22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಿಂದ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನ ಮತ್ತು ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ ಆದೇಶ

ಬೆಳ್ತಂಗಡಿ: ಬೆಂಗಳೂರು ನಗರ ಸಿವಿಲ್ ನ್ಯಾಯಾಲಯವು OS 2145/2025 ಪ್ರಕರಣದಲ್ಲಿ ಜಾನ್ ಡೋ (ಅಶೋಕಕುಮಾರ್) ಆದೇಶ ನೀಡಿದೆ. ಈ ಆದೇಶದಂತೆ, ಯಾರೇ ಆಗಿದ್ದರೂ ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಅವರ ಕುಟುಂಬದ ಸದಸ್ಯರು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಸಂಬಂಧಿತ ಸಂಸ್ಥೆಗಳ ವಿರುದ್ಧ ಅವಹೇಳನಕಾರಿ ಮತ್ತು ಅಪಪ್ರಚಾರ ಮಾಡುವ ಮಾಹಿತಿಯನ್ನು ಪ್ರಕಟಿಸಲು ಅಥವಾ ಹರಡಲು ಆಗುವುದಿಲ್ಲ.

ಜಾನ್ ಡೋ (ಅಶೋಕಕುಮಾರ್) ಆದೇಶ ಎಂದರೇನು?
-ಜಾನ್ ಡೋ (ಅಶೋಕಕುಮಾರ್) ಆದೇಶ ಎಂದರೆ, ಅಜ್ಞಾತ ಅಥವಾ ಪತ್ತೆಯಾಗದ ವ್ಯಕ್ತಿಗಳ ವಿರುದ್ಧವೂ ಜಾರಿಯಾಗುವ ಕಾನೂನು ಕ್ರಮ.
-ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾ ಮತ್ತು ಇತರ ಆನ್‌ಲೈನ್ ತಾಣಗಳಲ್ಲಿ ಅವಹೇಳನಕಾರಿ ಮತ್ತು ಅಪಪ್ರಚಾರ ಹೆಚ್ಚಿರುವ ಕಾರಣ, ಇದನ್ನು ತಡೆಯಲು ಈ ಆದೇಶ ಬಹಳ ಪ್ರಮುಖವಾಗಿದೆ.

ಈ ಆದೇಶದ ಮಹತ್ವ: ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀ ಕ್ಷೇತ್ರ ಧರ್ಮಸ್ಥಳದ ಸಂಸ್ಥೆಗಳು ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ವಿರುದ್ಧ ಯಾವುದೇ ಅವಹೇಳನಕಾರಿ ಅಪಪ್ರಚಾರವನ್ನು ಪ್ರಕಟಿಸುವುದು, ಹಂಚಿಕೊಳ್ಳುವುದು ಅಥವಾ ಹರಡುವುದು ನಿಷೇಧಿಸಲಾಗಿದೆ.

ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದರೆ, ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು

ಈ ಆದೇಶದ ಪ್ರಕಾರ, ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮ ಸಂಸ್ಥೆಗಳು ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಯಾವುದೇ ಅವಹೇಳನಕಾರಿ ವಿಚಾರ ಹಂಚಿಕೊಂದಿದ್ದಲ್ಲಿ ತಕ್ಷಣ ಅಳಿಸಿಹಾಕುವುದು ಮತ್ತು ಮುಂದುವರಿಸಿದ್ದಲ್ಲಿ ನ್ಯಾಯಾಲಯದ ಆದೇಶ ಉಲ್ಲಂಘನೆ ಆಗುವ ಸಾಧ್ಯತೆ ಇರುತ್ತದೆ.
ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ಗೌರವ ಹಾಗೂ ಪ್ರತಿಷ್ಠೆಯನ್ನು ರಕ್ಷಿಸಲು ಮತ್ತು ಅಪಪ್ರಚಾರ ತಡೆಯಲು ಮಹತ್ವದ ಆದೇಶವಾಗಿದೆ.

ಈ ಪ್ರಕರಣವನ್ನು ಹಿರಿಯ ನ್ಯಾಯವಾದಿ ಎಸ್. ರಾಜಶೇಖರ್ ಹಿಳಿಯಾರು ರವರು ಶ್ರೀ ಕ್ಷೇತ್ರ ಧರ್ಮಸ್ಥಳ ಪರ ವಾದಿಸಿದರು.

Related posts

ಗೇರುಕಟ್ಟೆ ಸಮೀಪದ ಬಟ್ಟೆಮಾರು ಎಂಬಲ್ಲಿ ಬೈಹುಲ್ಲು ಟ್ರಕ್ ಗೆ ಬೆಂಕಿ ಅವಘಡ

Suddi Udaya

ಬೆಳ್ತಂಗಡಿ ಜೈನ ಬಸದಿ ಬಳಿ ಕಾರುಗಳೆರಡು ಪರಸ್ಪರ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

Suddi Udaya

ರೇಷ್ಮೆರೋಡ್ ಶಕ್ತಿ ಯುವಕ ಮಂಡಲದಿಂದ ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವ ಪ್ರಯುಕ್ತ ಭೂಮಿ ಪೂಜೆ

Suddi Udaya

ಮೈರೋಳ್ತಡ್ಕ ಪುತ್ತಿಲ ನಿವಾಸಿ ಕಮಲ ನಿಧನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ವಾರ್ಷಿಕ ಮಹಾಸಭೆ ಹಾಗೂ ಸಮಿತಿ ರಚನೆ

Suddi Udaya
error: Content is protected !!