33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಚಿತ್ಪಾವನ ಸಂಘಟನೆ ವಾರ್ಷಿಕೋತ್ಸವ

ಮುಂಡಾಜೆ: ಇಲ್ಲಿಯ ಚಿತ್ಪಾವನ ಸಂಘಟನೆಯ ವಾರ್ಷಿಕೋತ್ಸವವು ಸನ್ಯಾಸಿಕಟ್ಟೆ ಶ್ರೀ ಪರಶುರಾಮ ದೇವಸ್ಥಾನದ ಸಭಾಭವನದಲ್ಲಿ ಜರಗಿತು.


ಹಿರಿಯ ಪತ್ರಕರ್ತ, ಯಕ್ಷಗಾನ ಕಲಾವಿದ ಶ್ರೀಕರ ಮರಾಠೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸಂಘಟನೆಗಳು ಬಲಗೊಂಡಾಗ ಸಮುದಾಯದಲ್ಲಿ ಒಗ್ಗಟ್ಟು ಹೆಚ್ಚುತ್ತದೆ. ಪ್ರತಿಭೆಗಳ ಅನಾವರಣಕ್ಕೆ, ಸಾಮಾಜಿಕ ಚಿಂತನೆಯ ದೃಷ್ಟಿಯಲ್ಲಿ ಉತ್ತಮ ಕಾರ್ಯಕ್ರಮಗಳು ಮೂಡಿ ಬರಬೇಕು ಎಂದು ಹೇಳಿದರು.


ಸಂಘಟನೆಯ ಅಧ್ಯಕ್ಷೆ ಸುಷ್ಮಾ ಶಶಾಂಕ ಭಿಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೃಷಿಕ ಸಂತೋಷ ಹೆಬ್ಬಾರ್, ಗೌರವಾಧ್ಯಕ್ಷ ಜಗದೀಶ ಆರ್.ಫಡಕೆ ಉಪಸ್ಥಿತರಿದ್ದರು.

ಸನ್ಮಾನ: ನಾನಾ ರಂಗಗಳಲ್ಲಿ ವಿಶಿಷ್ಟ ಸಾಧನೆಗೈದ ಸಮುದಾಯದ ಕೇಶವ ಫಡಕೆ (ಸಮಾಜ ಸೇವೆ), ಗೋವಿಂದ ಚಿಪಳೂಣಕರ್ (ಧಾರ್ಮಿಕ), ಡಾ. ಅಮಿತ್ ಖಾಡಿಲ್ಕರ್ (ವೈದ್ಯಕೀಯ), ಜ್ಯೋತಿ ದಿವಾಕರ ಚಿಪಳೂಣಕರ್ (ಸಾಮಾಜಿಕ ಸೇವೆ), ಸ್ವಾತಿ ಗೋಖಲೆ ಮತ್ತು ನೀತಾ ಗೋಖಲೆ (ಅಡುಗೆ), ವೆಂಕಟೇಶ ಬೆಂಡೆ (ಪತ್ರಕರ್ತ), ಅರ್ಜುನ್ ಎ. ಹೆಬ್ಬಾರ್ (ಭೂತಾರಾಧನೆ) ಇವರನ್ನು ಗೌರವಿಸಲಾಯಿತು.

ಸಂಘಟನೆಯ ಸದಸ್ಯರಿಂದ ಭಜನೆ, ಚಿತ್ಪಾವನಿ ಭಾಷೆಯ ನಾಟಕ, ಇತ್ಯಾದಿ ಕಾರ್ಯಕ್ರಮಗಳು ನಡೆದವು.

ಕಾರ್ಯದರ್ಶಿ ರಂಗನಾಥ ಹೆಬ್ಬಾರ್ ವರದಿ ವಾಚಿಸಿದರು. ಗೌರವಾಧ್ಯಕ್ಷ ವಾಸುದೇವ ಗೋಖಲೆ ಸ್ವಾಗತಿಸಿದರು.ಚಿತ್ರಾ ಧನಂಜಯ ಭಿಡೆ ಕಾರ್ಯಕ್ರಮ ನಿರೂಪಿಸಿದರು.

Related posts

ಗಂಡಿಬಾಗಿಲು ಸಿಯೋನ್ ಆಶ್ರಮ : ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya

ಉದ್ಯಮಿ ಸುರೇಶ್ ದೇವಾಡಿಗರವರು ತೋಟತ್ತಾಡಿ ಶ್ರೀ ಉಳ್ಳಾಲ್ತಿ ಭಜನಾ ಮಂದಿರದ ಭಜನಾ ತಂಡದವರಿಗೆ ನೀಡಿದ ಸಮವಸ್ತ್ರದ ಬಿಡುಗಡೆ

Suddi Udaya

ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಯವರಿಗೆ ಲಯನ್ಸ್ ಕ್ಲಬ್ ನಿಂದ ಹುಟ್ಟುಹಬ್ಬದ ಶುಭಾಶಯ

Suddi Udaya

ಉಜಿರೆ ವಲಯ ವಾಲಿಬಾಲ್ ಪಂದ್ಯಾಟ: ಬೆಂದ್ರಾಳ ಸೈಂಟ್ ಸಾವಿಯೋ ಆಂ.ಮಾ. ಶಾಲೆ ಬಾಲಕ- ಬಾಲಕಿಯರ ವಿಭಾಗ ಪ್ರಥಮ

Suddi Udaya

ಗೇರುಕಟ್ಟೆ: ಪ್ರಗತಿಪರ ಕೃಷಿಕ ಕಲ್ಕುರ್ಣಿ ಪೆರ್ನು ಗೌಡ ನಿಧನ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದ್ವೇಷ ರಾಜಕೀಯ ಹಾಗೂ ಬೆಲೆ ಏರಿಕೆ ಖಂಡಿಸಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ

Suddi Udaya
error: Content is protected !!