September 6, 2026
ಗ್ರಾಮಾಂತರ ಸುದ್ದಿ

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಸ್ಟಾನ (ರಿ) ಪ್ರಾಯೋಜಿತ ಬಟ್ಟೆಯ ಕಸೂತಿ ಆರಿ ಕೌಶಲ್ಯ ಸ್ವ ಉದ್ಯೋಗ ತರಬೇತಿಯ ಸಮಾರೋಪ ಕಾರ್ಯಕ್ರಮ

ಬೆಳ್ತಂಗಡಿ :ಬ್ಯಾಂಕ್ ಒಫ್ ಬರೋಡ ಪ್ರವರ್ತಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ನೇತೃತ್ವದಲ್ಲಿ, 15 ದಿನಗಳ ಬಟ್ಟೆ ಕಸೂತಿ ತಯಾರಿಕೆಯ(ಆರಿ ವರ್ಕ್ )ತರಬೇತಿಯ ಸಮಾರೋಪ ಕಾರ್ಯಕ್ರಮ ಕಲ್ಲೇರಿ ಹಾಲು ಉತ್ಪಾದಕರ ಸೊಸೈಟಿ ಸಭಾಂಗಣದಲ್ಲಿ ನಡೆಯಿತು.

ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ತಾಪಕರಾದ ಜೀವನ್ ಕೊಲ್ಯ ತರಬೇತಿಯಲ್ಲಿ ಭಾಗವಹಿಸಿದ ಮಹಿಳೆಯರಿಗೆ ಸ್ವ ಉದ್ಯೋಗ ಮಾಡಲು ಮಾಹಿತಿ ನೀಡಿದರು.ಬಹಳ ನಾಜುಕಾದ ತರಬೇತಿಯನ್ನು ಉತ್ತಮ ಮಟ್ಟದಲ್ಲಿ ಪಡೆದ ಮಹಿಳೆಯರಿಗೆ ಹುರಿದುಂಬಿಸಿ ಮುಂದೆ ಹೆಚ್ಚಿನ ಕೌಶಲ್ಯ ಪಡೆಯಲು ಪ್ರೇರೇಪಿಸಿದರು. ಇಂದಿನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕಲ್ಲೇರಿ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿಯಾದ ಜಯರಾಜ್ ಜೈನ್ ಇವರು ಮಹಿಳೆಯರು ಸಣ್ಣ ಅವಧಿಯಲ್ಲಿ ಹೆಚ್ಚಿನ ಕೌಶಲ್ಯ ದ ತರಬೇತಿ ಪಡೆದ ಬಗ್ಗೆ ಪ್ರಶಂಸೆ ವ್ಯಕ್ತ ಪಡಿಸಿದರು. ತರಬೇತಿ ಪಡೆದ ಮಹಿಳೆಯರು ತರಬೇತಿ ಬಗ್ಗೆ ತಮ್ಮ ಅನಿಸಿಕೆ ತಿಳಿಸಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಕಲ್ಲೇರಿ ಹಾಲು ಉತ್ಪಾದಕರ ಸಂಘದ ಸಿಬ್ಬಂದಿ ಪ್ರಮಿಳಾ, ತರಬೇತುದಾರರಾದ ಶುಭ ಲಕ್ಷ್ಮಿ, ಟೈಲರಿಂಗ್ ತರಬೇತುದಾರರಾದ ಮೀನಾಕ್ಷಿ ಉಪಸ್ಥಿತರಿದ್ದರು.ಕಲ್ಲೇರಿ ಗ್ರಾಮ ವ್ಯಾಪ್ತಿಯ ಸುತ್ತ ಮುತ್ತ ಊರಿನ ಸುಮಾರು 22 ಮಹಿಳೆಯರು ಈ 15 ದಿವಸದ ತರಬೇತಿ ಪಡೆದು ಪ್ರಮಾಣ ಪತ್ರವನ್ನು ಪಡೆದರು.ಸ್ನೇಹಾ ಭಟ್ ಕಾರ್ಯಕ್ರಮ ನಿರೂಪಿಸಿ,ಸುಮಲತಾ ಇವರು ಸ್ವಾಗತಿಸಿದರು, ಶಿಲ್ಪಾ ಇವರು ಧನ್ಯವಾದಗೈದರು

Related posts

ಬುರುಡೆ ಪ್ರಕರಣ ಸಂಬಂಧ ನಾಲ್ಕು ಜನರಿಗೆ ಎಸ್.ಐ‌.ಟಿ‌ ವಿಚಾರಣೆಗೆ ನೋಟಿಸ್ ಜಾರಿ

Suddi Udaya

ಬೆಳ್ತಂಗಡಿ: ದ್ವೇಷ ಭಾಷಣ ಆರೋಪ- ವಿ.ಹಿಂ.ಪ. ನ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಫೆ.5-6: ಶಿಬಾಜೆ ಶ್ರೀಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶತಚಂಡಿಕಾಯಾಗ ಮತ್ತು ನವೀಕೃತ ರಾಜಾಂಗಣದ ಲೋಕಾರ್ಪಣೆ

Suddi Udaya

ಆಳ್ವಾಸ್ ಕಾಲೇಜು: ಡಾ. ನರಹಳ್ಳಿ ಬಾಲಸುಬ್ರಮಣ್ಯ ಮತ್ತು ಜೀವನ: ಒಂದು ಪಟ್ಟಾಂಗ – ಪ್ರೀತಿಯ ಸಖ್ಯ” ವಿಶೇಷ ಕಾರ್ಯಕ್ರಮ

Suddi Udaya

ಕಡಿರುದ್ಯಾವರ : ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯೆಯ ಮನೆ ದುರಸ್ತಿ ಕಾರ್ಯ ನಡೆಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು

Suddi Udaya
error: Content is protected !!