23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಸ.ಪ್ರ.ದ. ಕಾಲೇಜಿನಲ್ಲಿ ಸಹಕಾರಿ ಕ್ಷೇತ್ರದಲ್ಲಿರುವ ಉದ್ಯೋಗವಕಾಶಗಳ ಬಗ್ಗೆ ಕಾರ್ಯಾಗಾರ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಕರ್ನಾಟಕ ರಾಜ್ಯ ಸಹಕಾರ ಮಂಡಲ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಹಾಗೂ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಕೋಶ, ವಾಣಿಜ್ಯ ಸಂಘ, ಪ್ಲೇಸ್ಮೆಂಟ್ ಸೆಲ್, ಯುವ ರೆಡ್ ಕ್ರಾಸ್ ಘಟಕ ಮತ್ತು ರೋವರ್ಸ್ -ರೇಂಜರ್ಸ್ ಘಟಕಗಳ ಸಹಯೋಗದಲ್ಲಿ ಮಾ.25 ರಂದು ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಸಹಕಾರಿ ಕ್ಷೇತ್ರದಲ್ಲಿರುವ ಉದ್ಯೋಗಾವಕಾಶಗಳು ಹಾಗೂ ಡಿಪ್ಲೋಮೋ ಮತ್ತು ಸರ್ಟಿಫಿಕೇಟ್ ಕೋರ್ಸ್ ಗಳ ಬಗ್ಗೆ ಯುವಜನರ ಕ್ಲಸ್ಟರ್ ತರಗತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು.

ಕಾರ್ಯಾಗಾರದಲ್ಲಿ ಮಂಗಳೂರಿನ ಸಹಕಾರಿ ಯೂನಿಯನ್ ನ ಕಾರ್ಯನಿರ್ವಹಣಾಧಿಕಾರಿ ಎಸ್ ವಿ ಹಿರೇಮಠ್ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸಹಕಾರಿ ಕ್ಷೇತ್ರದಲ್ಲಿರುವ ವಿವಿಧ ಉದ್ಯೋಗವಕಾಶಗಳು ಮತ್ತು ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ತರಬೇತಿಯನ್ನು ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ವಿ. ಕಾರ್ಯಕ್ರಮದಲ್ಲಿ ಮಂಗಳೂರು ಸಹಕಾರಿ ಯೂನಿಯನ್ ನ ವ್ಯವಸ್ಥಾಪಕ ನಾಗಪ್ರಸಾದ್ , ಪ್ಲೇಸ್ಮೆಂಟ್ ಅಧಿಕಾರಿಗಳಾದ ಪ್ರೊ. ರಶ್ಮಿ ಎಚ್., ಐಕ್ಯೂಎಸಿ ಸಂಚಾಲಕರಾದ ಡಾ| ಕುಶಾಲಪ್ಪ ಎಸ್ ಉಪಸ್ಥಿತರಿದ್ದರು.

ಯುವ ರೆಡ್ ಕ್ರಾಸ್ ಘಟಕದ ಸಂಚಾಲಕರಾದ ರೋವರ್ ಸ್ಕೌಟ್ ಲೀಡರ್ ಡಾ| ರವಿ ಎಂ. ಎನ್., ಸ್ವಾಗತಿಸಿ, ವಾಣಿಜ್ಯ ಸಂಘ ಸಂಚಾಲಕರಾದ ಪ್ರೊ| ನವೀನ ವಂದಿಸಿದರು.

Related posts

ಮಾವು ಮತ್ತು ಹಲಸು ಮೇಳಕ್ಕೆ ಅರ್ಜಿ ಆಹ್ವಾನ

Suddi Udaya

ಭಾರತೀಯ ಸಾಂಸ್ಕೃತಿಕ ವಿಕಾಸಕ್ಕಾಗಿ ನರೇಂದ್ರ ಮೋದಿಜೀಯವರು ಮತ್ತೊಮ್ಮೆ ಪ್ರಧಾನಿಯಾಗಲು ಕ್ಯಾ| ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿಯವರನ್ನು ಗೆಲ್ಲಿಸಿ ಸಂಸ್ಕಾರ ಭಾರತೀ ಬೆಳ್ತಂಗಡಿ ಘಟಕ ಮತ್ತು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಹೇಳಿಕೆ

Suddi Udaya

ಇಂದಬೆಟ್ಟು: ಹೆಬ್ಬಾವನ್ನು ಬೇಟೆಯಾಡಿದ ಕಾಳಿಂಗ ಸರ್ಪ: ಸ್ನೇಕ್ ಅಶೋಕ್ ರವರಿಂದ ಹೆಬ್ಬಾವು ರಕ್ಷಣೆ

Suddi Udaya

ಸುಲ್ಕೇರಿ: ಬ್ರಹ್ಮಗಿರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಸಮಾರೋಪ ಸಮಾರಂಭ ಪ್ರತಿಭಾ ದಿನ

Suddi Udaya
error: Content is protected !!