25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಚಿತ್ಪಾವನ ಸಂಘಟನೆ ವಾರ್ಷಿಕೋತ್ಸವ

ಮುಂಡಾಜೆ: ಇಲ್ಲಿಯ ಚಿತ್ಪಾವನ ಸಂಘಟನೆಯ ವಾರ್ಷಿಕೋತ್ಸವವು ಸನ್ಯಾಸಿಕಟ್ಟೆ ಶ್ರೀ ಪರಶುರಾಮ ದೇವಸ್ಥಾನದ ಸಭಾಭವನದಲ್ಲಿ ಜರಗಿತು.


ಹಿರಿಯ ಪತ್ರಕರ್ತ, ಯಕ್ಷಗಾನ ಕಲಾವಿದ ಶ್ರೀಕರ ಮರಾಠೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸಂಘಟನೆಗಳು ಬಲಗೊಂಡಾಗ ಸಮುದಾಯದಲ್ಲಿ ಒಗ್ಗಟ್ಟು ಹೆಚ್ಚುತ್ತದೆ. ಪ್ರತಿಭೆಗಳ ಅನಾವರಣಕ್ಕೆ, ಸಾಮಾಜಿಕ ಚಿಂತನೆಯ ದೃಷ್ಟಿಯಲ್ಲಿ ಉತ್ತಮ ಕಾರ್ಯಕ್ರಮಗಳು ಮೂಡಿ ಬರಬೇಕು ಎಂದು ಹೇಳಿದರು.


ಸಂಘಟನೆಯ ಅಧ್ಯಕ್ಷೆ ಸುಷ್ಮಾ ಶಶಾಂಕ ಭಿಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೃಷಿಕ ಸಂತೋಷ ಹೆಬ್ಬಾರ್, ಗೌರವಾಧ್ಯಕ್ಷ ಜಗದೀಶ ಆರ್.ಫಡಕೆ ಉಪಸ್ಥಿತರಿದ್ದರು.

ಸನ್ಮಾನ: ನಾನಾ ರಂಗಗಳಲ್ಲಿ ವಿಶಿಷ್ಟ ಸಾಧನೆಗೈದ ಸಮುದಾಯದ ಕೇಶವ ಫಡಕೆ (ಸಮಾಜ ಸೇವೆ), ಗೋವಿಂದ ಚಿಪಳೂಣಕರ್ (ಧಾರ್ಮಿಕ), ಡಾ. ಅಮಿತ್ ಖಾಡಿಲ್ಕರ್ (ವೈದ್ಯಕೀಯ), ಜ್ಯೋತಿ ದಿವಾಕರ ಚಿಪಳೂಣಕರ್ (ಸಾಮಾಜಿಕ ಸೇವೆ), ಸ್ವಾತಿ ಗೋಖಲೆ ಮತ್ತು ನೀತಾ ಗೋಖಲೆ (ಅಡುಗೆ), ವೆಂಕಟೇಶ ಬೆಂಡೆ (ಪತ್ರಕರ್ತ), ಅರ್ಜುನ್ ಎ. ಹೆಬ್ಬಾರ್ (ಭೂತಾರಾಧನೆ) ಇವರನ್ನು ಗೌರವಿಸಲಾಯಿತು.

ಸಂಘಟನೆಯ ಸದಸ್ಯರಿಂದ ಭಜನೆ, ಚಿತ್ಪಾವನಿ ಭಾಷೆಯ ನಾಟಕ, ಇತ್ಯಾದಿ ಕಾರ್ಯಕ್ರಮಗಳು ನಡೆದವು.

ಕಾರ್ಯದರ್ಶಿ ರಂಗನಾಥ ಹೆಬ್ಬಾರ್ ವರದಿ ವಾಚಿಸಿದರು. ಗೌರವಾಧ್ಯಕ್ಷ ವಾಸುದೇವ ಗೋಖಲೆ ಸ್ವಾಗತಿಸಿದರು.ಚಿತ್ರಾ ಧನಂಜಯ ಭಿಡೆ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ಬಸ್ಸಿನಲ್ಲಿ ಮಹಿಳೆಯರ ಬಗ್ಗೆ ಅಶ್ಲೀಲ ಪದ ಬಳಕೆ:ಮೂವರ ಮೇಲೆ ಅಪರಿಚಿತರಿಂದ ಹಲ್ಲೆ; ಪ್ರಕರಣ ದಾಖಲು

Suddi Udaya

ಉಜಿರೆ: ಅತ್ತಾಜೆ ಅರಫಾ ಜಾಮಿಅಃ ಮಸ್ಜಿದ್ ನಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

Suddi Udaya

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಹ್ಯಾಪಿ ಕ್ಲಾಸ್ರೂಮ್’

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಒಂಟಿಸಲಗ ಪ್ರತ್ಯಕ್ಷ: ವಾಹನ ಸವಾರರ ಪರದಾಟ

Suddi Udaya

ಬಿಯರ್ ಬಾಟಲಿಯಿಂದ ಇರಿದು ಚಿಕ್ಕಪ್ಪನನ್ನೇ ಕೊಲೆಗೈದ ಯುವಕ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!