25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಚಿತ್ಪಾವನ ಸಂಘಟನೆ ವಾರ್ಷಿಕೋತ್ಸವ

ಮುಂಡಾಜೆ: ಇಲ್ಲಿಯ ಚಿತ್ಪಾವನ ಸಂಘಟನೆಯ ವಾರ್ಷಿಕೋತ್ಸವವು ಸನ್ಯಾಸಿಕಟ್ಟೆ ಶ್ರೀ ಪರಶುರಾಮ ದೇವಸ್ಥಾನದ ಸಭಾಭವನದಲ್ಲಿ ಜರಗಿತು.


ಹಿರಿಯ ಪತ್ರಕರ್ತ, ಯಕ್ಷಗಾನ ಕಲಾವಿದ ಶ್ರೀಕರ ಮರಾಠೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸಂಘಟನೆಗಳು ಬಲಗೊಂಡಾಗ ಸಮುದಾಯದಲ್ಲಿ ಒಗ್ಗಟ್ಟು ಹೆಚ್ಚುತ್ತದೆ. ಪ್ರತಿಭೆಗಳ ಅನಾವರಣಕ್ಕೆ, ಸಾಮಾಜಿಕ ಚಿಂತನೆಯ ದೃಷ್ಟಿಯಲ್ಲಿ ಉತ್ತಮ ಕಾರ್ಯಕ್ರಮಗಳು ಮೂಡಿ ಬರಬೇಕು ಎಂದು ಹೇಳಿದರು.


ಸಂಘಟನೆಯ ಅಧ್ಯಕ್ಷೆ ಸುಷ್ಮಾ ಶಶಾಂಕ ಭಿಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೃಷಿಕ ಸಂತೋಷ ಹೆಬ್ಬಾರ್, ಗೌರವಾಧ್ಯಕ್ಷ ಜಗದೀಶ ಆರ್.ಫಡಕೆ ಉಪಸ್ಥಿತರಿದ್ದರು.

ಸನ್ಮಾನ: ನಾನಾ ರಂಗಗಳಲ್ಲಿ ವಿಶಿಷ್ಟ ಸಾಧನೆಗೈದ ಸಮುದಾಯದ ಕೇಶವ ಫಡಕೆ (ಸಮಾಜ ಸೇವೆ), ಗೋವಿಂದ ಚಿಪಳೂಣಕರ್ (ಧಾರ್ಮಿಕ), ಡಾ. ಅಮಿತ್ ಖಾಡಿಲ್ಕರ್ (ವೈದ್ಯಕೀಯ), ಜ್ಯೋತಿ ದಿವಾಕರ ಚಿಪಳೂಣಕರ್ (ಸಾಮಾಜಿಕ ಸೇವೆ), ಸ್ವಾತಿ ಗೋಖಲೆ ಮತ್ತು ನೀತಾ ಗೋಖಲೆ (ಅಡುಗೆ), ವೆಂಕಟೇಶ ಬೆಂಡೆ (ಪತ್ರಕರ್ತ), ಅರ್ಜುನ್ ಎ. ಹೆಬ್ಬಾರ್ (ಭೂತಾರಾಧನೆ) ಇವರನ್ನು ಗೌರವಿಸಲಾಯಿತು.

ಸಂಘಟನೆಯ ಸದಸ್ಯರಿಂದ ಭಜನೆ, ಚಿತ್ಪಾವನಿ ಭಾಷೆಯ ನಾಟಕ, ಇತ್ಯಾದಿ ಕಾರ್ಯಕ್ರಮಗಳು ನಡೆದವು.

ಕಾರ್ಯದರ್ಶಿ ರಂಗನಾಥ ಹೆಬ್ಬಾರ್ ವರದಿ ವಾಚಿಸಿದರು. ಗೌರವಾಧ್ಯಕ್ಷ ವಾಸುದೇವ ಗೋಖಲೆ ಸ್ವಾಗತಿಸಿದರು.ಚಿತ್ರಾ ಧನಂಜಯ ಭಿಡೆ ಕಾರ್ಯಕ್ರಮ ನಿರೂಪಿಸಿದರು.

Related posts

ಚೆಕ್ ಬೌನ್ಸ್ ಪ್ರಕರಣ: ನ್ಯಾಯಾಲಯಕ್ಕೆ ಐದು ವರ್ಷ ಹಾಜರಾಗದ ಆರೋಪಿಯ ಬಂಧನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಏಳನೇ ದಿನದ ಬ್ರಹ್ಮ ಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಕಳೆಂಜ: ಪಲ್ಲದಂಗಡಿ, ಕಾಂತ್ರೇಲು ಹಾಗೂ ಹತ್ಯಡ್ಕದ ಮುದ್ದಿಗೆ, ಕುಂಟಾಲಪಳಿಕೆ ಕೆಎಸ್ ಆರ್ ಟಿಸಿ ಬಸ್ಸು ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ ಮುದ್ದಿಗೆಯ ಗ್ರಾಮಸ್ಥರು

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂ.ಮಾ. ಶಾಲೆಯಲ್ಲಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಆಚರಣೆ

Suddi Udaya

ಕಳೆಂಜ: ನಂದಗೋಕುಲ ಗೋಶಾಲೆಗೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ಕಳೆಂಜ : ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಕಾಯರ್ತಡ್ಕ ಕುಲಾಡಿ ಸಂಪರ್ಕ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಪೂರ್ಣ

Suddi Udaya
error: Content is protected !!