಘಟನೆ ವಾರ್ಷಿಕೋತ್ಸವ

ಮುಂಡಾಜೆ: ಇಲ್ಲಿಯ ಚಿತ್ಪಾವನ ಸಂಘಟನೆಯ ವಾರ್ಷಿಕೋತ್ಸವವು ಸನ್ಯಾಸಿಕಟ್ಟೆ ಶ್ರೀ ಪರಶುರಾಮ ದೇವಸ್ಥಾನದ ಸಭಾಭವನದಲ್ಲಿ ಜರಗಿತು.


ಹಿರಿಯ ಪತ್ರಕರ್ತ, ಯಕ್ಷಗಾನ ಕಲಾವಿದ ಶ್ರೀಕರ ಮರಾಠೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸಂಘಟನೆಗಳು ಬಲಗೊಂಡಾಗ ಸಮುದಾಯದಲ್ಲಿ ಒಗ್ಗಟ್ಟು ಹೆಚ್ಚುತ್ತದೆ. ಪ್ರತಿಭೆಗಳ ಅನಾವರಣಕ್ಕೆ, ಸಾಮಾಜಿಕ ಚಿಂತನೆಯ ದೃಷ್ಟಿಯಲ್ಲಿ ಉತ್ತಮ ಕಾರ್ಯಕ್ರಮಗಳು ಮೂಡಿ ಬರಬೇಕು ಎಂದು ಹೇಳಿದರು.


ಸಂಘಟನೆಯ ಅಧ್ಯಕ್ಷೆ ಸುಷ್ಮಾ ಶಶಾಂಕ ಭಿಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೃಷಿಕ ಸಂತೋಷ ಹೆಬ್ಬಾರ್, ಗೌರವಾಧ್ಯಕ್ಷ ಜಗದೀಶ ಆರ್.ಫಡಕೆ ಉಪಸ್ಥಿತರಿದ್ದರು.

ಸನ್ಮಾನ: ನಾನಾ ರಂಗಗಳಲ್ಲಿ ವಿಶಿಷ್ಟ ಸಾಧನೆಗೈದ ಸಮುದಾಯದ ಕೇಶವ ಫಡಕೆ (ಸಮಾಜ ಸೇವೆ), ಗೋವಿಂದ ಚಿಪಳೂಣಕರ್ (ಧಾರ್ಮಿಕ), ಡಾ. ಅಮಿತ್ ಖಾಡಿಲ್ಕರ್ (ವೈದ್ಯಕೀಯ), ಜ್ಯೋತಿ ದಿವಾಕರ ಚಿಪಳೂಣಕರ್ (ಸಾಮಾಜಿಕ ಸೇವೆ), ಸ್ವಾತಿ ಗೋಖಲೆ ಮತ್ತು ನೀತಾ ಗೋಖಲೆ (ಅಡುಗೆ), ವೆಂಕಟೇಶ ಬೆಂಡೆ (ಪತ್ರಕರ್ತ), ಅರ್ಜುನ್ ಎ. ಹೆಬ್ಬಾರ್ (ಭೂತಾರಾಧನೆ) ಇವರನ್ನು ಗೌರವಿಸಲಾಯಿತು.

ಸಂಘಟನೆಯ ಸದಸ್ಯರಿಂದ ಭಜನೆ, ಚಿತ್ಪಾವನಿ ಭಾಷೆಯ ನಾಟಕ, ಇತ್ಯಾದಿ ಕಾರ್ಯಕ್ರಮಗಳು ನಡೆದವು.

ಕಾರ್ಯದರ್ಶಿ ರಂಗನಾಥ ಹೆಬ್ಬಾರ್ ವರದಿ ವಾಚಿಸಿದರು. ಗೌರವಾಧ್ಯಕ್ಷ ವಾಸುದೇವ ಗೋಖಲೆ ಸ್ವಾಗತಿಸಿದರು.ಚಿತ್ರಾ ಧನಂಜಯ ಭಿಡೆ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ: ಓಡಲದಲ್ಲಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿ ಪರಾರಿ

Suddi Udaya

ಉಜಿರೆ: ಪಾಂಡುರಂಗ ಕಾಕತ್ಕರ್ ನಿಧನ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲಾ ವಿದ್ಯಾರ್ಥಿಗಳ ಸಂಸತ್ತಿನ ಚುನಾವಣೆ

Suddi Udaya

ಮಾ.6: ವೇಣೂರು ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ತಣ್ಣೀರುಪಂಥ ವಲಯ ಮತ್ತು ಜನಜಾಗೃತಿ ವೇದಿಕೆ ವತಿಯಿಂದ ಕರಾಯ ಸ. ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಅಳದಂಗಡಿ: ಇತ್ತೀಚೆಗೆ ಭಾರಿ ಗಾಳಿ , ಮಳೆಗೆ ಕುಸಿತಗೊಂಡ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ: ತಾತ್ಕಾಲಿಕ ಮನೆ ದುರಸ್ತಿಗೆ ನೆರವು

Suddi Udaya
error: Content is protected !!