22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎ.12: ಅಳದಂಗಡಿ ಹನುಮೋತ್ಸವ ಕಾರ್ಯಕ್ರಮದಲ್ಲಿ ಶ್ರೀರಾಮ ಕ್ಷೇತ್ರದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಶ್ರೀಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜರವರಿಗೆ “ಮಹಾಭಿವಂದ್ಯ” ಗೌರವಾಭಿನಂದನೆ

ಬೆಳ್ತಂಗಡಿ: ಭಾರತದ ನಾಗಾಸಾಧು ಸನ್ಯಾಸಿ ಪರಂಪರೆಯಲ್ಲಿ ಕರ್ನಾಟಕದ ಮೊದಲ ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಧರ್ಮಸ್ಥಳ, ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಶ್ರೀಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ ಇವರಿಗೆ ಭಕ್ತಿಪೂರ್ವಕ ಗೌರವಾಭಿನಂದನೆ ಮಹಾಭಿವಂದ್ಯ ಎ.12 ರಂದು ಅಳದಂಗಡಿ ಸತ್ಯದೇವತಾ ವಠಾರದಲ್ಲಿ ನಡೆಯಲಿದೆ ಎಂದು ಹನುಮೋತ್ಸವ ಸಮಿತಿ ಅಧ್ಯಕ್ಷ ಸಂಪತ್ ಬಿ ಸುವರ್ಣ ತಿಳಿಸಿದ್ದಾರೆ.

ದೀಪ ಪ್ರಜ್ವಲನೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ನೆರವೇರಿಸಲಿದ್ದಾರೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಧಾರ್ಮಿಕ ಉಪನ್ಯಾಸಕ ನೀಡಲಿದ್ದಾರೆ‌.

ಮುಖ್ಯ ಅತಿಥಿಗಳಾಗಿ ದ.ಕ ಸಂಸದರು ಕ್ಯಾ.ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟಾ ಶ್ರೀನಿವಾಸ ಪೂಜಾರಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಬೆಳ್ತಂಗಡಿ ಮಾಜಿ ಶಾಸಕ ಪ್ರಭಾಕರ ಬಂಗೇರ,ಗುಜರಾತ್ ತುಳುಕೂಟ ಅಧ್ಯಕ್ಷ ಶಶಿಧ‌ರ್ ಶೆಟ್ಟಿ ನವಶಕ್ತಿ,ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನದ ಆಡಳಿತ ಮೊಕ್ತೇಸರಾದ ಶಿವಪ್ರಸಾದ್ ಅಜಿಲ,ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ ಸಂಚಾಲಕ ಮೋಹನ್ ಕುಮಾರ್, ಎಕ್ಸೆಲ್ ಕಾಲೇಜು ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಂಪತ್ ಬಿ ಸುವರ್ಣ ತಿಳಿಸಿದರು.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 13 ದಿನಗಳ ಕಾಲ ನಡೆದೆ ಸಿಸಿ ಕ್ಯಾಮರ ಆಳವಡಿಕೆ ಮತ್ತು ದುರಸ್ತಿ ತರಬೇತಿಯ ಸಮಾರೋಪ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಮನ್ಸೂನ್ ಸ್ಪೆಷಲ್ ಆಫರ್

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ: ಸ್ಥಳ ಮಹಜರು ನಡೆಸಿ ಧರ್ಮಸ್ಥಳ ಠಾಣೆಗೆ ಬಂದ ಎಸ್.ಐ.ಟಿ ತಂಡ

Suddi Udaya

ಪಾಲ್ತಾಡಿ ರಾಮಕೃಷ್ಣ ಆಚಾರ್ಯ ರವರ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಇತ್ತೀಚೆಗೆ ಮೃತಪಟ್ಟ ಬೂಡುಮುಗೇರು ತೇಜಸ್ವಿನಿಯವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಶ್ರೀಮತಿ ಉಮಾವತಿ ರುಕ್ಮಯ ಗೌಡ ರವರಿಗೆ ರಾಜ್ಯಪಾಲರಿಂದ ಘಟಿಕೋತ್ಸವದಲ್ಲಿ ರ್‍ಯಾಂಕ್ ಪದವಿ ಪ್ರಶಸ್ತಿ ಪ್ರದಾನ

Suddi Udaya
error: Content is protected !!