25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಸ.ಪ್ರ.ದ. ಕಾಲೇಜಿನಲ್ಲಿ ಸಹಕಾರಿ ಕ್ಷೇತ್ರದಲ್ಲಿರುವ ಉದ್ಯೋಗವಕಾಶಗಳ ಬಗ್ಗೆ ಕಾರ್ಯಾಗಾರ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಕರ್ನಾಟಕ ರಾಜ್ಯ ಸಹಕಾರ ಮಂಡಲ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಹಾಗೂ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಕೋಶ, ವಾಣಿಜ್ಯ ಸಂಘ, ಪ್ಲೇಸ್ಮೆಂಟ್ ಸೆಲ್, ಯುವ ರೆಡ್ ಕ್ರಾಸ್ ಘಟಕ ಮತ್ತು ರೋವರ್ಸ್ -ರೇಂಜರ್ಸ್ ಘಟಕಗಳ ಸಹಯೋಗದಲ್ಲಿ ಮಾ.25 ರಂದು ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಸಹಕಾರಿ ಕ್ಷೇತ್ರದಲ್ಲಿರುವ ಉದ್ಯೋಗಾವಕಾಶಗಳು ಹಾಗೂ ಡಿಪ್ಲೋಮೋ ಮತ್ತು ಸರ್ಟಿಫಿಕೇಟ್ ಕೋರ್ಸ್ ಗಳ ಬಗ್ಗೆ ಯುವಜನರ ಕ್ಲಸ್ಟರ್ ತರಗತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು.

ಕಾರ್ಯಾಗಾರದಲ್ಲಿ ಮಂಗಳೂರಿನ ಸಹಕಾರಿ ಯೂನಿಯನ್ ನ ಕಾರ್ಯನಿರ್ವಹಣಾಧಿಕಾರಿ ಎಸ್ ವಿ ಹಿರೇಮಠ್ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸಹಕಾರಿ ಕ್ಷೇತ್ರದಲ್ಲಿರುವ ವಿವಿಧ ಉದ್ಯೋಗವಕಾಶಗಳು ಮತ್ತು ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ತರಬೇತಿಯನ್ನು ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ವಿ. ಕಾರ್ಯಕ್ರಮದಲ್ಲಿ ಮಂಗಳೂರು ಸಹಕಾರಿ ಯೂನಿಯನ್ ನ ವ್ಯವಸ್ಥಾಪಕ ನಾಗಪ್ರಸಾದ್ , ಪ್ಲೇಸ್ಮೆಂಟ್ ಅಧಿಕಾರಿಗಳಾದ ಪ್ರೊ. ರಶ್ಮಿ ಎಚ್., ಐಕ್ಯೂಎಸಿ ಸಂಚಾಲಕರಾದ ಡಾ| ಕುಶಾಲಪ್ಪ ಎಸ್ ಉಪಸ್ಥಿತರಿದ್ದರು.

ಯುವ ರೆಡ್ ಕ್ರಾಸ್ ಘಟಕದ ಸಂಚಾಲಕರಾದ ರೋವರ್ ಸ್ಕೌಟ್ ಲೀಡರ್ ಡಾ| ರವಿ ಎಂ. ಎನ್., ಸ್ವಾಗತಿಸಿ, ವಾಣಿಜ್ಯ ಸಂಘ ಸಂಚಾಲಕರಾದ ಪ್ರೊ| ನವೀನ ವಂದಿಸಿದರು.

Related posts

ಶಿರ್ಲಾಲು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಎಸ್ .ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ 10ನೇ ಸ್ಥಾನ ಪಡೆದ ತ್ರಿಷಾ ರಿಗೆ ಸನ್ಮಾನ

Suddi Udaya

ಮೇಲಂತಬೆಟ್ಟು ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವದ ಪ್ರಯುಕ್ತ ಸ್ಮರಣ ಸಂಚಿಕೆ ಬಿಡುಗಡೆ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನ್ನು ನೀಡಬೇಕು: ಪ್ರತಾಪ್ ಸಿಂಹ ನಾಯಕ್

Suddi Udaya

ರಾಜ್ಯ ಮಟ್ಟದ ಪ್ರಕೃತಿ ಚಿಕಿತ್ಸೆ,ಯೋಗ ಹಾಗೂ ಪೌಷ್ಠಿಕ ಆಹಾರ ಮಾಹಿತಿ ಶಿಬಿರದ ಸಮಾರೋಪ

Suddi Udaya

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ: ಚಿನ್ನಾಭರಣ, ನಗದು ದೋಚಿ ಪರಾರಿ

Suddi Udaya
error: Content is protected !!